AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gujarat Politics: ಗುಜರಾತ್​ ಮುಂದಿನ ಸಿಎಂ ಆಯ್ಕೆಗೆ ಶಾಸಕಾಂಗ ಪಕ್ಷದ ಸಭೆ; ಹೆಚ್ಚಿದ ಕುತೂಹಲ

Gujarat Next CM: ಕೇಂದ್ರದ ಬಿಜೆಪಿ ವೀಕ್ಷಕರಾಗಿ ಜೋಶಿ, ತೋಮರ್​ ಆಗಮಿಸಿದ್ದಾರೆ. ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ, ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್ ಮಾಂಡವೀಯ, ನಿತಿನ್ ಪಟೇಲ್, ಸಿ.ಆರ್. ಪಾಟೀಲ್ ಕೂಡ ಭೇಟಿ ನೀಡಿ ಭಾಗವಹಿಸಿದ್ದಾರೆ.

Gujarat Politics: ಗುಜರಾತ್​ ಮುಂದಿನ ಸಿಎಂ ಆಯ್ಕೆಗೆ ಶಾಸಕಾಂಗ ಪಕ್ಷದ ಸಭೆ; ಹೆಚ್ಚಿದ ಕುತೂಹಲ
ಶಾಸಕಾಂಗ ಪಕ್ಷದ ಸಭೆಗೆ ಆಗಮಿಸಿದ ವಿಜಯ್ ರೂಪಾನಿ
TV9 Web
| Updated By: ganapathi bhat|

Updated on: Sep 12, 2021 | 2:49 PM

Share

ಗಾಂಧಿನಗರ: ಗುಜರಾತ್‌ನ ಮುಖ್ಯಮಂತ್ರಿ ಸ್ಥಾನಕ್ಕೆ ವಿಜಯ್ ರೂಪಾನಿ ನಿನ್ನೆ (ಸಪ್ಟೆಂಬರ್ 11) ರಾಜೀನಾಮೆ ನೀಡಿದ್ದಾರೆ. ದಿಢೀರ್ ರಾಜೀನಾಮೆ ಬೆನ್ನಲ್ಲೇ ನೂತನ ಸಿಎಂ ಆಯ್ಕೆಗೆ ಇಂದು ಬಿಎಲ್‌ಪಿ ಸಭೆ ನಡೆಸಿದೆ. ಗುಜರಾತ್​ನ ಗಾಂಧಿನಗರದ ಬಿಜೆಪಿ ಕಚೇರಿಯಲ್ಲಿ ಸಭೆ ನಡೆಸಲಾಗಿದೆ. ಸಭೆಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹಾಗೂ ನರೇಂದ್ರ ಸಿಂಗ್ ತೋಮರ್​ ಆಗಮಿಸಿದ್ದಾರೆ. ಕೇಂದ್ರದ ಬಿಜೆಪಿ ವೀಕ್ಷಕರಾಗಿ ಜೋಶಿ, ತೋಮರ್​ ಆಗಮಿಸಿದ್ದಾರೆ. ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ, ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್ ಮಾಂಡವೀಯ, ನಿತಿನ್ ಪಟೇಲ್, ಸಿ.ಆರ್. ಪಾಟೀಲ್ ಕೂಡ ಭೇಟಿ ನೀಡಿ ಭಾಗವಹಿಸಿದ್ದಾರೆ.

ಗುಜರಾತ್ ಸಿಎಂ ವಿಜಯ್ ರೂಪಾನಿ ರಾಜೀನಾಮೆ ಹಿನ್ನೆಲೆಯಲ್ಲಿ, ಇಂದು ಗಾಂಧಿನಗರದಲ್ಲಿ ಬಿಜೆಪಿ ಶಾಸಕಾಂಗ ಸಭೆ ನಡೆಸಲಿರುವ ಬಗ್ಗೆ ನಿನ್ನೆಯೇ ಹೇಳಲಾಗಿತ್ತು. ಇಂದೇ ನೂತನ ಸಿಎಂ ಆಯ್ಕೆ ಮಾಡಲು ಬಿಎಲ್​​ಪಿ ಸಭೆ ನಡೆಸುತ್ತದೆ ಎನ್ನಲಾಗಿತ್ತು. ಈ ಮಧ್ಯೆ, ಕರ್ನಾಟಕವೂ ಸಹಿತ ಹಲವು ರಾಜ್ಯಗಳಲ್ಲಿ ಬಿಜೆಪಿ ಅನುಸರಿಸಿರುವ ಮುಖ್ಯಮಂತ್ರಿ ಬದಲಾವಣೆ ತಂತ್ರ ಗುಜರಾತ್​​ನಲ್ಲೂ ನಡೆದಿದೆ ಎಂದು ಹೇಳಲಾಗಿದೆ. ವಿಧಾನಸಭಾ ಚುನಾವಣೆಗೆ ಇನ್ನು ಒಂದೇ ವರ್ಷ ಬಾಕಿ ಉಳಿದಿರುವಂತೆ ಮುಖ್ಯಮಂತ್ರಿ ಬದಲಾವಣೆಗೆ ಬಿಜೆಪಿ ಮುಂದಾಗಿದೆ.

ಉತ್ತರಾಖಂಡ್, ಕರ್ನಾಟಕದ ಬಳಿಕ ಗುಜರಾತ್​ನಲ್ಲಿ ಇಂತಹ ಬೆಳವಣಿಗೆ ಕಂಡುಬಂದಿದೆ. ಬಿಜೆಪಿ ಹೈಕಮಾಂಡ್ ದಿಢೀರ್ ನಿರ್ಧಾರಗಳು ರಾಜಕೀಯ ಸಂಚಲನ ಸೃಷ್ಟಿಸುತ್ತಿದೆ. ಅವಧಿಗೆ ಮುನ್ನವೇ ಬಿಜೆಪಿ ವರಿಷ್ಠರು ವಿಜಯ್ ರೂಪಾನಿಯಿಂದ ರಾಜೀನಾಮೆ ಕೊಡಿಸಿದ್ದಾರೆ. ಗುಜರಾತ್ ಸಿಎಂ ವಿಜಯ್ ರೂಪಾನಿ ರಾಜೀನಾಮೆ ನೀಡಿದ್ದು, ಮುಂದೆ ಬಹುಸಂಖ್ಯಾತ ಪಾಟೀದಾರ್​ ಸಮುದಾಯಕ್ಕೆ ಸಿಎಂ ಸ್ಥಾನ ಸಿಗಬಹುದು ಎಂದು ಹೇಳಲಾಗುತ್ತಿದೆ. ಪಾಟೀದಾರ್​ ಸಮುದಾಯ ಓಲೈಸಲು ಬಿಜೆಪಿ ಮುಂದಾಗಿದೆ ಎನ್ನಲಾಗುತ್ತಿದೆ.

ಯಾರಾಗಲಿದ್ದಾರೆ ಮುಂದಿನ ಮುಖ್ಯಮಂತ್ರಿ? ಜಾತಿ ಲೆಕ್ಕಾಚಾರ, ಸಮುದಾಯದ ನಾಯಕತ್ವ ಅಥವಾ ಓಲೈಕೆ, ಚುನಾವಣೆ ಗೆಲ್ಲುವ ತಂತ್ರದ ಭಾಗವಾಗಿ ಈ ಮುಖ್ಯಮಂತ್ರಿ ಬದಲಾವಣೆ ನಡೆದಿದೆ ಎಂದೇ ಅಭಿಪ್ರಾಯಗಳು ಕೇಳಿಬರುತ್ತಿವೆ. ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂದು ಕೂಡ ಹೆಸರುಗಳು ಮುನ್ನೆಲೆಗೆ ಬಂದಿದೆ. ಗುಜರಾತ್ ಸಿಎಂ ವಿಜಯ್ ರೂಪಾನಿ ರಾಜೀನಾಮೆ ನೀಡಿರುವ ಬೆನ್ನಲ್ಲಿ ಗುಜರಾತ್ ಸಿಎಂ ರೇಸ್​ನಲ್ಲಿ ಎರಡು ಹೆಸರು ಮುಂಚೂಣಿಗೆ ಬಂದಿದೆ. ಕೇಂದ್ರ ಆರೋಗ್ಯ ಸಚಿವ ಮನಸುಖ್​ ಮಾಂಡವೀಯಾ, ಪುರುಷೋತ್ತಮ್​ ರೂಪಾಲ ಹಾಗೂ ಆರ್​​ಸಿ ಫಾಲ್ಡು ಹೆಸರುಗಳು ಗುಜರಾತ್ ಸಿಎಂ ರೇಸ್​ನಲ್ಲಿ ಕೇಳಿಬಂದಿದೆ. ಯಾರು ಮುಖ್ಯಮಂತ್ರಿ ಸ್ಥಾನ ಅಲಂಕರಿಸಲಿದ್ದಾರೆ ಎಂದು ಕಾದುನೋಡಬೇಕಿದೆ.

ಇದನ್ನೂ ಓದಿ: Gujarat Politics: ಕರ್ನಾಟಕ ಮಾದರಿಯಲ್ಲಿ ಗುಜರಾತ್​ನಲ್ಲೂ ಜಾತಿ ಲೆಕ್ಕಾಚಾರದ ಮೊರೆ ಹೋದ ಬಿಜೆಪಿ?

ಇದನ್ನೂ ಓದಿ: ಗುಜರಾತ್​​ನ ಮುಂದಿನ ಮುಖ್ಯಮಂತ್ರಿ ಯಾರು?-ರೇಸ್​​ನಲ್ಲಿದ್ದಾರೆ ಈ ಎಲ್ಲ ಪ್ರಮುಖ ನಾಯಕರು

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?