AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gujarat Politics: ಗುಜರಾತ್​ ಮುಂದಿನ ಸಿಎಂ ಆಯ್ಕೆಗೆ ಶಾಸಕಾಂಗ ಪಕ್ಷದ ಸಭೆ; ಹೆಚ್ಚಿದ ಕುತೂಹಲ

Gujarat Next CM: ಕೇಂದ್ರದ ಬಿಜೆಪಿ ವೀಕ್ಷಕರಾಗಿ ಜೋಶಿ, ತೋಮರ್​ ಆಗಮಿಸಿದ್ದಾರೆ. ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ, ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್ ಮಾಂಡವೀಯ, ನಿತಿನ್ ಪಟೇಲ್, ಸಿ.ಆರ್. ಪಾಟೀಲ್ ಕೂಡ ಭೇಟಿ ನೀಡಿ ಭಾಗವಹಿಸಿದ್ದಾರೆ.

Gujarat Politics: ಗುಜರಾತ್​ ಮುಂದಿನ ಸಿಎಂ ಆಯ್ಕೆಗೆ ಶಾಸಕಾಂಗ ಪಕ್ಷದ ಸಭೆ; ಹೆಚ್ಚಿದ ಕುತೂಹಲ
ಶಾಸಕಾಂಗ ಪಕ್ಷದ ಸಭೆಗೆ ಆಗಮಿಸಿದ ವಿಜಯ್ ರೂಪಾನಿ
TV9 Web
| Edited By: |

Updated on: Sep 12, 2021 | 2:49 PM

Share

ಗಾಂಧಿನಗರ: ಗುಜರಾತ್‌ನ ಮುಖ್ಯಮಂತ್ರಿ ಸ್ಥಾನಕ್ಕೆ ವಿಜಯ್ ರೂಪಾನಿ ನಿನ್ನೆ (ಸಪ್ಟೆಂಬರ್ 11) ರಾಜೀನಾಮೆ ನೀಡಿದ್ದಾರೆ. ದಿಢೀರ್ ರಾಜೀನಾಮೆ ಬೆನ್ನಲ್ಲೇ ನೂತನ ಸಿಎಂ ಆಯ್ಕೆಗೆ ಇಂದು ಬಿಎಲ್‌ಪಿ ಸಭೆ ನಡೆಸಿದೆ. ಗುಜರಾತ್​ನ ಗಾಂಧಿನಗರದ ಬಿಜೆಪಿ ಕಚೇರಿಯಲ್ಲಿ ಸಭೆ ನಡೆಸಲಾಗಿದೆ. ಸಭೆಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹಾಗೂ ನರೇಂದ್ರ ಸಿಂಗ್ ತೋಮರ್​ ಆಗಮಿಸಿದ್ದಾರೆ. ಕೇಂದ್ರದ ಬಿಜೆಪಿ ವೀಕ್ಷಕರಾಗಿ ಜೋಶಿ, ತೋಮರ್​ ಆಗಮಿಸಿದ್ದಾರೆ. ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ, ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್ ಮಾಂಡವೀಯ, ನಿತಿನ್ ಪಟೇಲ್, ಸಿ.ಆರ್. ಪಾಟೀಲ್ ಕೂಡ ಭೇಟಿ ನೀಡಿ ಭಾಗವಹಿಸಿದ್ದಾರೆ.

ಗುಜರಾತ್ ಸಿಎಂ ವಿಜಯ್ ರೂಪಾನಿ ರಾಜೀನಾಮೆ ಹಿನ್ನೆಲೆಯಲ್ಲಿ, ಇಂದು ಗಾಂಧಿನಗರದಲ್ಲಿ ಬಿಜೆಪಿ ಶಾಸಕಾಂಗ ಸಭೆ ನಡೆಸಲಿರುವ ಬಗ್ಗೆ ನಿನ್ನೆಯೇ ಹೇಳಲಾಗಿತ್ತು. ಇಂದೇ ನೂತನ ಸಿಎಂ ಆಯ್ಕೆ ಮಾಡಲು ಬಿಎಲ್​​ಪಿ ಸಭೆ ನಡೆಸುತ್ತದೆ ಎನ್ನಲಾಗಿತ್ತು. ಈ ಮಧ್ಯೆ, ಕರ್ನಾಟಕವೂ ಸಹಿತ ಹಲವು ರಾಜ್ಯಗಳಲ್ಲಿ ಬಿಜೆಪಿ ಅನುಸರಿಸಿರುವ ಮುಖ್ಯಮಂತ್ರಿ ಬದಲಾವಣೆ ತಂತ್ರ ಗುಜರಾತ್​​ನಲ್ಲೂ ನಡೆದಿದೆ ಎಂದು ಹೇಳಲಾಗಿದೆ. ವಿಧಾನಸಭಾ ಚುನಾವಣೆಗೆ ಇನ್ನು ಒಂದೇ ವರ್ಷ ಬಾಕಿ ಉಳಿದಿರುವಂತೆ ಮುಖ್ಯಮಂತ್ರಿ ಬದಲಾವಣೆಗೆ ಬಿಜೆಪಿ ಮುಂದಾಗಿದೆ.

ಉತ್ತರಾಖಂಡ್, ಕರ್ನಾಟಕದ ಬಳಿಕ ಗುಜರಾತ್​ನಲ್ಲಿ ಇಂತಹ ಬೆಳವಣಿಗೆ ಕಂಡುಬಂದಿದೆ. ಬಿಜೆಪಿ ಹೈಕಮಾಂಡ್ ದಿಢೀರ್ ನಿರ್ಧಾರಗಳು ರಾಜಕೀಯ ಸಂಚಲನ ಸೃಷ್ಟಿಸುತ್ತಿದೆ. ಅವಧಿಗೆ ಮುನ್ನವೇ ಬಿಜೆಪಿ ವರಿಷ್ಠರು ವಿಜಯ್ ರೂಪಾನಿಯಿಂದ ರಾಜೀನಾಮೆ ಕೊಡಿಸಿದ್ದಾರೆ. ಗುಜರಾತ್ ಸಿಎಂ ವಿಜಯ್ ರೂಪಾನಿ ರಾಜೀನಾಮೆ ನೀಡಿದ್ದು, ಮುಂದೆ ಬಹುಸಂಖ್ಯಾತ ಪಾಟೀದಾರ್​ ಸಮುದಾಯಕ್ಕೆ ಸಿಎಂ ಸ್ಥಾನ ಸಿಗಬಹುದು ಎಂದು ಹೇಳಲಾಗುತ್ತಿದೆ. ಪಾಟೀದಾರ್​ ಸಮುದಾಯ ಓಲೈಸಲು ಬಿಜೆಪಿ ಮುಂದಾಗಿದೆ ಎನ್ನಲಾಗುತ್ತಿದೆ.

ಯಾರಾಗಲಿದ್ದಾರೆ ಮುಂದಿನ ಮುಖ್ಯಮಂತ್ರಿ? ಜಾತಿ ಲೆಕ್ಕಾಚಾರ, ಸಮುದಾಯದ ನಾಯಕತ್ವ ಅಥವಾ ಓಲೈಕೆ, ಚುನಾವಣೆ ಗೆಲ್ಲುವ ತಂತ್ರದ ಭಾಗವಾಗಿ ಈ ಮುಖ್ಯಮಂತ್ರಿ ಬದಲಾವಣೆ ನಡೆದಿದೆ ಎಂದೇ ಅಭಿಪ್ರಾಯಗಳು ಕೇಳಿಬರುತ್ತಿವೆ. ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂದು ಕೂಡ ಹೆಸರುಗಳು ಮುನ್ನೆಲೆಗೆ ಬಂದಿದೆ. ಗುಜರಾತ್ ಸಿಎಂ ವಿಜಯ್ ರೂಪಾನಿ ರಾಜೀನಾಮೆ ನೀಡಿರುವ ಬೆನ್ನಲ್ಲಿ ಗುಜರಾತ್ ಸಿಎಂ ರೇಸ್​ನಲ್ಲಿ ಎರಡು ಹೆಸರು ಮುಂಚೂಣಿಗೆ ಬಂದಿದೆ. ಕೇಂದ್ರ ಆರೋಗ್ಯ ಸಚಿವ ಮನಸುಖ್​ ಮಾಂಡವೀಯಾ, ಪುರುಷೋತ್ತಮ್​ ರೂಪಾಲ ಹಾಗೂ ಆರ್​​ಸಿ ಫಾಲ್ಡು ಹೆಸರುಗಳು ಗುಜರಾತ್ ಸಿಎಂ ರೇಸ್​ನಲ್ಲಿ ಕೇಳಿಬಂದಿದೆ. ಯಾರು ಮುಖ್ಯಮಂತ್ರಿ ಸ್ಥಾನ ಅಲಂಕರಿಸಲಿದ್ದಾರೆ ಎಂದು ಕಾದುನೋಡಬೇಕಿದೆ.

ಇದನ್ನೂ ಓದಿ: Gujarat Politics: ಕರ್ನಾಟಕ ಮಾದರಿಯಲ್ಲಿ ಗುಜರಾತ್​ನಲ್ಲೂ ಜಾತಿ ಲೆಕ್ಕಾಚಾರದ ಮೊರೆ ಹೋದ ಬಿಜೆಪಿ?

ಇದನ್ನೂ ಓದಿ: ಗುಜರಾತ್​​ನ ಮುಂದಿನ ಮುಖ್ಯಮಂತ್ರಿ ಯಾರು?-ರೇಸ್​​ನಲ್ಲಿದ್ದಾರೆ ಈ ಎಲ್ಲ ಪ್ರಮುಖ ನಾಯಕರು

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ