Gujarat Assembly Elections 2022: ಊರಿಗೆ ರೈಲಿಲ್ಲ ಅಂದ್ರೆ ನಿಮಗೆ ಓಟೂ ಇಲ್ಲ, ಚುನಾವಣೆ ಬಹಿಷ್ಕಾರಕ್ಕೆ ಕರೆಕೊಟ್ಟ 18 ಗ್ರಾಮಗಳು

ಗುಜರಾತ್ ವಿಧಾನಸಭಾ ಚುನಾವಣೆ( Gujarat Assembly Elections )ಹೊಸ್ತಿಲಿನಲ್ಲೇ ನವ್ಸಾರಿ ವಿಧಾನ ಸಭಾ ಕ್ಷೇತ್ರದ 18 ಗ್ರಾಮಗಳು ಚುನಾವಣಾ ಬಹಿಷ್ಕಾರಕ್ಕೆ ಕರೆ ನೀಡಿವೆ.

Gujarat Assembly Elections 2022: ಊರಿಗೆ ರೈಲಿಲ್ಲ ಅಂದ್ರೆ ನಿಮಗೆ ಓಟೂ ಇಲ್ಲ, ಚುನಾವಣೆ ಬಹಿಷ್ಕಾರಕ್ಕೆ ಕರೆಕೊಟ್ಟ 18 ಗ್ರಾಮಗಳು
ElectionImage Credit source: Zee News
Follow us
| Updated By: ನಯನಾ ರಾಜೀವ್

Updated on:Nov 13, 2022 | 2:10 PM

ಗುಜರಾತ್ ವಿಧಾನಸಭಾ ಚುನಾವಣೆ( Gujarat Assembly Elections )ಹೊಸ್ತಿಲಿನಲ್ಲೇ ನವ್ಸಾರಿ ವಿಧಾನ ಸಭಾ ಕ್ಷೇತ್ರದ 18 ಗ್ರಾಮಗಳು ಚುನಾವಣಾ ಬಹಿಷ್ಕಾರಕ್ಕೆ ಕರೆ ನೀಡಿವೆ. ಮುಂದಿನ ತಿಂಗಳು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಗುಜರಾತ್‌ನ ಎಲ್ಲಾ ರಾಜಕೀಯ ಪಕ್ಷಗಳು ಸಜ್ಜಾಗುತ್ತಿರುವಂತೆಯೇ, ನವ್ಸಾರಿ ವಿಧಾನಸಭಾ ಕ್ಷೇತ್ರದ ಅಂಚೆಲಿ ಮತ್ತು ಇತರ 17 ಗ್ರಾಮಗಳ ನಿವಾಸಿಗಳು ಚುನಾವಣೆಯನ್ನು ಬಹಿಷ್ಕರಿಸಲು ಮತ್ತು ರಾಜಕೀಯ ಮುಖಂಡರನ್ನು ನಿಷೇಧಿಸುವ ಬ್ಯಾನರ್​ಗಳನ್ನು ಹಿಡಿದು ಓಡಾಡುತ್ತಿದ್ದಾರೆ.

ಆಡಳಿತಾರೂಢ ಭಾರತೀಯ ಜನತಾ ಪಕ್ಷದಿಂದ (ಬಿಜೆಪಿ) ಪ್ರಚಾರಕ್ಕಾಗಿ ಹಳ್ಳಿಗಳನ್ನು ಪ್ರವೇಶಿಸುವುದಿಲ್ಲ. ಅಂಚೆಲಿ ರೈಲು ನಿಲ್ದಾಣದಲ್ಲಿ ಲೋಕಲ್ ರೈಲು ನಿಲುಗಡೆ ಮಾಡಬೇಕೆಂಬ ಅವರ ಬೇಡಿಕೆ ಇನ್ನೂ ಈಡೇರದಿರುವುದು ಚುನಾವಣೆ ಬಹಿಷ್ಕಾರಕ್ಕೆ ಪ್ರಮುಖ ಕಾರಣವಾಗಿದೆ.

ಅಂಚೆಲಿ ರೈಲು ನಿಲ್ದಾಣದ ಬಳಿ ಮತ್ತು ಗ್ರಾಮಗಳ ಪ್ರದೇಶಗಳಲ್ಲಿ ಬ್ಯಾನರ್‌ಗಳಲ್ಲಿ “ಟ್ರೇನ್ ನಹೀ ತೋ ವೋಟ್ ನಹೀ (ರೈಲು ಇಲ್ಲ ಅಂದರೆ ಮತ ಇಲ್ಲ) ಎಂದು ಬರೆಯಲಾಗಿದೆ, ಬಿಜೆಪಿ ಅಥವಾ ಇತರ ರಾಜಕೀಯ ಪಕ್ಷಗಳು ಚುನಾವಣಾ ಪ್ರಚಾರಕ್ಕೆ ಬರಬಾರದು, ನಮ್ಮ ಬೇಡಿಕೆಗಳನ್ನು ಈಡೇರಿಸಿಲ್ಲ, ಆದ್ದರಿಂದ ನಾವು ಚುನಾವಣೆಯನ್ನು ಬಹಿಷ್ಕರಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

ಇಲ್ಲಿ ಕ್ಷೇತ್ರದ ಕನಿಷ್ಠ 18 ಹಳ್ಳಿಗಳ ಜನರು ಚುನಾವಣೆಯನ್ನು ಬಹಿಷ್ಕರಿಸಿದ್ದಾರೆ. ಕೋವಿಡ್ 19ಗಿಂತ ಮೊದಲು ಇಲ್ಲಿ ನಿಲುಗಡೆ ಮಾಡುತ್ತಿದ್ದ ರೈಲನ್ನು ನಿಲುಗಡೆ ಮಾಡಬೇಕೆಂಬುದು ಅವರ ಬೇಡಿಕೆಯಾಗಿದೆ. ಸಾಮಾನ್ಯ ಜನರು ಸಮಸ್ಯೆ ಎದುರಿಸುವಂತಾಗಿದೆ, ಒಂದೊಮ್ಮೆ ಖಾಸಗಿ ವಾಹನಗಳನ್ನು ಬಳಸಿ ಪ್ರಯಾಣಿಸಿದರೆ ದಿನಕ್ಕೆ 300 ರೂ ನೀಡಬೇಕಾಗುತ್ತದೆ, ಅಷ್ಟು ಕೊಟ್ಟು ಹೋಗುವ ಸಾಮರ್ಥ್ಯವಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಬೆಳಗ್ಗೆ ಕಾಲೇಜುಗಳಿಗೆ ಹೋಗುವುದು ತಡವಾಗುತ್ತಿದೆ, ದಿನ ಒಂದೊಂದು ತರಗತಿಯನ್ನು ಮಿಸ್​ ಮಾಡಿಕೊಳ್ಳಬೇಕಾಗುತ್ತದೆ. ಇದರಿಂದಾಗಿ ಶಿಕ್ಷಣದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ ಎಂದು ವಿದ್ಯಾರ್ಥಿನಿ ಪ್ರಾಚಿ ಪಟೇಲ್ ಝೀ ನ್ಯೂಸ್​ಗೆ ತಿಳಿಸಿದ್ದಾರೆ.

1966 ರಿಂದ ಸ್ಥಳೀಯ ಪ್ಯಾಸೆಂಜರ್ ರೈಲು ಇಲ್ಲಿ ನಿಲ್ಲುತ್ತಿತ್ತು ಆದರೆ ಕೋವಿಡ್ ಸಾಂಕ್ರಾಮಿಕ ರೋಗದಿಂದಾಗಿ ಅದನ್ನು ನಿಲ್ಲಿಸಲಾಯಿತು. ಅದು ಪುನರಾರಂಭಿಸಿದ ನಂತರ, ಅದು ಇಲ್ಲಿ ನಮ್ಮ ನಿಲ್ದಾಣದಲ್ಲಿ ನಿಲ್ಲುವುದಿಲ್ಲ. ಕನಿಷ್ಠ 19 ಹಳ್ಳಿಗಳ ಜನರು ತಮ್ಮ ಕೆಲಸಗಳಿಗಾಗಿ ಇಲ್ಲಿಂದ ಅಪ್ ಆಂಡ್ ಡೌನ್ ಮಾಡುತ್ತಾರೆ. ಅವರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ, ನಾವು ಹೊಸದಕ್ಕೆ ಬೇಡಿಕೆಯಿಡುತ್ತಿಲ್ಲ. ನಮಗೆ ಅದೇ ರೈಲು ಬೇಕು, ಆದರೆ ಇನ್ನೂ ಸ್ಥಳೀಯ ಆಡಳಿತವಾಗಲಿ ಜನ ಪ್ರತಿನಿಧಿಗಳಾಗಲಿ ಸ್ಪಂದಿಸುತ್ತಿಲ್ಲ.

“ನಾವು ಈ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸಲು ನಿರ್ಧರಿಸಿದ್ದೇವೆ ಮತ್ತು ನಾವು ಎಲ್ಲಾ ಖಾಲಿ ಇವಿಎಂಗಳನ್ನು ಹಿಂತಿರುಗಿಸುತ್ತೇವೆ ಎಂದು ಅವರು ಹೇಳಿದರು.

ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಹಿಮಾಚಲ ಪ್ರದೇಶದ ಫಲಿತಾಂಶದ ದಿನಾಂಕದೊಂದಿಗೆ ಡಿಸೆಂಬರ್ 8 ರಂದು ಮತಗಳ ಎಣಿಕೆ ನಡೆಯಲಿದೆ. ಬಿಜೆಪಿ ಕಳೆದ 27 ವರ್ಷಗಳಿಂದ ರಾಜ್ಯದಲ್ಲಿ ಅಧಿಕಾರದಲ್ಲಿದೆ.

ಆದಾಗ್ಯೂ, ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಲು ಕಾಂಗ್ರೆಸ್ ತನ್ನ ಅತ್ಯುತ್ತಮ ಚುನಾವಣಾ ತಂತ್ರಗಳನ್ನು ಮುಂದಿಡುತ್ತಿದೆ.

ಮುಂಬರುವ ಗುಜರಾತ್ ವಿಧಾನಸಭೆ ಚುನಾವಣೆಗೆ ಬಿಜೆಪಿ ಶನಿವಾರ ಆರು ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಆರು ಅಭ್ಯರ್ಥಿಗಳ ಎರಡನೇ ಪಟ್ಟಿಯಲ್ಲಿ ಬಿಜೆಪಿ ಇಬ್ಬರು ಮಹಿಳೆಯರಿಗೆ ಟಿಕೆಟ್ ನೀಡಿದೆ. ಧೋರಾಜಿಯಿಂದ ಮಹೇಂದ್ರಭಾಯಿ ಪಡಲಿಯಾ, ಖಂಭಾಲಿಯಾದಿಂದ ಮುಲುಭಾಯಿ ಬೇರಾ, ಕುಟಿಯಾನದಿಂದ ಧೆಲಿಬೆನ್ ಮಾಲ್ದೇಭಾಯ್ ಒಡೆದಾರ, ಭಾವನಗರ ಪೂರ್ವದಿಂದ ಸೇಜಲ್ ರಾಜೀವ್ ಕುಮಾರ್ ಪಾಂಡ್ಯ, ದೇಡಿಯಾಪಾದದಿಂದ (ಎಸ್‌ಟಿ) ಹಿತೇಶ್ ದೇವ್‌ಜಿ ವಾಸವಾ ಮತ್ತು ಚೋರಿಯಾಸಿಯಿಂದ ಸಂದೀಪ್ ದೇಸಾಯಿ ಅವರನ್ನು ಕಣಕ್ಕಿಳಿಸಿದೆ.

ಮೊನ್ನೆ ಗುರುವಾರ ಬಿಜೆಪಿ ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆಗೆ 182 ಕ್ಷೇತ್ರಗಳ ಪೈಕಿ 160 ಅಭ್ಯರ್ಥಿಗಳ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿತ್ತು. 160 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ 14 ಮಹಿಳೆಯರು, 13 ಪರಿಶಿಷ್ಟ ಜಾತಿ, 24 ಪರಿಶಿಷ್ಟ ಪಂಗಡ ಮತ್ತು 69 ಅಭ್ಯರ್ಥಿಗಳು ಪುನರಾವರ್ತಿತರಾಗಿದ್ದಾರೆ.

ರಾಜ್ಯದಲ್ಲಿ ಡಿಸೆಂಬರ್ 1 ಮತ್ತು 5 ರಂದು ವಿಧಾನಸಭೆ ಚುನಾವಣೆ ನಿಗದಿಯಾಗಿದೆ. ಮೊದಲ ಸುತ್ತಿನಲ್ಲಿ ಒಟ್ಟು 182 ವಿಧಾನಸಭಾ ಸ್ಥಾನಗಳ ಪೈಕಿ 89 ಸ್ಥಾನಗಳಿಗೆ ಮತದಾನ ನಡೆಯಲಿದ್ದು, ಬಹುತೇಕ ಎಲ್ಲಾ ಕ್ಷೇತ್ರಗಳಿಗೆ ಪ್ರಮುಖ ರಾಜಕೀಯ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಘೋಷಿಸಿವೆ.

ಮುಂಬರುವ ಗುಜರಾತ್ ವಿಧಾನಸಭೆ ಚುನಾವಣೆಗೆ ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಸಿದ್ಧಪಡಿಸಿದೆ. ಈ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮೊದಲ ಸ್ಥಾನದಲ್ಲಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಮತ್ತು ಕೇಂದ್ರ ಸಂಪುಟದ ಸಹೋದ್ಯೋಗಿಗಳಾದ ಸ್ಮೃತಿ ಇರಾನಿ, ಧರ್ಮೇಂದ್ರ ಪ್ರಧಾನ್, ಮನ್ಸುಖ್ ಮಾಂಡವಿಯಾ ಮತ್ತು ಪುರುಷೋತ್ತಮ್ ರೂಪಾಲಾ ಅವರು ಪಟ್ಟಿಯಲ್ಲಿರುವ ಇತರ ಪ್ರಮುಖ ಹೆಸರುಗಳಿವೆ.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:09 pm, Sun, 13 November 22

ನವರಾತ್ರಿ ಉತ್ಸವದಲ್ಲಿ ಕಣ್ಮನ ಸೆಳೆದ ಕಾಂತಾರ ಚಿತ್ರದ ಪಂಜುರ್ಲಿ ನೃತ್ಯ
ನವರಾತ್ರಿ ಉತ್ಸವದಲ್ಲಿ ಕಣ್ಮನ ಸೆಳೆದ ಕಾಂತಾರ ಚಿತ್ರದ ಪಂಜುರ್ಲಿ ನೃತ್ಯ
ಇದು ಮೌನವಾಗಿರುವ ಕಾಲ: ಜೈಲಿಂದ ಹೊರಬಂದ ಮುರುಘಾಶ್ರೀ ಮೊದಲ ಮಾತು
ಇದು ಮೌನವಾಗಿರುವ ಕಾಲ: ಜೈಲಿಂದ ಹೊರಬಂದ ಮುರುಘಾಶ್ರೀ ಮೊದಲ ಮಾತು
ನರಕದ ನೋವು ಹೆಚ್ಚಲು ಕಾರಣವಾದ ಚೈತ್ರಾ ಕುಂದಾಪುರ? ಎಲ್ಲ ಮುಗಿದ ಬಳಿಕ ಅಳು
ನರಕದ ನೋವು ಹೆಚ್ಚಲು ಕಾರಣವಾದ ಚೈತ್ರಾ ಕುಂದಾಪುರ? ಎಲ್ಲ ಮುಗಿದ ಬಳಿಕ ಅಳು
ಒಳ ಉಡುಪಿನ ವಿಷಯ ಪ್ರಸ್ತಾಪಿಸಿ ಮಹಿಳಾ ಸ್ಪರ್ಧಿಗಳಿಗೆ ಮುಜುಗರ ತಂದ ಜಗದೀಶ್
ಒಳ ಉಡುಪಿನ ವಿಷಯ ಪ್ರಸ್ತಾಪಿಸಿ ಮಹಿಳಾ ಸ್ಪರ್ಧಿಗಳಿಗೆ ಮುಜುಗರ ತಂದ ಜಗದೀಶ್
ಬೆಂಗಳೂರು: ನಿಂತಿದ್ದ ಮಹಿಳೆ ಮೇಲೆ ವಿದ್ಯುತ್ ಲೈನ್ ಬಿದ್ದು ಸಾವು
ಬೆಂಗಳೂರು: ನಿಂತಿದ್ದ ಮಹಿಳೆ ಮೇಲೆ ವಿದ್ಯುತ್ ಲೈನ್ ಬಿದ್ದು ಸಾವು
ರೋಹಿತ್ ಶರ್ಮಾ ಸ್ಟೈಲ್​ನಲ್ಲಿ ಟ್ರೋಫಿ ಎತ್ತಿ ಹಿಡಿದ ಫಾಫ್ ಡುಪ್ಲೆಸಿಸ್
ರೋಹಿತ್ ಶರ್ಮಾ ಸ್ಟೈಲ್​ನಲ್ಲಿ ಟ್ರೋಫಿ ಎತ್ತಿ ಹಿಡಿದ ಫಾಫ್ ಡುಪ್ಲೆಸಿಸ್
ದರ್ಶನ್​ಗೆ ಬೆನ್ನು ನೋವು; ಪತಿಯನ್ನು ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮೀ  
ದರ್ಶನ್​ಗೆ ಬೆನ್ನು ನೋವು; ಪತಿಯನ್ನು ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮೀ  
ಉಡುಪಿ ಹೆಬ್ರಿಯಲ್ಲಿ ಮೇಘ ಸ್ಫೋಟ: ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಅವಾಂತರ
ಉಡುಪಿ ಹೆಬ್ರಿಯಲ್ಲಿ ಮೇಘ ಸ್ಫೋಟ: ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಅವಾಂತರ
ಬಿಗ್ ಬಾಸ್​ನಲ್ಲಿ ಮಸಿ ಬಳಿಯೋ ಟಾಸ್ಕ್; ಮತ್ತದೇ ಕಿರುಚಾಟ, ಕಿತ್ತಾಟ
ಬಿಗ್ ಬಾಸ್​ನಲ್ಲಿ ಮಸಿ ಬಳಿಯೋ ಟಾಸ್ಕ್; ಮತ್ತದೇ ಕಿರುಚಾಟ, ಕಿತ್ತಾಟ
ಚೆನ್ನೈ ಏರ್​ ಶೋ, ಉಸಿರುಗಟ್ಟಿ 5 ಮಂದಿ ಸಾವು
ಚೆನ್ನೈ ಏರ್​ ಶೋ, ಉಸಿರುಗಟ್ಟಿ 5 ಮಂದಿ ಸಾವು