AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gujarat Rains: ಅಂಡರ್​ಪಾಸ್​ನಲ್ಲಿ ಮಳೆ ನೀರು ತುಂಬಿ ಬಸ್‌ ಮೇಲೆ ನಿಂತ ದಂಪತಿ; ಹಗ್ಗ ಹಾಕಿ ರಕ್ಷಿಸಿದ ಜನರು

ಗುಜರಾತ್ ಜೊತೆಗೆ ರಾಜಸ್ಥಾನದಲ್ಲಿ ಭಾರೀ ಮಳೆಯಾಗುತ್ತಿದೆ. ಇದರಿಂದಾಗಿ ನದಿಗಳು, ಚರಂಡಿಗಳು ಉಕ್ಕಿ ಹರಿಯುತ್ತಿದ್ದು, ಅನೇಕ ನಗರಗಳು ಮತ್ತು ಹಳ್ಳಿಗಳಲ್ಲಿ ಪ್ರವಾಹದಂತಹ ಪರಿಸ್ಥಿತಿ ಉದ್ಭವಿಸಿದೆ. ಗುಜರಾತ್​ನ ಪ್ರವಾಹದ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

Gujarat Rains: ಅಂಡರ್​ಪಾಸ್​ನಲ್ಲಿ ಮಳೆ ನೀರು ತುಂಬಿ ಬಸ್‌ ಮೇಲೆ ನಿಂತ ದಂಪತಿ; ಹಗ್ಗ ಹಾಕಿ ರಕ್ಷಿಸಿದ ಜನರು
ಅಂಡರ್​ಪಾಸ್​ನಲ್ಲಿ ಮಳೆ ನೀರು ತುಂಬಿ ಬಸ್‌ ಮೇಲೆ ನಿಂತ ದಂಪತಿ
ಸುಷ್ಮಾ ಚಕ್ರೆ
|

Updated on: Jul 29, 2024 | 6:24 PM

Share

ಸಬರ್​ಕಾಂತ: ದೇಶದ ಹಲವೆಡೆ ಭಾರೀ ಮಳೆಯಾಗುತ್ತಿದೆ. ಅನೇಕ ಜನರು ನೀರಿನಲ್ಲಿ ಮುಳುಗಿದ್ದಾರೆ, ಅನೇಕ ಜನರನ್ನು ರಕ್ಷಿಸಲಾಗಿದೆ ಮತ್ತು ಅವರ ಜೀವಗಳನ್ನು ಉಳಿಸಲಾಗಿದೆ. ಗುಜರಾತ್‌ನ ಸಬರ್‌ಕಾಂತದಲ್ಲಿರುವ ಹಮೀರ್‌ಗಢ್ ಅಂಡರ್‌ಪಾಸ್‌ನ ವಿಡಿಯೋವೊಂದು ಈಗ ವೈರಲ್ ಆಗಿದ್ದು, ಬಸ್ ಮೇಲೆ ನಿಂತು ಸಹಾಯಕ್ಕಾಗಿ ಕಿರುಚುತ್ತಿದ್ದ ಮಹಿಳೆ ಮತ್ತು ಪುರುಷನನ್ನು ರಕ್ಷಣೆ ಮಾಡಲಾಗಿದೆ.

ಭಾರೀ ಮಳೆಯಿಂದಾಗಿ ಗುಜರಾತ್​ನ ಸಬರ್​ಕಾಂತದಲ್ಲಿರುವ ಅಂಡರ್​ಪಾಸ್​ನಲ್ಲಿ ಬಸ್ ಸಿಲುಕಿಕೊಂಡಿದ್ದು, ಬಸ್​ನೊಳಗಿದ್ದ ಜನರು ಬಸ್ಸಿನ ಮೇಲೆ ಹತ್ತಿ ನಿಂತು ಸಹಾಯಕ್ಕಾಗಿ ಮೊರೆಯಿಡುವುದನ್ನು ವಿಡಿಯೋ ಮಾಡಲಾಗಿದೆ. ಬಸ್ ಮೇಲೆ ನಿಂತಿದ್ದ ಪುರುಷ ಮತ್ತು ಮಹಿಳೆಯನ್ನು ಸ್ಥಳೀಯರು ಹಗ್ಗದ ಸಹಾಯದಿಂದ ಮೇಲೆಕ್ಕೆ ಎತ್ತಿ ರಕ್ಷಿಸಿರುವ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ. ಈ ವಿಡಿಯೋವನ್ನು ಪಿಟಿಐ ಶೇರ್ ಮಾಡಿಕೊಂಡಿದೆ.

ಇದನ್ನೂ ಓದಿ: Karnataka Rains: ಕರ್ನಾಟಕದ ಕರಾವಳಿ, ಮಲೆನಾಡಿನಲ್ಲಿ ಇಂದಿನಿಂದ ಕಡಿಮೆಯಾಗಲಿದೆ ಮಳೆಯ ಪ್ರಮಾಣ

ಇಂದು ಗುಜರಾತಿನ ಹಲವು ಭಾಗಗಳಲ್ಲಿ ಭಾರೀ ಮಳೆ ಸುರಿದಿದ್ದು, ಸಬರ್ಕಾಂತ, ನಾಡಿಯಾಡ್, ಮೊಡಸಾ ಮತ್ತು ಮಹಿಸಾಗರದಲ್ಲಿ ಬಹುತೇಕ ಪ್ರದೇಶಗಳು ಜಲಾವೃತವಾಗಿದೆ. ಮೊಡಸಾದಲ್ಲಿ ಎರಡು ಹೌಸಿಂಗ್ ಸೊಸೈಟಿಗಳು ಜಲಾವೃತಗೊಂಡಿದ್ದು, ಪ್ರಯಾಣಿಕರು ಸಂಚಾರ ಅಸ್ತವ್ಯಸ್ತಗೊಂಡಿದ್ದಾರೆ. ದಕ್ಷಿಣ ಗುಜರಾತ್‌ನಲ್ಲಿ ಗ್ರಾಮಗಳು ಮುಳುಗಡೆಯಾಗಿದ್ದರಿಂದ 2,500ಕ್ಕೂ ಹೆಚ್ಚು ಜನರನ್ನು ಅವರ ಮನೆಗಳಿಂದ ಸ್ಥಳಾಂತರಿಸಲಾಗಿದೆ. ನವಸಾರಿಯಲ್ಲಿ, 2,200 ಜನರನ್ನು ಸ್ಥಳಾಂತರಿಸಲಾಯಿತು ಮತ್ತು ತಾಪಿ ಜಿಲ್ಲೆಯಲ್ಲಿ 500 ಜನರನ್ನು ಸ್ಥಳಾಂತರಿಸಲಾಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್