AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gujarat Rains: ಅಂಡರ್​ಪಾಸ್​ನಲ್ಲಿ ಮಳೆ ನೀರು ತುಂಬಿ ಬಸ್‌ ಮೇಲೆ ನಿಂತ ದಂಪತಿ; ಹಗ್ಗ ಹಾಕಿ ರಕ್ಷಿಸಿದ ಜನರು

ಗುಜರಾತ್ ಜೊತೆಗೆ ರಾಜಸ್ಥಾನದಲ್ಲಿ ಭಾರೀ ಮಳೆಯಾಗುತ್ತಿದೆ. ಇದರಿಂದಾಗಿ ನದಿಗಳು, ಚರಂಡಿಗಳು ಉಕ್ಕಿ ಹರಿಯುತ್ತಿದ್ದು, ಅನೇಕ ನಗರಗಳು ಮತ್ತು ಹಳ್ಳಿಗಳಲ್ಲಿ ಪ್ರವಾಹದಂತಹ ಪರಿಸ್ಥಿತಿ ಉದ್ಭವಿಸಿದೆ. ಗುಜರಾತ್​ನ ಪ್ರವಾಹದ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

Gujarat Rains: ಅಂಡರ್​ಪಾಸ್​ನಲ್ಲಿ ಮಳೆ ನೀರು ತುಂಬಿ ಬಸ್‌ ಮೇಲೆ ನಿಂತ ದಂಪತಿ; ಹಗ್ಗ ಹಾಕಿ ರಕ್ಷಿಸಿದ ಜನರು
ಅಂಡರ್​ಪಾಸ್​ನಲ್ಲಿ ಮಳೆ ನೀರು ತುಂಬಿ ಬಸ್‌ ಮೇಲೆ ನಿಂತ ದಂಪತಿ
ಸುಷ್ಮಾ ಚಕ್ರೆ
|

Updated on: Jul 29, 2024 | 6:24 PM

Share

ಸಬರ್​ಕಾಂತ: ದೇಶದ ಹಲವೆಡೆ ಭಾರೀ ಮಳೆಯಾಗುತ್ತಿದೆ. ಅನೇಕ ಜನರು ನೀರಿನಲ್ಲಿ ಮುಳುಗಿದ್ದಾರೆ, ಅನೇಕ ಜನರನ್ನು ರಕ್ಷಿಸಲಾಗಿದೆ ಮತ್ತು ಅವರ ಜೀವಗಳನ್ನು ಉಳಿಸಲಾಗಿದೆ. ಗುಜರಾತ್‌ನ ಸಬರ್‌ಕಾಂತದಲ್ಲಿರುವ ಹಮೀರ್‌ಗಢ್ ಅಂಡರ್‌ಪಾಸ್‌ನ ವಿಡಿಯೋವೊಂದು ಈಗ ವೈರಲ್ ಆಗಿದ್ದು, ಬಸ್ ಮೇಲೆ ನಿಂತು ಸಹಾಯಕ್ಕಾಗಿ ಕಿರುಚುತ್ತಿದ್ದ ಮಹಿಳೆ ಮತ್ತು ಪುರುಷನನ್ನು ರಕ್ಷಣೆ ಮಾಡಲಾಗಿದೆ.

ಭಾರೀ ಮಳೆಯಿಂದಾಗಿ ಗುಜರಾತ್​ನ ಸಬರ್​ಕಾಂತದಲ್ಲಿರುವ ಅಂಡರ್​ಪಾಸ್​ನಲ್ಲಿ ಬಸ್ ಸಿಲುಕಿಕೊಂಡಿದ್ದು, ಬಸ್​ನೊಳಗಿದ್ದ ಜನರು ಬಸ್ಸಿನ ಮೇಲೆ ಹತ್ತಿ ನಿಂತು ಸಹಾಯಕ್ಕಾಗಿ ಮೊರೆಯಿಡುವುದನ್ನು ವಿಡಿಯೋ ಮಾಡಲಾಗಿದೆ. ಬಸ್ ಮೇಲೆ ನಿಂತಿದ್ದ ಪುರುಷ ಮತ್ತು ಮಹಿಳೆಯನ್ನು ಸ್ಥಳೀಯರು ಹಗ್ಗದ ಸಹಾಯದಿಂದ ಮೇಲೆಕ್ಕೆ ಎತ್ತಿ ರಕ್ಷಿಸಿರುವ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ. ಈ ವಿಡಿಯೋವನ್ನು ಪಿಟಿಐ ಶೇರ್ ಮಾಡಿಕೊಂಡಿದೆ.

ಇದನ್ನೂ ಓದಿ: Karnataka Rains: ಕರ್ನಾಟಕದ ಕರಾವಳಿ, ಮಲೆನಾಡಿನಲ್ಲಿ ಇಂದಿನಿಂದ ಕಡಿಮೆಯಾಗಲಿದೆ ಮಳೆಯ ಪ್ರಮಾಣ

ಇಂದು ಗುಜರಾತಿನ ಹಲವು ಭಾಗಗಳಲ್ಲಿ ಭಾರೀ ಮಳೆ ಸುರಿದಿದ್ದು, ಸಬರ್ಕಾಂತ, ನಾಡಿಯಾಡ್, ಮೊಡಸಾ ಮತ್ತು ಮಹಿಸಾಗರದಲ್ಲಿ ಬಹುತೇಕ ಪ್ರದೇಶಗಳು ಜಲಾವೃತವಾಗಿದೆ. ಮೊಡಸಾದಲ್ಲಿ ಎರಡು ಹೌಸಿಂಗ್ ಸೊಸೈಟಿಗಳು ಜಲಾವೃತಗೊಂಡಿದ್ದು, ಪ್ರಯಾಣಿಕರು ಸಂಚಾರ ಅಸ್ತವ್ಯಸ್ತಗೊಂಡಿದ್ದಾರೆ. ದಕ್ಷಿಣ ಗುಜರಾತ್‌ನಲ್ಲಿ ಗ್ರಾಮಗಳು ಮುಳುಗಡೆಯಾಗಿದ್ದರಿಂದ 2,500ಕ್ಕೂ ಹೆಚ್ಚು ಜನರನ್ನು ಅವರ ಮನೆಗಳಿಂದ ಸ್ಥಳಾಂತರಿಸಲಾಗಿದೆ. ನವಸಾರಿಯಲ್ಲಿ, 2,200 ಜನರನ್ನು ಸ್ಥಳಾಂತರಿಸಲಾಯಿತು ಮತ್ತು ತಾಪಿ ಜಿಲ್ಲೆಯಲ್ಲಿ 500 ಜನರನ್ನು ಸ್ಥಳಾಂತರಿಸಲಾಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ