AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gujarat Rains: ಅಂಡರ್​ಪಾಸ್​ನಲ್ಲಿ ಮಳೆ ನೀರು ತುಂಬಿ ಬಸ್‌ ಮೇಲೆ ನಿಂತ ದಂಪತಿ; ಹಗ್ಗ ಹಾಕಿ ರಕ್ಷಿಸಿದ ಜನರು

ಗುಜರಾತ್ ಜೊತೆಗೆ ರಾಜಸ್ಥಾನದಲ್ಲಿ ಭಾರೀ ಮಳೆಯಾಗುತ್ತಿದೆ. ಇದರಿಂದಾಗಿ ನದಿಗಳು, ಚರಂಡಿಗಳು ಉಕ್ಕಿ ಹರಿಯುತ್ತಿದ್ದು, ಅನೇಕ ನಗರಗಳು ಮತ್ತು ಹಳ್ಳಿಗಳಲ್ಲಿ ಪ್ರವಾಹದಂತಹ ಪರಿಸ್ಥಿತಿ ಉದ್ಭವಿಸಿದೆ. ಗುಜರಾತ್​ನ ಪ್ರವಾಹದ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

Gujarat Rains: ಅಂಡರ್​ಪಾಸ್​ನಲ್ಲಿ ಮಳೆ ನೀರು ತುಂಬಿ ಬಸ್‌ ಮೇಲೆ ನಿಂತ ದಂಪತಿ; ಹಗ್ಗ ಹಾಕಿ ರಕ್ಷಿಸಿದ ಜನರು
ಅಂಡರ್​ಪಾಸ್​ನಲ್ಲಿ ಮಳೆ ನೀರು ತುಂಬಿ ಬಸ್‌ ಮೇಲೆ ನಿಂತ ದಂಪತಿ
ಸುಷ್ಮಾ ಚಕ್ರೆ
|

Updated on: Jul 29, 2024 | 6:24 PM

Share

ಸಬರ್​ಕಾಂತ: ದೇಶದ ಹಲವೆಡೆ ಭಾರೀ ಮಳೆಯಾಗುತ್ತಿದೆ. ಅನೇಕ ಜನರು ನೀರಿನಲ್ಲಿ ಮುಳುಗಿದ್ದಾರೆ, ಅನೇಕ ಜನರನ್ನು ರಕ್ಷಿಸಲಾಗಿದೆ ಮತ್ತು ಅವರ ಜೀವಗಳನ್ನು ಉಳಿಸಲಾಗಿದೆ. ಗುಜರಾತ್‌ನ ಸಬರ್‌ಕಾಂತದಲ್ಲಿರುವ ಹಮೀರ್‌ಗಢ್ ಅಂಡರ್‌ಪಾಸ್‌ನ ವಿಡಿಯೋವೊಂದು ಈಗ ವೈರಲ್ ಆಗಿದ್ದು, ಬಸ್ ಮೇಲೆ ನಿಂತು ಸಹಾಯಕ್ಕಾಗಿ ಕಿರುಚುತ್ತಿದ್ದ ಮಹಿಳೆ ಮತ್ತು ಪುರುಷನನ್ನು ರಕ್ಷಣೆ ಮಾಡಲಾಗಿದೆ.

ಭಾರೀ ಮಳೆಯಿಂದಾಗಿ ಗುಜರಾತ್​ನ ಸಬರ್​ಕಾಂತದಲ್ಲಿರುವ ಅಂಡರ್​ಪಾಸ್​ನಲ್ಲಿ ಬಸ್ ಸಿಲುಕಿಕೊಂಡಿದ್ದು, ಬಸ್​ನೊಳಗಿದ್ದ ಜನರು ಬಸ್ಸಿನ ಮೇಲೆ ಹತ್ತಿ ನಿಂತು ಸಹಾಯಕ್ಕಾಗಿ ಮೊರೆಯಿಡುವುದನ್ನು ವಿಡಿಯೋ ಮಾಡಲಾಗಿದೆ. ಬಸ್ ಮೇಲೆ ನಿಂತಿದ್ದ ಪುರುಷ ಮತ್ತು ಮಹಿಳೆಯನ್ನು ಸ್ಥಳೀಯರು ಹಗ್ಗದ ಸಹಾಯದಿಂದ ಮೇಲೆಕ್ಕೆ ಎತ್ತಿ ರಕ್ಷಿಸಿರುವ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ. ಈ ವಿಡಿಯೋವನ್ನು ಪಿಟಿಐ ಶೇರ್ ಮಾಡಿಕೊಂಡಿದೆ.

ಇದನ್ನೂ ಓದಿ: Karnataka Rains: ಕರ್ನಾಟಕದ ಕರಾವಳಿ, ಮಲೆನಾಡಿನಲ್ಲಿ ಇಂದಿನಿಂದ ಕಡಿಮೆಯಾಗಲಿದೆ ಮಳೆಯ ಪ್ರಮಾಣ

ಇಂದು ಗುಜರಾತಿನ ಹಲವು ಭಾಗಗಳಲ್ಲಿ ಭಾರೀ ಮಳೆ ಸುರಿದಿದ್ದು, ಸಬರ್ಕಾಂತ, ನಾಡಿಯಾಡ್, ಮೊಡಸಾ ಮತ್ತು ಮಹಿಸಾಗರದಲ್ಲಿ ಬಹುತೇಕ ಪ್ರದೇಶಗಳು ಜಲಾವೃತವಾಗಿದೆ. ಮೊಡಸಾದಲ್ಲಿ ಎರಡು ಹೌಸಿಂಗ್ ಸೊಸೈಟಿಗಳು ಜಲಾವೃತಗೊಂಡಿದ್ದು, ಪ್ರಯಾಣಿಕರು ಸಂಚಾರ ಅಸ್ತವ್ಯಸ್ತಗೊಂಡಿದ್ದಾರೆ. ದಕ್ಷಿಣ ಗುಜರಾತ್‌ನಲ್ಲಿ ಗ್ರಾಮಗಳು ಮುಳುಗಡೆಯಾಗಿದ್ದರಿಂದ 2,500ಕ್ಕೂ ಹೆಚ್ಚು ಜನರನ್ನು ಅವರ ಮನೆಗಳಿಂದ ಸ್ಥಳಾಂತರಿಸಲಾಗಿದೆ. ನವಸಾರಿಯಲ್ಲಿ, 2,200 ಜನರನ್ನು ಸ್ಥಳಾಂತರಿಸಲಾಯಿತು ಮತ್ತು ತಾಪಿ ಜಿಲ್ಲೆಯಲ್ಲಿ 500 ಜನರನ್ನು ಸ್ಥಳಾಂತರಿಸಲಾಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ