AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್​ನಲ್ಲಿ ಭೀಕರ ಅಪಘಾತ: ಬಸ್​ಗೆ ಲಾರಿ ಡಿಕ್ಕಿ, 6 ಮಂದಿ ಸಾವು, ಹಲವರಿಗೆ ಗಾಯ

ಗುಜರಾತ್​ನಲ್ಲಿ ಪಂಕ್ಚರ್​ ಆಗಿ ನಿಂತಿದ್ದ ಬಸ್​ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಮೃತಪಟ್ಟಿದ್ದು, 8 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಆನಂದ್​ನಲ್ಲಿ ನಡೆದಿದೆ.

ಗುಜರಾತ್​ನಲ್ಲಿ ಭೀಕರ ಅಪಘಾತ: ಬಸ್​ಗೆ ಲಾರಿ ಡಿಕ್ಕಿ, 6 ಮಂದಿ ಸಾವು, ಹಲವರಿಗೆ ಗಾಯ
ಅಪಘಾತ
ನಯನಾ ರಾಜೀವ್
|

Updated on: Jul 15, 2024 | 10:27 AM

Share

ಗುಜರಾತ್​ನ ಆನಂದ್​ ಬಳಿ ಸಂಭವಿಸಿದ ಬಸ್ ಅಪಘಾತದಲ್ಲಿ 6 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ, ಹಲವರು ಗಾಯಗೊಂಡಿದ್ದಾರೆ. ಅಹಮದಾಬಾದ್ ವಡೋದರಾ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಜುಲೈ 15 ರಂದು ಬೆಳಿಗ್ಗೆ 4.30 ರ ಸುಮಾರಿಗೆ ಐಷಾರಾಮಿ ಬಸ್‌ಗೆ ಲಾರಿ ಡಿಕ್ಕಿ ಹೊಡೆದಿದೆ. 3 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೂ ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಬಸ್ ಮಹಾರಾಷ್ಟ್ರದಿಂದ ರಾಜಸ್ಥಾನಕ್ಕೆ ಹೋಗುತ್ತಿತ್ತು. ಆನಂದ್ ಬಳಿ ಬಸ್ ಪಂಕ್ಚರ್ ಆಗಿತ್ತು. ಇದರಿಂದಾಗಿ ಬಸ್ಸಿನ ಚಾಲಕ ಹಾಗೂ ಪ್ರಯಾಣಿಕರು ಬಸ್ಸಿನ ಕೆಳಗೆ ನಿಂತಿದ್ದರು. ಆಗ ಹಿಂದಿನಿಂದ ಲಾರಿಯೊಂದು ಬಸ್‌ಗೆ ಡಿಕ್ಕಿ ಹೊಡೆದಿದೆ. ರಸ್ತೆ ಅಪಘಾತದ ಸುದ್ದಿ ತಿಳಿದ ತಕ್ಷಣ ಆನಂದ ಅಗ್ನಿಶಾಮಕ ದಳ, ಎಕ್ಸ್‌ಪ್ರೆಸ್ ಹೈವೇ ಪೆಟ್ರೋಲಿಂಗ್ ತಂಡ ಮತ್ತು ಆನಂದ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಧಾವಿಸಿದರು.

ಎಲ್ಲಾ ಗಾಯಾಳುಗಳನ್ನು ಆನಂದ್‌ನ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಡಿಕ್ಕಿಯ ನಂತರ ಬಸ್ ಮತ್ತು ಟ್ರಕ್ ತೀವ್ರವಾಗಿ ಜಖಂಗೊಂಡಿದೆ. ಮೃತ ದೇಹಗಳ ಪಂಚನಾಮ ಸಿದ್ಧಪಡಿಸುವ ಮೂಲಕ ಪೊಲೀಸರು ಮುಂದಿನ ಕ್ರಮ ಕೈಗೊಳ್ಳುತ್ತಿದ್ದಾರೆ.

ಮತ್ತಷ್ಟು ಓದಿ: ಚಿಕ್ಕಮಗಳೂರಿನಲ್ಲಿ ಮುಂದುವರಿದ ಪ್ರವಾಸಿಗರ ಹುಚ್ಚಾಟ; ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ಅಪಘಾತ

ಜುಲೈ 12 ರಂದು ಕೂಡ ಗುಜರಾತ್‌ನ ಪಟಾನ್ ಜಿಲ್ಲೆಯಲ್ಲಿ ಬಸ್ ಮತ್ತು ಟ್ರಕ್ ನಡುವೆ ಡಿಕ್ಕಿ ಉಂಟಾಗಿತ್ತು. ಈ ಅಪಘಾತದಲ್ಲಿ ಕನಿಷ್ಠ 4 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ವೇಳೆ 2 ಮಂದಿ ಗಾಯಗೊಂಡಿದ್ದಾರೆ. ರಾಧನ್‌ಪುರ ಪಟ್ಟಣದ ಖಾರಿ ಸೇತುವೆ ಬಳಿ ಡಿಕ್ಕಿ ಸಂಭವಿಸಿದೆ.

ಎದುರಿನಿಂದ ಬರುತ್ತಿದ್ದ ಲಾರಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಈ ಅವಘಡದಲ್ಲಿ ಬಸ್ಸಿನ ಚಾಲಕ ಮತ್ತು ಕಂಡಕ್ಟರ್ ಸಾವನ್ನಪ್ಪಿದ್ದಾರೆ. ಲಾರಿಯ ಚಾಲಕ ಮತ್ತು ಕ್ಲೀನರ್ ಕೂಡ ಪ್ರಾಣ ಕಳೆದುಕೊಂಡಿದ್ದಾರೆ. ಜುಲೈ 7 ರಂದು ಗುಜರಾತ್‌ನ ಡ್ಯಾಂಗ್ ಜಿಲ್ಲೆಯಲ್ಲಿ ಖಾಸಗಿ ಪ್ರವಾಸಿ ಬಸ್ ಹಳ್ಳಕ್ಕೆ ಬಿದ್ದಿತ್ತು. ಇದರಿಂದ 2 ಮಕ್ಕಳು ಸಾವನ್ನಪ್ಪಿದ್ದು, 5 ಮಂದಿ ಗಾಯಗೊಂಡಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ