AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್​: ಸಂಜೆ ಹೊತ್ತು ನದಿಯಲ್ಲಿ ಸ್ನಾನ ಮಾಡಲು ಹೋಗಿ ಒಂದೇ ಕುಟುಂಬದ 6 ಮಂದಿ ಸಾವು

ನದಿಯಲ್ಲಿ ಸ್ನಾನ ಮಾಡಲು ಹೋಗಿ ಒಂದೇ ಕುಟುಂಬದ 6 ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ಗುಜರಾತ್​ನಲ್ಲಿ ನಡೆದಿದೆ. ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ, ನಾಡಿಯಾಡ್ ಅಗ್ನಿಶಾಮಕ ದಳದ ತಂಡವು ಕನಿಜ್ ಗ್ರಾಮದ ಬಳಿ ಸ್ಥಳಕ್ಕೆ ತಲುಪಿ, ಆರು ಶವಗಳನ್ನು ನದಿಯಿಂದ ಹೊರತೆಗೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗುಜರಾತ್​: ಸಂಜೆ ಹೊತ್ತು ನದಿಯಲ್ಲಿ ಸ್ನಾನ ಮಾಡಲು ಹೋಗಿ ಒಂದೇ ಕುಟುಂಬದ 6 ಮಂದಿ ಸಾವು
ನದಿ- ಸಾಂದರ್ಭಿಕ ಚಿತ್ರImage Credit source: Shutterstock
ನಯನಾ ರಾಜೀವ್
|

Updated on: May 01, 2025 | 8:12 AM

Share

ಖೇಡಾ, ಮೇ 1: ಒಂದೇ ಕುಟುಂಬದ 6 ಮಂದಿ ನದಿ(River)ಯಲ್ಲಿ ಮುಳುಗಿ ಪ್ರಾಣ ಬಿಟ್ಟಿರುವ ಹೃದಯ ವಿದ್ರಾವಕ ಘಟನೆ ಗುಜರಾತ್​ನ ಖೇಡಾ ಜಿಲ್ಲೆಯ ಮೆಶ್ವೋ ನದಿಯಲ್ಲಿ ನಡೆದಿದೆ. ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ, ನಾಡಿಯಾಡ್ ಅಗ್ನಿಶಾಮಕ ದಳದ ತಂಡವು ಕನಿಜ್ ಗ್ರಾಮದ ಬಳಿ ಸ್ಥಳಕ್ಕೆ ತಲುಪಿ, ಆರು ಶವಗಳನ್ನು ನದಿಯಿಂದ ಹೊರತೆಗೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕನಿಜ್ ಗ್ರಾಮದ ಬಳಿಯ ನದಿಯಲ್ಲಿ ಸಂಜೆ ಸ್ನಾನ ಮಾಡಲು ಆರು ಮಂದಿ ತೆರಳಿದ್ದರು. ನೀರಿನ ಆಳ ತಿಳಿಯದೇ ಇಳಿದು ಈಜಲಾಗದೆ ಪ್ರಾಣ ಕಳೆದುಕೊಂಡಿದ್ದಾರೆ. ತಂಡವು ಸ್ಥಳಕ್ಕೆ ತಲುಪಿ ಅವರನ್ನು ಹೊರತೆಗೆಯಲು ಕಾರ್ಯಾಚರಣೆ ನಡೆಸಲಾಯಿತು ಎಂದು ಖೇಡಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ರಾಜೇಶ್ ಗಾಧಿಯಾ ಮಾಹಿತಿ ನೀಡಿದ್ದಾರೆ. ಎಲ್ಲಾ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಮತ್ತೊಂದೆಡೆ ಫ್ಯಾಮಿಲಿ ಮ್ಯಾನ್ 3ಯಲ್ಲಿ ನಟಿಸಿದ್ದ ರೋಹಿತ್ ಎಂಬುವವರ ಮೃತದೇಹ ಜಲಪಾತದ ಬಳಿ ಪತ್ತೆಯಾಗಿದೆ. ಮಧ್ಯಾಹ್ನ ಗರ್ಭಂಗ ಜಲಪಾತದ ಬಳಿ ಅವರ ಮೃತದೇಹ ಪತ್ತೆಯಾಗಿದೆ. ರೋಹಿತ್ ತನ್ನ ಒಂಬತ್ತು ಸಹೋದ್ಯೋಗಿಗಳೊಂದಿಗೆ ಪಿಕ್ನಿಕ್‌ಗೆ ಹೋಗಿದ್ದಾಗ ಜಲಪಾತಕ್ಕೆ ಬಿದ್ದಿದ್ದಾನೆ ಎಂದು ವರದಿಯಾಗಿದೆ. ರಾಣಿ ಪೊಲೀಸ್ ಔಟ್‌ಪೋಸ್ಟ್ ಅಧಿಕಾರಿಗಳು ಮಧ್ಯಾಹ್ನ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ
Image
30 ಕಿಮೀ ಸಮುದ್ರ ಈಜಿ ದಾಖಲೆ ಬರೆದ ಚಿನ್ನದ ನಾಡಿನ ಬಾಲಕಿ
Image
ರೆಸಾರ್ಟ್​ನ ಈಜುಕೊಳದಲ್ಲಿ ಮುಳುಗಿ ಮೈಸೂರಿನ ಮೂವರು ಯುವತಿಯರು ದುರ್ಮರಣ!
Image
37 ಸೆಕೆಂಡ್​ನಲ್ಲಿ ನೀರೊಳಗೆ 26 ಪಲ್ಟಿ: ಮಂಗಳೂರಿನ ಬಾಲಕನಿಂದ ವಿಶ್ವ ದಾಖಲೆ
Image
‘ಎಂಜಾಯ್ ಮಾಡಿದೆವು’; ಹನಿಮೂನ್ ಫೋಟೋ ಹಂಚಿಕೊಂಡ ರಾಕುಲ್

ಮತ್ತಷ್ಟು ಓದಿ:ಹಾಸನ: ಈಜು ಗೊತ್ತಿದ್ದರೂ ಕೆರೆ ನೀರಲ್ಲಿ ಮುಳುಗಿ ಇಬ್ಬರ ಸಾವು

ಆಕಸ್ಮಿಕವಾಗಿ ರೋಹಿತ್ ಜಲಪಾತಕ್ಕೆ ಬಿದ್ದಿದ್ದಾರೆ ಎಂದು ಹೇಳಲಾಗಿದೆ, ಇದುವರೆಗೆ ಬೇರೆ ಯಾವುದೆ ಅನುಮಾನ ವ್ಯಕ್ತವಾಗಿಲ್ಲ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಪ್ರಕರಣದಲ್ಲಿ ಹೆಚ್ಚಿನ ತನಿಖೆ ನಡೆಯುತ್ತಿದೆ.

ಕಳೆದ ವರ್ಷದಿಂದ, ರೋಹಿತ್ ಫ್ಯಾಮಿಲಿ ಮ್ಯಾನ್ ಸೆಟ್‌ಗಳ ಚಿತ್ರಗಳನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ. ಕಳೆದ ವರ್ಷ ನವೆಂಬರ್‌ನಲ್ಲಿ ಜೈದೀಪ್ ಅಹ್ಲಾವತ್ ಮತ್ತು ದಲೀಪ್ ತಹಿಲ್ ಅವರೊಂದಿಗೆ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ