Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್: ಒಂದೇ ಶಾಲೆಯ ಹತ್ತಾರು ಮಕ್ಕಳ ಕೈಲಿ ಒಂದೇ ರೀತಿಯ ಗಾಯ, ಆಗಿದ್ದೇನು?

ಗುಜರಾತ್​ನ ಬನಸ್ಕಾಂತ ಜಿಲ್ಲೆಯಲ್ಲಿರುವ ಶಾಲೆಯೊಂದರಲ್ಲಿ ಹಲವು ಮಕ್ಕಳು ಕೈಗಳನ್ನು ಕೊಯ್ದುಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ. ಕೆಲವು ದಿನಗಳ ಹಿಂದಷ್ಟೇ ಅಮ್ರೇಲಿಯ ಶಾಲೆಯೊಂದರಲ್ಲೂ 40 ವಿದ್ಯಾರ್ಥಿಗಳು ಕೈಗಳನ್ನು ಕೊಯ್ದುಕೊಂಡಿದ್ದರು. ಹಾಗಾಗಿ ಈ ಘಟನೆ ಶಿಕ್ಷಣ ಇಲಾಖೆಯ ನಿದ್ದೆಗೆಡಿಸಿದೆ. ಬನಸ್ಕಾಂತದಲ್ಲಿರುವ ರಾಜ್​ಪುರ ಪ್ರಾಥಮಿಕ ಶಾಲೆಯ ಹಲವು ಮಕ್ಕಳು ಒಟ್ಟಿಗೆ ಕೈಕೊಯ್ದುಕೊಂಡಿರುವ ಆತಂಕಕಾರಿ ಘಟನೆ ನಡೆದಿದೆ. ಜಿಲ್ಲಾ ಶಿಕ್ಷಣ ಅಧಿಕಾರಿಯ ಸೂಚನೆಯ ಮೇರೆಗೆ, ಇಡೀ ವಿಷಯದ ಬಗ್ಗೆ ಸಮಗ್ರ ತನಿಖೆಯನ್ನು ಪ್ರಾರಂಭಿಸಲಾಗಿದೆ.

ಗುಜರಾತ್: ಒಂದೇ ಶಾಲೆಯ ಹತ್ತಾರು ಮಕ್ಕಳ ಕೈಲಿ ಒಂದೇ ರೀತಿಯ ಗಾಯ, ಆಗಿದ್ದೇನು?
ವಿದ್ಯಾರ್ಥಿಗಳು-ಸಾಂದರ್ಭಿಕ ಚಿತ್ರ Image Credit source: DigitalLearning Magzine
Follow us
ನಯನಾ ರಾಜೀವ್
|

Updated on: Mar 28, 2025 | 1:00 PM

ಗುಜರಾತ್, ಮಾರ್ಚ್​ 28: ಗುಜರಾತ್​ನ ಬನಸ್ಕಾಂತ ಜಿಲ್ಲೆಯಲ್ಲಿರುವ ಶಾಲೆಯೊಂದರಲ್ಲಿ ಹಲವು ಮಕ್ಕಳು ಕೈಗಳನ್ನು ಕೊಯ್ದುಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ. ಕೆಲವು ದಿನಗಳ ಹಿಂದಷ್ಟೇ ಅಮ್ರೇಲಿಯ ಶಾಲೆಯೊಂದರಲ್ಲೂ 40 ವಿದ್ಯಾರ್ಥಿಗಳು ಕೈಗಳನ್ನು ಕೊಯ್ದುಕೊಂಡಿದ್ದರು. ಹಾಗಾಗಿ ಈ ಘಟನೆ ಶಿಕ್ಷಣ ಇಲಾಖೆಯ ನಿದ್ದೆಗೆಡಿಸಿದೆ.

ಬನಸ್ಕಾಂತದಲ್ಲಿರುವ ರಾಜ್​ಪುರ ಪ್ರಾಥಮಿಕ ಶಾಲೆಯ ಹಲವು ಮಕ್ಕಳು ಒಟ್ಟಿಗೆ ಕೈಕೊಯ್ದುಕೊಂಡಿರುವ ಆತಂಕಕಾರಿ ಘಟನೆ ನಡೆದಿದೆ. ಜಿಲ್ಲಾ ಶಿಕ್ಷಣ ಅಧಿಕಾರಿಯ ಸೂಚನೆಯ ಮೇರೆಗೆ, ಇಡೀ ವಿಷಯದ ಬಗ್ಗೆ ಸಮಗ್ರ ತನಿಖೆಯನ್ನು ಪ್ರಾರಂಭಿಸಲಾಗಿದೆ. ಮಕ್ಕಳಿಗೆ ಶಿಕ್ಷಣ ಇಲಾಖೆ ಮತ್ತು ಮಕ್ಕಳ ರಕ್ಷಣಾ ಇಲಾಖೆಯಿಂದ ಕೌನ್ಸೆಲಿಂಗ್ ನೀಡಲಾಗಿದೆ.

ಯಾವುದೋ ಗೇಮ್ ಆಡುವ ನೆಪದಲ್ಲಿ ಮಕ್ಕಳು ಕೈಗಳನ್ನು ಕೊಯ್ದುಕೊಳ್ಳುತ್ತಿದ್ದಾರೆ ಎಂದು ಹೇಳಲಾಗಿದೆ. ಮಕ್ಕಳು ಮೊಬೈಲ್ ಫೋನ್‌ಗಳು, ಆನ್‌ಲೈನ್ ಆಟಗಳು ಮತ್ತು ಹಿಂಸಾತ್ಮಕ ಚಟುವಟಿಕೆಗಳಿಂದ ದೂರವಿರಲು ಸೂಚಿಸಲಾಗಿದೆ ಎಂದು ಡಿಪಿಒ ತಿಳಿಸಿದ್ದಾರೆ. ಆನ್‌ಲೈನ್ ಗೇಮಿಂಗ್‌ನ ಅನುಮಾನದ ಮೇಲೆ ದಿಸಾ ರೂಲರ್ ಪೊಲೀಸರು ಕೂಡ ತನಿಖೆಗೆ ಸೇರಿಕೊಂಡಿದ್ದಾರೆ.

ಇದಕ್ಕೂ ಮೊದಲು, ಅಮ್ರೇಲಿ ಜಿಲ್ಲೆಯಲ್ಲಿ 40 ವಿದ್ಯಾರ್ಥಿಗಳು ತಮ್ಮ ಕೈಗಳನ್ನು ಕೊಯ್ದುಕೊಂಡಿದ್ದಾರೆ ಎಂದು ವರದಿಯಾಗಿತ್ತು. ಬಾಗಸಾರಾದ ಮೂಂಜಿಯಾಸರ್ ಗ್ರಾಮದಲ್ಲಿ ಒಂದು ವಿಚಿತ್ರ ಘಟನೆ ಬೆಳಕಿಗೆ ಬಂದಿದೆ. ಪೋಷಕರು ಕೇಳಿದಾಗ ವಿದ್ಯಾರ್ಥಿಗಳು ವಿಷಯವನ್ನು ಮುಚ್ಚಿಟ್ಟರು.

ಮತ್ತಷ್ಟು ಓದಿ: ಆನ್​​ಲೈನ್​ ಗೇಮ್ ಗೀಳಿಗೆ ಕುಟುಂಬವೇ ಸರ್ವನಾಶ! ಸಾಲಗಾರರ ಕಾಟಕ್ಕೆ ಹೆದರಿ ಮಗಳು, ಮಡದಿಯೊಂದಿಗೆ ಆತ್ಮಹತ್ಯೆ

ಮೂಂಜಿಯಾಸಾದ ಸರಪಂಚರು ಶಾಲೆಯ ಪ್ರಾಂಶುಪಾಲರಿಗೆ ಇಡೀ ಘಟನೆಯ ಬಗ್ಗೆ ತಿಳಿಸಿದಾಗ ಇಡೀ ವಿಷಯ ಬೆಳಕಿಗೆ ಬಂದಿತು. ಸರಪಂಚ್ ಕೂಡ ಉನ್ನತ ಅಧಿಕಾರಿಗಳಿಗೆ ಮಾಹಿತಿ ನೀಡಿದರು.

ಕೆಲವು ವರ್ಷಗಳ ಹಿಂದೆ ಬ್ಲ್ಯೂವೇಲ್​ ಎಂಬ ಆನ್​ಲೈನ್ ಗೇಮ್​ನಿಂದಾಗಿ ಹಲವು ವಿದ್ಯಾರ್ಥಿಗಳು ಅನಾಹುತ ಮಾಡಿಕೊಂಡಿದ್ದರು. ಬ್ಲೇಡ್​ನಿಂದ ಕೈ ಮೇಲೆ ಬ್ಲ್ಯೂವೇಲ್ ರೀತಿಯಲ್ಲಿ ಕೊಯ್ದುಕೊಂಡಿದ್ದರು. ಈಗ ಇನ್ಯಾವುದೋ ಆನ್​ಲೈನ್ ಗೇಮ್​ನಿಂದಾಗಿ ಮಕ್ಕಳಿಗೆ ಈ ಪರಿಸ್ಥಿತಿ ಬಂದಿದೆ ಹೀಗಾಗಿ ಆ ಗೇಮ್ ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ