AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್ ಟೈಲರ್​ಗೆ 7 ಸಾವಿರ ರೂ. ದಂಡ ಹಾಕಿದ ನ್ಯಾಯಾಲಯ, ಕಾರಣವೇನು?

ಗುಜರಾತ್​ನ ಟೈಲರ್​ಗೆ ಗ್ರಾಹಕರ ನ್ಯಾಯಾಲಯವು 7 ಸಾವಿರ ರೂ. ದಂಡ ವಿಧಿಸಿದೆ. ಡಿಸೆಂಬರ್ 24ರಂದು ಅಹಮದಾಬಾದ್‌ನ ಮಹಿಳೆಯೊಬ್ಬರು ಸಂಬಂಧಿಕರ ಮದುವೆಗೆಂದು ಬ್ಲೌಸ್ ಹೊಲಿಯಲು ಕೊಟ್ಟಿದ್ದರು. ಹಿಂದಿನ ತಿಂಗಳೇ 4,395ರೂ. ಮುಂಗಡವಾಗಿ ಪಾವತಿಸಿದ್ದರು. ಡಿಸೆಂಬರ್ 14ರಂದು ಬ್ಲೌಸ್ ಪಡೆಯಲು ಹೋದಾಗ ಅವರು ಹೇಳಿದಂತೆ ಟೈಲರ್ ಬ್ಲೌಸ್ ಹೊಲಿದಿರಲಿಲ್ಲ. ತಪ್ಪನ್ನು ಸರಿಪಡಿಸುವುದಾಗಿ ಅವರಿಗೆ ಭರವಸೆ ನೀಡಿದ್ದರು. ಮದುವೆ ಮುಗಿದು ಹೋದರೂ ಬ್ಲೌಸ್ ಸಿಕ್ಕಿರಲಿಲ್ಲ.

ಗುಜರಾತ್ ಟೈಲರ್​ಗೆ 7 ಸಾವಿರ ರೂ. ದಂಡ ಹಾಕಿದ ನ್ಯಾಯಾಲಯ, ಕಾರಣವೇನು?
ಟೈಲರ್Image Credit source: Google
ನಯನಾ ರಾಜೀವ್
|

Updated on: Oct 29, 2025 | 7:50 AM

Share

ಅಹಮದಾಬಾದ್, ಅಕ್ಟೋಬರ್ 29: ಸಾಮಾನ್ಯವಾಗಿ ಮದುವೆ, ಹಬ್ಬಗಳು ಏನೇ ಇರಲಿ ವರ್ಷದಲ್ಲಿ ಹತ್ತಾರು ಬಾರಿ ಟೈಲರ್​ಗಳ ಬಳಿ ಹೋಗಲೇಬೇಕು. ಅವರು ಹೇಳಿರುವ ಸಮಯದಲ್ಲಿ ಬಟ್ಟೆ(Cloth) ಕೊಡದಿದ್ದಾಗ ಕೋಪ ಮಾಡಿಕೊಂಡು ನಮ್ಮನ್ನು ನಾವು ಸುಧಾರಿಸಿಕೊಂಡು ಮತ್ತೆ ಅವರ ಬಳಿಯೇ ಕೊಡುತ್ತೇವೆ. ಆದರೆ ಇಲ್ಲೊಬ್ಬ ಮಹಿಳೆ ಮದುವೆಗೆ ಸಕಾಲದಲ್ಲಿ ಬ್ಲೌಸ್ ಹೊಲಿದುಕೊಟ್ಟಿಲ್ಲ ಎಂದು ಟೈಲರ್ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದ್ದಳು.

ಕುಟುಂಬದಲ್ಲಿ ಸಂತೋಷದ ಸಂದರ್ಭವಾಗಬೇಕಿದ್ದ ಈ ಸಂದರ್ಭ ಗ್ರಾಹಕ ನ್ಯಾಯಾಲಯದ ವಿವಾದವಾಗಿ ಪರಿವರ್ತನೆಗೊಂಡಿತ್ತು. ಗ್ರಾಹಕರ ನ್ಯಾಯಾಲಯವು ಟೈಲರ್​ಗೆ 7 ಸಾವಿರ ರೂ. ದಂಡ ವಿಧಿಸಿದೆ.

ಡಿಸೆಂಬರ್ 24ರಂದು ಅಹಮದಾಬಾದ್‌ನ ಮಹಿಳೆಯೊಬ್ಬರು ಸಂಬಂಧಿಕರ ಮದುವೆಗೆಂದು ಬ್ಲೌಸ್ ಹೊಲಿಯಲು ಕೊಟ್ಟಿದ್ದರು. ಹಿಂದಿನ ತಿಂಗಳೇ 4,395ರೂ. ಮುಂಗಡವಾಗಿ ಪಾವತಿಸಿದ್ದರು. ಡಿಸೆಂಬರ್ 14ರಂದು ಬ್ಲೌಸ್ ಪಡೆಯಲು ಹೋದಾಗ ಅವರು ಹೇಳಿದಂತೆ ಟೈಲರ್ ಬ್ಲೌಸ್ ಹೊಲಿದಿರಲಿಲ್ಲ. ತಪ್ಪನ್ನು ಸರಿಪಡಿಸುವುದಾಗಿ ಅವರಿಗೆ ಭರವಸೆ ನೀಡಿದ್ದರು. ಮದುವೆ ಮುಗಿದು ಹೋದರೂ ಬ್ಲೌಸ್ ಸಿಕ್ಕಿರಲಿಲ್ಲ.

ಮತ್ತಷ್ಟು ಓದಿ: ಬಿಗಿಯಾಗಿ, ಮೈಗೆ ಅಂಟಿಕೊಳ್ಳುವ ಬಟ್ಟೆ ಹಾಕಿಕೊಳ್ಳುವುದಕ್ಕೆ ತುಂಬಾ ಇಷ್ಟನಾ? ಹಾಗಿದ್ರೆ ಈ ಸ್ಟೋರಿ ತಪ್ಪದೆ ಓದಿ

ನಂತರ ಮಹಿಳೆ ಟೈಲರ್​ಗೆ ನೋಟಿಸ್ ಕಳುಹಿಸಿದ್ದಾರೆ, ಟೈಲರ್ ಆಯೋಗದ ಮುಂದೆ ಹಾಜರಾಗಲಿಲ್ಲ. ಬ್ಲೌಸ್ ತಲುಪಿಸಲು ಟೈಲರ್ ವಿಫಲವಾದ ಕಾರಣ ಆತನನ್ನು ತಪ್ಪಿತಸ್ಥನೆಂದು ನ್ಯಾಯಾಲಯ ಘೋಷಿಸಿತು. ದೂರದಾರ ಮಾನಸಿಕ ಕಿರುಕುಳ ಅನುಭವಿಸಿದ್ದಾರೆಂದು ನ್ಯಾಯಾಲಯ ತೀರ್ಪು ನೀಡಿತು. ನ್ಯಾಯಾಲಯವು ಟೈಲರ್​ಗೆ ವಾರ್ಷಿಕ ಶೇ.7ರಷ್ಟು ಬಡ್ಡಿಯೊಂದಿಗೆ ಹೆಚ್ಚುವರಿ ಪರಿಹಾರವನ್ನು ಪಾವತಿಸುವಂತೆ ನಿರ್ದೇಶಿಸಿತು, ಇದು ಸುಮಾರು ರೂ. 7,000 ರಷ್ಟಾಗಿದೆ.

ಕೇರಳದಲ್ಲೂ ಇಂಥದ್ದೇ ಪ್ರಕರಣ ನಡೆದಿತ್ತು ಈ ವರ್ಷದ ಏಪ್ರಿಲ್‌ನಲ್ಲಿ ಕೇರಳದ ಕೊಚ್ಚಿಯಲ್ಲಿ ಇದೇ ರೀತಿಯ ಪ್ರಕರಣ ವರದಿಯಾಗಿತ್ತು.ಎರ್ನಾಕುಲಂ ಜಿಲ್ಲಾ ಗ್ರಾಹಕ ವಿವಾದ ಪರಿಹಾರ ಆಯೋಗವು, ನೀಡಿದ ಅಳತೆಗಳ ಪ್ರಕಾರ ಶರ್ಟ್ ಹೊಲಿಯಲು ವಿಫಲವಾದ ಕಾರಣ, ಗ್ರಾಹಕನಿಗೆ 15,000 ರೂ. ಪರಿಹಾರವನ್ನು ನೀಡುವಂತೆ ನ್ಯಾಯಾಲಯ ಆದೇಶಿಸಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ