AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯಾರ್ಥಿನಿಗೆ ತರಗತಿಯಲ್ಲಿ ತನ್ನೊಂದಿಗೆ ಕುಳಿತು ವೋಡ್ಕಾ ಕುಡಿಯಲು ಒತ್ತಾಯಿಸಿದ ಶಿಕ್ಷಕ!

Gujarat News: ಬುಧವಾರ ಟ್ಯೂಷನ್ ಸಮಯದ ನಂತರ 10ನೇ ತರಗತಿಯ ವಿದ್ಯಾರ್ಥಿನಿಯನ್ನು ಕರೆದ ಶಿಕ್ಷಕರು ತನ್ನೊಂದಿಗೆ ಕುಳಿತು ವೋಡ್ಕಾ ಕುಡಿಯುವಂತೆ ಒತ್ತಾಯಿಸಿದ್ದಾರೆ.

ವಿದ್ಯಾರ್ಥಿನಿಗೆ ತರಗತಿಯಲ್ಲಿ ತನ್ನೊಂದಿಗೆ ಕುಳಿತು ವೋಡ್ಕಾ ಕುಡಿಯಲು ಒತ್ತಾಯಿಸಿದ ಶಿಕ್ಷಕ!
ಆಲ್ಕೋಹಾಲ್
TV9 Web
| Edited By: |

Updated on: Aug 05, 2022 | 3:14 PM

Share

ವಡೋದರಾ: ತನ್ನ ವಿದ್ಯಾರ್ಥಿನಿಯೊಬ್ಬಳ ಮೇಲೆ ದೈಹಿಕ ಹಲ್ಲೆ ನಡೆಸಿ, ತರಗತಿ ವೇಳೆ ವೋಡ್ಕಾ ಕುಡಿಯುವಂತೆ ಒತ್ತಾಯಿಸಿದ ಟ್ಯೂಷನ್ ಶಿಕ್ಷಕನನ್ನು ವಡೋದರಾ (Vadodara) ಪೊಲೀಸರು ಬಂಧಿಸಿದ್ದಾರೆ. ಬುಧವಾರ ರಾತ್ರಿ ಈ ಘಟನೆ ಬೆಳಕಿಗೆ ಬಂದಿದ್ದು, ಆ ದಿನ ಮಧ್ಯಾಹ್ನದ ವೇಳೆಗೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಆ ಶಿಕ್ಷಕನಿಗೆ ಕೊವಿಡ್ (COVID-19) ತಪಾಸಣೆ ನಡೆಸಿ, ಕೊರೊನಾ ನೆಗೆಟಿವ್ ದೃಢಪಟ್ಟ ನಂತರ ಗುರುವಾರ ರಾತ್ರಿ ಆತನನ್ನು ಬಂಧಿಸಲಾಗಿದೆ.

ಫತೇಗಂಜ್ ಪೊಲೀಸ್ ಇನ್ಸ್‌ಪೆಕ್ಟರ್ ಕೆ.ಪಿ ಪರ್ಮಾರ್ ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ನಿಜಾಂಪುರದಲ್ಲಿ ಆರೋಪಿ ಪ್ರಶಾಂತ್ ಖೋಸ್ಲಾ ಟ್ಯೂಷನ್ ತರಗತಿಗಳನ್ನು ನಡೆಸುತ್ತಿದ್ದಾರೆ. ಅವರು ಬುಧವಾರ ಟ್ಯೂಷನ್ ಸಮಯದ ನಂತರ 10ನೇ ತರಗತಿಯ ವಿದ್ಯಾರ್ಥಿನಿಯನ್ನು ಕರೆದು, ತನ್ನೊಂದಿಗೆ ಕುಳಿತು ವೋಡ್ಕಾ ಕುಡಿಯುವಂತೆ ಒತ್ತಾಯಿಸಿದ್ದಾರೆ. ಆ ಬಾಲಕಿಯನ್ನು ತನ್ನೊಂದಿಗೆ ಕರೆದುಕೊಂಡು ಬರುವಂತೆ ಒತ್ತಾಯಿಸಿ ಮದ್ಯ ಸೇವಿಸಿದ್ದಾರೆ. ಆ ದಿನ ರಾತ್ರಿ 9.30ರ ಸುಮಾರಿಗೆ ಆ ಬಾಲಕಿ ಪ್ರಜ್ಞಾಹೀನಳಾಗುತ್ತಿದ್ದಂತೆ ಆಕೆಯನ್ನು ಮನೆಗೆ ಡ್ರಾಪ್ ಮಾಡಿದ್ದಾರೆ. ಆಕೆಯ ಪೋಷಕರು ಆಕೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದಿದ್ದಾರೆ.

ಇದನ್ನೂ ಓದಿ: Kaali Movie Row: ನನಗೆ ಕಾಳಿಯೆಂದರೆ ಮಾಂಸ ತಿನ್ನುವ, ಆಲ್ಕೋಹಾಲ್ ಸ್ವೀಕರಿಸುವ ದೇವತೆ; ಸಂಸದೆ ಮಹುವಾ ಮೊಯಿತ್ರಾ

ಪ್ರಜ್ಞೆ ಬಂದ ನಂತರ ಆ ಬಾಲಕಿ ಮಹಿಳಾ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಎ.ಕೆ ವಾಲ್ವಿ ಅವರಿಗೆ ಸಂಪೂರ್ಣ ಘಟನೆಯನ್ನು ವಿವರಿಸಿದ್ದಾಳೆ. ಅದಾದ ಬಳಿಕ ಟ್ಯೂಷನ್ ಶಿಕ್ಷಕ ಪ್ರಶಾಂತ್ ಅವರನ್ನು ತರಾಟೆಗೆ ತೆಗೆದುಕೊಳ್ಳಲಾಗಿದ್ದು, ವಿಚಾರಣೆ ವೇಳೆ ಆತ ಕುಡಿದು ತಮ್ಮ ಮೇಲಿನ ಹಿಡಿತ ಕಳೆದುಕೊಂಡಿದ್ದರು ಎಂದು ಗೊತ್ತಾಗಿದೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್