AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

9ನೇ ಕ್ಲಾಸ್ ವಿದ್ಯಾರ್ಥಿನಿಯ ಕೆನ್ನೆಗೆ ಹೊಡೆದ ಶಿಕ್ಷಕಿಗೆ 3 ವರ್ಷ ಜೈಲು ಶಿಕ್ಷೆ

ಶಿಕ್ಷಕರೊಬ್ಬರು 9ನೇ ತರಗತಿ ಓದುತ್ತಿದ್ದ ತನ್ನ ವಿದ್ಯಾರ್ಥಿನಿಗೆ ಕಪಾಳಮೋಕ್ಷ ಮಾಡಿದ್ದರಿಂದ ಆಕೆಗೆ ಸರಿಯಾಗಿ ಕಿವಿ ಕೇಳದಂತಾಗಿತ್ತು. ಹೀಗಾಗಿ, ಆ ಶಿಕ್ಷಕಿಗೆ ಗುಜರಾತ್ ಕೋರ್ಟ್ 3 ವರ್ಷ ಜೈಲು ಶಿಕ್ಷೆ ವಿಧಿಸಿದೆ. ವಿದ್ಯಾರ್ಥಿನಿ ಅಶಿಸ್ತಿನಿಂದ ವರ್ತಿಸುತ್ತಿದ್ದಾಳೆ ಮತ್ತು ಪೋಷಕರು ಈ ಪ್ರಕರಣವನ್ನು ತಪ್ಪಾಗಿ ದಾಖಲಿಸಿದ್ದಾರೆ ಎಂದು ಶಿಕ್ಷಕಿ ತನ್ನ ಪ್ರತಿವಾದದಲ್ಲಿ ಹೇಳಿಕೊಂಡಿದ್ದಾರೆ. ಆಕೆಗೆ ಕ್ಯಾನ್ಸರ್ ಕಾಯಿಲೆಯಿದ್ದು, ಶಿಕ್ಷೆಯನ್ನು ವಜಾಗೊಳಿಸಬೇಕೆಂದು ಆಕೆಯ ವಕೀಲರು ಕೋರಿದ್ದಾರೆ. ಆದರೆ, ಕೋರ್ಟ್ ಈ ಅರ್ಜಿಯನ್ನು ತಿರಸ್ಕರಿಸಿದೆ.

9ನೇ ಕ್ಲಾಸ್ ವಿದ್ಯಾರ್ಥಿನಿಯ ಕೆನ್ನೆಗೆ ಹೊಡೆದ ಶಿಕ್ಷಕಿಗೆ 3 ವರ್ಷ ಜೈಲು ಶಿಕ್ಷೆ
Representative Image
ಸುಷ್ಮಾ ಚಕ್ರೆ
|

Updated on: Feb 10, 2026 | 10:15 PM

Share

ನವದೆಹಲಿ, ಫೆಬ್ರವರಿ 10: 9ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳಿಗೆ ಹೋಂ ವರ್ಕ್ ಪೂರ್ಣಗೊಳಿಸದ ಕಾರಣದಿಂದಾಗಿ ಶಿಕ್ಷಕರೊಬ್ಬರು ಕಪಾಳಮೋಕ್ಷ ಮಾಡಿದ್ದರು. ಹೀಗಾಗಿ ಗುಜರಾತ್ ನ್ಯಾಯಾಲಯವು ಆ ಶಾಲಾ ಶಿಕ್ಷಕಿಗೆ 3 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಈ ಹಲ್ಲೆಯಿಂದಾಗಿ ಬಾಲಕಿಯ ಕಿವಿಯೋಲೆ ಕಿತ್ತುಬಂದು ಒಂದು ಕಿವಿಯೇ ಕೇಳದಂತಾಗಿದೆ. ಜನವರಿ 30ರಂದು ನೀಡಿದ ತೀರ್ಪಿನಲ್ಲಿ ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಹಿಮಾಂಶು ಚೌಧರಿ ಈ ಅಪರಾಧದ ಮೂಲಕ ಶಿಕ್ಷಕಿ ತಮ್ಮ ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ. ಇದರಿಂದ ಅಪ್ರಾಪ್ತ ವಿದ್ಯಾರ್ಥಿನಿಗೆ ಗಂಭೀರ ಗಾಯವಾಗಿದೆ ಎಂದು ಹೇಳಿದ್ದಾರೆ.

14 ವರ್ಷದ ಬಾಲಕಿಯ ಎಡ ಕಿವಿಯೋಲೆಯ ರಂಧ್ರ ಹರಿದುಬಂದಿದ್ದು, ಅದಕ್ಕಾಗಿ ಹಲವು ದಿನಗಳವರೆಗೆ ವೈದ್ಯಕೀಯ ಚಿಕಿತ್ಸೆ ಪಡೆಯಬೇಕಾಯಿತು ಎಂದು ನ್ಯಾಯಾಲಯ ಹೇಳಿದೆ. ಈ ಘಟನೆ ಜನವರಿ 1, 2020ರಂದು ಗಾಂಧಿನಗರದ ಖಾಸಗಿ ಶಾಲೆಯಾದ ಬಾ ಶ್ರೀ ವಸಂತಕುವರ್ಬಾ ಶಾಲೆಯಲ್ಲಿ ನಡೆದಿತ್ತು. ಶಿಕ್ಷಕಿ ಪರುಲ್ಬೆನ್ ಪಟೇಲ್ ತನ್ನ ವಿದ್ಯಾರ್ಥಿನಿ ಹೋಂ ವರ್ಕ್ ಪೂರ್ಣಗೊಳಿಸಿಲ್ಲ ಎಂದು ಕೋಪಗೊಂಡು ಅವಳ ಎಡ ಕಿವಿಗೆ 3 ಬಾರಿ ಹೊಡೆದಿದ್ದರು. ಈ ಹೊಡೆತಗಳಿಂದ ಕಿವಿಗೆ ತೀವ್ರ ಗಾಯವಾಗಿತ್ತು.

ಇದನ್ನೂ ಓದಿ: 2 ಲಕ್ಷಕ್ಕಾಗಿ 14 ವರ್ಷದ ಮಗಳನ್ನು ಕೋಲಾರದ 54 ವರ್ಷದ ವ್ಯಕ್ತಿಗೆ ಮಾರಿದ ತಾಯಿ!

ಆ ಬಾಲಕಿಯ ಕುಟುಂಬ ಸಲ್ಲಿಸಿದ ದೂರಿನ ಮೇರೆಗೆ ಪೊಲೀಸರು ಈ ಘಟನೆ ನಡೆದ 2 ದಿನಗಳ ನಂತರ ಶಿಕ್ಷಕಿಯ ವಿರುದ್ಧ ಎಫ್‌ಐಆರ್ ದಾಖಲಿಸಿದರು. ನ್ಯಾಯಾಲಯದ ಮುಂದೆ ಹಾಜರುಪಡಿಸಿದ ವೈದ್ಯಕೀಯ ಪುರಾವೆಗಳು ಗಾಯದ ಸ್ವರೂಪ ಮತ್ತು ಗಂಭೀರತೆಯನ್ನು ದೃಢಪಡಿಸಿದವು. ಹಲ್ಲೆ ನಡೆದು ನಾಲ್ಕೂವರೆ ವರ್ಷಗಳ ನಂತರವೂ ಆ ಬಾಲಕಿ ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ನ್ಯಾಯಾಲಯ ಗಮನಿಸಿದೆ.

ಹೀಗಾಗಿ, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 325 ಮತ್ತು ಮಗುವಿನ ಮೇಲೆ ಹಲ್ಲೆ ಮಾಡಿದ್ದಕ್ಕಾಗಿ ಬಾಲ ನ್ಯಾಯ ಕಾಯ್ದೆಯ ಸೆಕ್ಷನ್ 75ರ ಅಡಿಯಲ್ಲಿ ಆ ಶಿಕ್ಷಕಿ ದೋಷಿ ಎಂದು ನ್ಯಾಯಾಲಯ ತೀರ್ಪು ನೀಡಿದೆ. ಆಕೆಗೆ 3 ವರ್ಷ ಮತ್ತು 3 ತಿಂಗಳ ಜೈಲು ಶಿಕ್ಷೆ ಮತ್ತು 50,000 ರೂ. ದಂಡ ವಿಧಿಸಲಾಗಿದೆ. ದಂಡದ ಮೊತ್ತವನ್ನು ಆ ಬಾಲಕಿಗೆ ಪರಿಹಾರವಾಗಿ ಪಾವತಿಸಲು ಸೂಚಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!
ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!