AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gujarat: ಗುಜರಾತ್​ನಲ್ಲಿ ಎರಡು ವರ್ಷದ ಮಗುವನ್ನು ಕಚ್ಚಿ ಕೊಂದ ಬೀದಿ ನಾಯಿಗಳು

ದೇಶದೆಲ್ಲೆಡೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ, ಬೀದಿ ನಾಯಿ(Stray Dog)ಗಳಿಂದ ವಾಹನ ಅಪಘಾತಗಳು ಸಂಭವಿಸುತ್ತಿವೆ, ದಾಳಿಯಿಂದ ಹಲವು ಮಕ್ಕಳು ಮೃತಪಟ್ಟಿದ್ದಾರೆ.

Gujarat: ಗುಜರಾತ್​ನಲ್ಲಿ ಎರಡು ವರ್ಷದ ಮಗುವನ್ನು ಕಚ್ಚಿ ಕೊಂದ ಬೀದಿ ನಾಯಿಗಳು
ಬೀದಿ ನಾಯಿಗಳು
ನಯನಾ ರಾಜೀವ್
|

Updated on: Jul 13, 2023 | 2:06 PM

Share

ದೇಶದೆಲ್ಲೆಡೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ, ಬೀದಿ ನಾಯಿ(Stray Dog)ಗಳಿಂದ ವಾಹನ ಅಪಘಾತಗಳು ಸಂಭವಿಸುತ್ತಿವೆ, ದಾಳಿಯಿಂದ ಹಲವು ಮಕ್ಕಳು ಮೃತಪಟ್ಟಿದ್ದಾರೆ. ಬೀದಿ ನಾಯಿಗಳ ಕಡಿತದಿಂದ 2 ವರ್ಷದ ಮಗುವೊಂದು ಸಾವನ್ನಪ್ಪಿರುವ ಘಟನೆ ಗುಜರಾತ್​ನಲ್ಲಿ ನಡೆದಿದೆ. ಮೊರ್ಬಿ ನಗರದ ಮಾಟೆಲ್ ರಸ್ತೆಯಲ್ಲಿರುವ ಸೆರಾಮಿಕ್ ಕಾರ್ಖಾನೆಯಲ್ಲಿ ಈ ಘಟನೆ ನಡೆದಿದೆ.

ಜುಲೈ 11 ರಂದು, ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಕುಟುಂಬಕ್ಕೆ ಸೇರಿದ ಎರಡೂವರೆ ವರ್ಷದ ಬಾಲಕ ಆವರಣದಲ್ಲಿ ಆಟವಾಡುತ್ತಿದ್ದಾಗ ಬೀದಿ ನಾಯಿಯೊಂದು ದಾಳಿ ಮಾಡಿತ್ತು. ಮಗುವಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ವಾಂಕನೇರ್‌ನ ಆಸ್ಪತ್ರೆಗೆ ಸಾಗಿಸಲಾಯಿತು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ.

ಏತನ್ಮಧ್ಯೆ, ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಬೀದಿ ನಾಯಿ ಕಚ್ಚುವಿಕೆಯು ಅಪಾಯಕಾರಿ ಬ್ಯಾಕ್ಟೀರಿಯಾ ಮಾನವ ದೇಹಕ್ಕೆ ಹೋಗಬಹುದು ಮತ್ತು ಚಿಕಿತ್ಸೆ ನೀಡದೆ ಬಿಟ್ಟಾಗ ಗಂಭೀರವಾದ ಮತ್ತು ಕೆಲವೊಮ್ಮೆ ಮಾರಣಾಂತಿಕ ಸೋಂಕನ್ನು ಉಂಟುಮಾಡಬಹುದು.

ಮತ್ತಷ್ಟು ಓದಿ: ದಾವಣಗೆರೆ: ಬೀದಿ ನಾಯಿಗಳ ದಾಳಿ, 15 ಕುರಿಗಳ ಸಾವು; 20ಕ್ಕೂ ಹೆಚ್ಚು ಕುರಿಗಳಿಗೆ ಗಾಯ

ಜುಲೈ 9 ರಂದು ರಾಜಸ್ಥಾನದ ಬುಂಡಿ ಜಿಲ್ಲೆಯಲ್ಲಿ ಹೊಲಕ್ಕೆ ತೆರಳುತ್ತಿದ್ದ 12 ವರ್ಷದ ಬಾಲಕನ ಮೇಲೆ ಮೂರು ಬೀದಿ ನಾಯಿಗಳು ದಾಳಿ ನಡೆಸಿದ್ದವು. 500 ಮೀಟರ್ ದೂರದಲ್ಲಿರುವ ತನ್ನ ಮನೆ ಮತ್ತು ಹೊಲದ ನಡುವಿನ ಪ್ರತ್ಯೇಕ ಹಾದಿಯಲ್ಲಿ ಹೋಗುತ್ತಿದ್ದಾಗ ನಾಯಿಗಳು ಬಾಲಕನನ್ನು ಸುತ್ತುವರೆದು ದಾಳಿ ಮಾಡಿವೆ.

ಮಹಾರಾಷ್ಟ್ರದಲ್ಲಿ ಕಳೆದ ಆರು ತಿಂಗಳಲ್ಲಿ ರಾಯಗಡ ಜಿಲ್ಲೆಯಲ್ಲಿ ಒಟ್ಟು 6,427 ನಾಯಿ ಕಡಿತ ಪ್ರಕರಣಗಳು ವರದಿಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆರೋಗ್ಯ ಅಧಿಕಾರಿಗಳು ಹಂಚಿಕೊಂಡ ಮಾಹಿತಿಯ ಪ್ರಕಾರ, 2021 ರಲ್ಲಿ ಈ ಸಂಖ್ಯೆ 9,138 ಮತ್ತು ಕಳೆದ ವರ್ಷ 10,625 ಕ್ಕೆ ಏರಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ