AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಣ್ಣನನ್ನು ಕೊಂದು ಗರ್ಭಿಣಿ ಅತ್ತಿಗೆ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿದ 15 ವರ್ಷದ ಬಾಲಕ

ಗುಜರಾತ್​ನ ಜುನಾಗಢದಲ್ಲಿ ಭಯಾನಕ ಘಟನೆ ವರದಿಯಾಗಿದೆ. 15 ವರ್ಷದ ಬಾಲಕನೊಬ್ಬ ಅಣ್ಣನನ್ನು ಕೊಂದು, ಗರ್ಭಿಣಿ ಅತ್ತಿಗೆ ಮೇಲೆ ಅತ್ಯಾಚಾರವೆಸಗಿರುವ ಘಟನೆ ನಗರದ ಜನತೆಯನ್ನೇ ಬೆಚ್ಚಿಬೀಳಿಸಿದೆ. ಅಕ್ಟೋಬರ್ 16ರಂದು ಈ ಜೋಡಿ ಕೊಲೆ ನಡೆದಿದೆ. ಸುಮಾರು ಎರಡು ವಾರಗಳ ನಂತರ ಬಿಹಾರದಲ್ಲಿರುವ ಮಹಿಳೆಯ ಕುಟುಂಬವು ಅನುಮಾನ ವ್ಯಕ್ತಪಡಿಸಿದ ನಂತರ ಬೆಳಕಿಗೆ ಬಂದಿತು.

ಅಣ್ಣನನ್ನು ಕೊಂದು ಗರ್ಭಿಣಿ ಅತ್ತಿಗೆ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿದ 15 ವರ್ಷದ ಬಾಲಕ
ಕ್ರೈಂ
ನಯನಾ ರಾಜೀವ್
|

Updated on: Nov 04, 2025 | 12:21 PM

Share

ಜುನಾಗಢ, ನವೆಂಬರ್ 04: ಗುಜರಾತ್ ಜುನಾಗಢದಲ್ಲಿ ಭಯಾನಕ ಘಟನೆ ವರದಿಯಾಗಿದೆ. 15 ವರ್ಷದ ಬಾಲಕನೊಬ್ಬ ಅಣ್ಣನನ್ನು ಕೊಂದು, ಗರ್ಭಿಣಿ ಅತ್ತಿಗೆ ಮೇಲೆ ಅತ್ಯಾಚಾರವೆಸಗಿರುವ ಘಟನೆ ಎಲ್ಲರನ್ನು ಬೆಚ್ಚಿಬೀಳಿಸಿದೆ. ಅಕ್ಟೋಬರ್ 16ರಂದು ಜೋಡಿ ಕೊಲೆ(Murder) ನಡೆದಿದೆ. ಸುಮಾರು ಎರಡು ವಾರಗಳ ನಂತರ ಬಿಹಾರದಲ್ಲಿರುವ ಮಹಿಳೆಯ ಕುಟುಂಬವು ಅನುಮಾನ ವ್ಯಕ್ತಪಡಿಸಿದ ನಂತರ ಬೆಳಕಿಗೆ ಬಂದಿದೆ.

ಆರೋಪಿ ತನ್ನ ಅಣ್ಣನ ನಡುವೆ ಜಗಳ ಮಾಡಿದ್ದ, ಕೋಪದಲ್ಲಿ ಅಣ್ಣನ ತಲೆಗೆ ಕಬ್ಬಿಣದ ರಾಡ್​​ನಿಂದ ಹೊಡೆದು ಹಲ್ಲೆ ನಡೆಸಿದ್ದಾನೆ. ಆತ ಕುಸಿದುಬಿದ್ದ ಬಳಿಕ, ಅತ್ತಿಗೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಬಾಲಕ ಅಣ್ಣನಿಗೆ ಪದೇ ಪದೇ ಹೊಡೆದಿದ್ದಾಗಿ ಒಪ್ಪಿಕೊಂಡಿದ್ದಾನೆ. ತಾನು ಗರ್ಭಿಣಿ ದಯವಿಟ್ಟು ಮಗುವಿಗಾಗಿಯಾದರೂ ತನ್ನನ್ನು ಬಿಟ್ಟುಬಿಡು ಎಂದು ಆಕೆ ಹೇಳಿದ್ದಕ್ಕೆ, ತನ್ನ ಜತೆ ಲೈಂಗಿಕ ಸಂಪರ್ಕ ಹೊಂದಿದರೆ ಬಿಡುತ್ತೇನೆ ಎಂದು ಒತ್ತಾಯಿಸಿದ್ದಾನೆ. ಆಕೆಯ ಮೇಲೆ ಅತ್ಯಾಚಾರ ನಡೆದ ಬಳಿಕ ಆಕೆ ಕಿರುಚುತ್ತಾ ಓಡಿ ಹೋಗಿದ್ದಾಳೆ.

ಮತ್ತಷ್ಟು ಓದಿ:  ಕುಡಿತದ ವಿಚಾರದಲ್ಲಿ ಗಲಾಟೆ: ಮಗನಿಂದಲೇ ದಿನೇಶ್ ಬೀಡಿ ಬ್ರ್ಯಾಂಡ್ ಮಾಲೀಕನ ಹತ್ಯೆ

ಆಕೆಯ ಹೊಟ್ಟೆಯ ಭಾಗಕ್ಕೆ ಮೊಣಕಾಲನ್ನು ಊರಿ, ನಂತರ ಕತ್ತು ಹಿಸುಕಿ ಆಕೆಯನ್ನು ಹತ್ಯೆ ಮಾಡಿದ್ದಾನೆ. ನಂತರ ಬಾಲಕ ಎರಡೂ ಶವಗಳನ್ನು ಮನೆಯ ಹಿಂಭಾಗದ ಐದು ಅಡಿ ಆಳದ ಗುಂಡಿಯಲ್ಲಿ ಹೂತು, ಬಟ್ಟೆಗಳನ್ನು ಸುಟ್ಟು, ರಕ್ತದ ಕಲೆಗಳನ್ನು ಒರೆಸಿದ್ದಾನೆ ಎಂದು ಅಧಿಕಾರಿ ಹೇಳಿದ್ದಾರೆ.

ಘಟನೆಯ ಸಮಯದಲ್ಲಿ ಮನೆಯಲ್ಲಿದ್ದ ತಾಯಿ ಸಾಕ್ಷ್ಯಗಳನ್ನು ನಾಶಮಾಡಲು ಸಹಾಯ ಮಾಡಿದ್ದಾಳೆ ಎಂದು ಆರೋಪಿಸಲಾಗಿದೆ. ಹಲ್ಲೆಯಿಂದಾಘಿ ಆರೋಪಿಯ ಅಣ್ಣನ ಕುತ್ತಿಗೆಯೇ ಮುರಿದುಹೋಗಿತ್ತು. ಮಹಿಳೆಯ ಅರ್ಧ ಬೆಳೆದ ಭ್ರೂಣವನ್ನು ಹೊರಹಾಕಲಾಗಿದೆ ಎಂದು ಮರಣೋತ್ತರ ಪರೀಕ್ಷೆಯಲ್ಲಿ ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದೀಪಾವಳಿಯ ಸಮಯದಲ್ಲಿ ಮಹಿಳೆಯನ್ನು ಸಂಪರ್ಕಿಸಲು ಪದೇ ಪದೇ ಪ್ರಯತ್ನಿಸಿದರೂ ಉತ್ತರಿಸಲಿಲ್ಲ, ನಂತರ ಆಕೆಯ ಕುಟುಂಬದವರಿಗೆ ಅನುಮಾನ ಬಂದಿತ್ತು. ಹಿಮತ್‌ನಗರ ಬಳಿ ರಸ್ತೆ ಅಪಘಾತದಲ್ಲಿ ದಂಪತಿಗಳು ಸಾವನ್ನಪ್ಪಿದ್ದಾರೆ ಎಂದು ತಾಯಿ ಅವರಿಗೆ ತಿಳಿಸಿದರೂ, ಯಾವುದೇ ಸಾಕ್ಷಿ ಸಿಗಲಿಲ್ಲ.ಬಳಿಕ ಆಕೆಯ ಕುಟುಂಬದವರು ಪೊಲೀಸರನ್ನು ಭೇಟಿಯಾದರು.ಬಾಲಕ ಕೊಲೆಯನ್ನು ಒಪ್ಪಿಕೊಂಡಿದ್ದಾನೆ ಹಾಗೂ ಸಮಾಧಿ ಸ್ಥಳಕ್ಕೆ ಕರೆದೊಯ್ದಿದ್ದಾನೆ.

ನಂತರ ಅವಶೇಷಗಳನ್ನು ಹೊರತೆಗೆಯಲಾಯಿತು.ಈ ಕುಟುಂಬವು ಸುಮಾರು 40 ವರ್ಷಗಳ ಹಿಂದೆ ಬಿಹಾರದಿಂದ ವಲಸೆ ಬಂದಿತ್ತು. ಕೋವಿಡ್ -19 ಸಾಂಕ್ರಾಮಿಕ ರೋಗದ ಸಮಯದಲ್ಲಿ ನಿಧನರಾದ ತಂದೆ ದೇವಸ್ಥಾನದ ಅರ್ಚಕರಾಗಿ ಕೆಲಸ ಮಾಡುತ್ತಿದ್ದರು. ಅಣ್ಣ ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು, ಆದರೆ ಆರೋಪಿ ದನಗಳನ್ನು ನಿರ್ವಹಿಸಲು ಸಹಾಯ ಮಾಡುತ್ತಿದ್ದ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್