AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gujarat: ಆಗ ತಾನೆ ಹುಟ್ಟಿದ ಮಗುವಿನ ದೇಹದಲ್ಲಿತ್ತು 60 ಎಂಎಲ್​ನಷ್ಟು ನಿಕೋಟಿನ್

ಆಗ ತಾನೆ ಮಗು ಹುಟ್ಟಿತ್ತು ಆದರೆ ಮಗು ಅಳುತ್ತಿರಲಿಲ್ಲ, ಮೈಯೆಲ್ಲಾ ನೀಲಿಗಟ್ಟಿತ್ತು. ತಕ್ಷಣವೇ ಮಗುವನ್ನು ಐಸಿಯುನಲ್ಲಿ ಇರಿಸಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೇರೊಂದು ಆಸ್ಪತ್ರೆಗೂ ಕಳುಹಿಸಲಾಯಿತು.

Gujarat: ಆಗ ತಾನೆ ಹುಟ್ಟಿದ ಮಗುವಿನ ದೇಹದಲ್ಲಿತ್ತು 60 ಎಂಎಲ್​ನಷ್ಟು ನಿಕೋಟಿನ್
ಮಗು
ನಯನಾ ರಾಜೀವ್
|

Updated on:Jul 03, 2023 | 8:32 AM

Share

ಆಗ ತಾನೆ ಮಗು ಹುಟ್ಟಿತ್ತು ಆದರೆ ಮಗು ಅಳುತ್ತಿರಲಿಲ್ಲ, ಮೈಯೆಲ್ಲಾ ನೀಲಿಗಟ್ಟಿತ್ತು. ತಕ್ಷಣವೇ ಮಗುವನ್ನು ಐಸಿಯುನಲ್ಲಿ ಇರಿಸಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೇರೊಂದು ಆಸ್ಪತ್ರೆಗೂ ಕಳುಹಿಸಲಾಯಿತು. ಆಗ ವೈದ್ಯರಿಗೆ ಅಚ್ಚರಿ ಕಾದಿತ್ತು. ಮಗುವಿನ ದೇಹದಲ್ಲಿ 60 ಎಂಎಲ್​ನಷ್ಟು ನಿಕೋಟಿನ್ ಪತ್ತೆಯಾಗಿದೆ. ತಾಯಿಯ ತಂಬಾಕಿನ ಚಟ ಮಗುವಿಗೂ ಮಾರಕವಾಗಿ ಪರಿಣಮಿಸಿದೆ.

ಗುಜರಾತ್​ನ ಮೆಹ್ಸಾನಾ ಆಸ್ಪತ್ರೆಯಿಂದ ಅಹಮದಾಬಾದ್​ನ ನವಜಾತ ಶಿಶುಗಳ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆರಂಭಿಕವಾಗಿ ಮಗುವಿಗೆ ಉಸಿರಾಟದ ಸಮಸ್ಯೆ ಇದ್ದಂತೆ ಕಂಡುಬಂದಿತ್ತು. ಆದರೆ ಲಕ್ಷಣಗಳು ಅಸಾಮಾನ್ಯವಾಗಿದ್ದವು ಮಗುವನ್ನು ಪರೀಕ್ಷಿಸಿದಾಗ ನಿಕೋಟಿನ್ ಅಂಶ ಪತ್ತೆಯಾಗಿತ್ತು.

ಮತ್ತಷ್ಟು ಓದಿ: Ballari News: ಬಳ್ಳಾರಿ; ಮೆಂಥೋಪ್ಲಸ್ ಡಬ್ಬಿ ನುಂಗಿ 9 ತಿಂಗಳ ಮಗು ಸಾವು

ಮಹಿಳೆ ತಂಬಾಕು ವ್ಯಸನಿ, ದಿನಕ್ಕೆ 10-15 ಬಾರಿ ತಂಬಾಕು ಸೇವಿಸುತ್ತಿದ್ದಳು ಎಂಬುದು ತಿಳಿದುಬಂದಿದೆ. ಆ ನಿಕೋಟಿನ್ ರಕ್ತದ ಮೂಲಕ ಭ್ರೂಣವನ್ನು ತಲುಪಿದೆ.

ಗುಜರಾತ್​ನಲ್ಲಿ 2020ರ ವರದಿ ಪ್ರಕಾರ ಶೇ.41ರಷ್ಟು ಪುರುಷರು ಹಾಗೂ ಶೇ.8.7 ರಷ್ಟು ಮಹಿಳೆಯರು ತಂಬಾಕು ಸೇವನೆ ಮಾಡುತ್ತಾರೆ.

ತಾನು 15ನೇ ವಯಸ್ಸಿನಿಂದ ತಂಬಾಕು ಚಟಕ್ಕೆ ಒಳಗಾಗಿದ್ದೇನೆ, ಅದು ಮಗುವಿನ ಜೀವಕ್ಕೆ ಅಪಾಯವನ್ನುಂಟು ಮಾಡುತ್ತದೆ ಎಂದು ನನಗೆ ತಿಳಿದಿರಲಿಲ್ಲ ಎಂದು ಹೇಳಿದ್ದಾರೆ.

ಇದೀಗ 5 ದಿನಗಳ ಬಳಿಕ ಮಗುವಿನ ಆರೋಗ್ಯ ಸುಧಾರಿಸುತ್ತಿದೆ. ಅಲ್ಲದೇ ಮಗುವಿಗೆ ಎದೆಹಾಲುಣಿಸುವ ಸಮಯದಲ್ಲಿ ತಂಬಾಕು ಸೇವಿಸದಮತೆ ವೈದ್ಯರು ಸಲಹೆ ನೀಡಿದ್ದಾರೆ. ಏಕೆಂದರೆ ತಾಯಿ ಹಾಲು ಮಾತ್ರ ಮಗು ಚೇತರಿಸಿಕೊಳ್ಳಲು ಸಹಾಯ ಮಾಡುತ್ತದೆ. ಮಹಿಳೆಯರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಅಭಿಯಾನ ಆರಂಭಿಸಬೇಕು ಎಂದು ವೈದ್ಯರು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:32 am, Mon, 3 July 23

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!