AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gujarat: ಆಗ ತಾನೆ ಹುಟ್ಟಿದ ಮಗುವಿನ ದೇಹದಲ್ಲಿತ್ತು 60 ಎಂಎಲ್​ನಷ್ಟು ನಿಕೋಟಿನ್

ಆಗ ತಾನೆ ಮಗು ಹುಟ್ಟಿತ್ತು ಆದರೆ ಮಗು ಅಳುತ್ತಿರಲಿಲ್ಲ, ಮೈಯೆಲ್ಲಾ ನೀಲಿಗಟ್ಟಿತ್ತು. ತಕ್ಷಣವೇ ಮಗುವನ್ನು ಐಸಿಯುನಲ್ಲಿ ಇರಿಸಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೇರೊಂದು ಆಸ್ಪತ್ರೆಗೂ ಕಳುಹಿಸಲಾಯಿತು.

Gujarat: ಆಗ ತಾನೆ ಹುಟ್ಟಿದ ಮಗುವಿನ ದೇಹದಲ್ಲಿತ್ತು 60 ಎಂಎಲ್​ನಷ್ಟು ನಿಕೋಟಿನ್
ಮಗು
ನಯನಾ ರಾಜೀವ್
|

Updated on:Jul 03, 2023 | 8:32 AM

Share

ಆಗ ತಾನೆ ಮಗು ಹುಟ್ಟಿತ್ತು ಆದರೆ ಮಗು ಅಳುತ್ತಿರಲಿಲ್ಲ, ಮೈಯೆಲ್ಲಾ ನೀಲಿಗಟ್ಟಿತ್ತು. ತಕ್ಷಣವೇ ಮಗುವನ್ನು ಐಸಿಯುನಲ್ಲಿ ಇರಿಸಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೇರೊಂದು ಆಸ್ಪತ್ರೆಗೂ ಕಳುಹಿಸಲಾಯಿತು. ಆಗ ವೈದ್ಯರಿಗೆ ಅಚ್ಚರಿ ಕಾದಿತ್ತು. ಮಗುವಿನ ದೇಹದಲ್ಲಿ 60 ಎಂಎಲ್​ನಷ್ಟು ನಿಕೋಟಿನ್ ಪತ್ತೆಯಾಗಿದೆ. ತಾಯಿಯ ತಂಬಾಕಿನ ಚಟ ಮಗುವಿಗೂ ಮಾರಕವಾಗಿ ಪರಿಣಮಿಸಿದೆ.

ಗುಜರಾತ್​ನ ಮೆಹ್ಸಾನಾ ಆಸ್ಪತ್ರೆಯಿಂದ ಅಹಮದಾಬಾದ್​ನ ನವಜಾತ ಶಿಶುಗಳ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆರಂಭಿಕವಾಗಿ ಮಗುವಿಗೆ ಉಸಿರಾಟದ ಸಮಸ್ಯೆ ಇದ್ದಂತೆ ಕಂಡುಬಂದಿತ್ತು. ಆದರೆ ಲಕ್ಷಣಗಳು ಅಸಾಮಾನ್ಯವಾಗಿದ್ದವು ಮಗುವನ್ನು ಪರೀಕ್ಷಿಸಿದಾಗ ನಿಕೋಟಿನ್ ಅಂಶ ಪತ್ತೆಯಾಗಿತ್ತು.

ಮತ್ತಷ್ಟು ಓದಿ: Ballari News: ಬಳ್ಳಾರಿ; ಮೆಂಥೋಪ್ಲಸ್ ಡಬ್ಬಿ ನುಂಗಿ 9 ತಿಂಗಳ ಮಗು ಸಾವು

ಮಹಿಳೆ ತಂಬಾಕು ವ್ಯಸನಿ, ದಿನಕ್ಕೆ 10-15 ಬಾರಿ ತಂಬಾಕು ಸೇವಿಸುತ್ತಿದ್ದಳು ಎಂಬುದು ತಿಳಿದುಬಂದಿದೆ. ಆ ನಿಕೋಟಿನ್ ರಕ್ತದ ಮೂಲಕ ಭ್ರೂಣವನ್ನು ತಲುಪಿದೆ.

ಗುಜರಾತ್​ನಲ್ಲಿ 2020ರ ವರದಿ ಪ್ರಕಾರ ಶೇ.41ರಷ್ಟು ಪುರುಷರು ಹಾಗೂ ಶೇ.8.7 ರಷ್ಟು ಮಹಿಳೆಯರು ತಂಬಾಕು ಸೇವನೆ ಮಾಡುತ್ತಾರೆ.

ತಾನು 15ನೇ ವಯಸ್ಸಿನಿಂದ ತಂಬಾಕು ಚಟಕ್ಕೆ ಒಳಗಾಗಿದ್ದೇನೆ, ಅದು ಮಗುವಿನ ಜೀವಕ್ಕೆ ಅಪಾಯವನ್ನುಂಟು ಮಾಡುತ್ತದೆ ಎಂದು ನನಗೆ ತಿಳಿದಿರಲಿಲ್ಲ ಎಂದು ಹೇಳಿದ್ದಾರೆ.

ಇದೀಗ 5 ದಿನಗಳ ಬಳಿಕ ಮಗುವಿನ ಆರೋಗ್ಯ ಸುಧಾರಿಸುತ್ತಿದೆ. ಅಲ್ಲದೇ ಮಗುವಿಗೆ ಎದೆಹಾಲುಣಿಸುವ ಸಮಯದಲ್ಲಿ ತಂಬಾಕು ಸೇವಿಸದಮತೆ ವೈದ್ಯರು ಸಲಹೆ ನೀಡಿದ್ದಾರೆ. ಏಕೆಂದರೆ ತಾಯಿ ಹಾಲು ಮಾತ್ರ ಮಗು ಚೇತರಿಸಿಕೊಳ್ಳಲು ಸಹಾಯ ಮಾಡುತ್ತದೆ. ಮಹಿಳೆಯರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಅಭಿಯಾನ ಆರಂಭಿಸಬೇಕು ಎಂದು ವೈದ್ಯರು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:32 am, Mon, 3 July 23

ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ