AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gujarat: ಆಗ ತಾನೆ ಹುಟ್ಟಿದ ಮಗುವಿನ ದೇಹದಲ್ಲಿತ್ತು 60 ಎಂಎಲ್​ನಷ್ಟು ನಿಕೋಟಿನ್

ಆಗ ತಾನೆ ಮಗು ಹುಟ್ಟಿತ್ತು ಆದರೆ ಮಗು ಅಳುತ್ತಿರಲಿಲ್ಲ, ಮೈಯೆಲ್ಲಾ ನೀಲಿಗಟ್ಟಿತ್ತು. ತಕ್ಷಣವೇ ಮಗುವನ್ನು ಐಸಿಯುನಲ್ಲಿ ಇರಿಸಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೇರೊಂದು ಆಸ್ಪತ್ರೆಗೂ ಕಳುಹಿಸಲಾಯಿತು.

Gujarat: ಆಗ ತಾನೆ ಹುಟ್ಟಿದ ಮಗುವಿನ ದೇಹದಲ್ಲಿತ್ತು 60 ಎಂಎಲ್​ನಷ್ಟು ನಿಕೋಟಿನ್
ಮಗು
ನಯನಾ ರಾಜೀವ್
|

Updated on:Jul 03, 2023 | 8:32 AM

Share

ಆಗ ತಾನೆ ಮಗು ಹುಟ್ಟಿತ್ತು ಆದರೆ ಮಗು ಅಳುತ್ತಿರಲಿಲ್ಲ, ಮೈಯೆಲ್ಲಾ ನೀಲಿಗಟ್ಟಿತ್ತು. ತಕ್ಷಣವೇ ಮಗುವನ್ನು ಐಸಿಯುನಲ್ಲಿ ಇರಿಸಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೇರೊಂದು ಆಸ್ಪತ್ರೆಗೂ ಕಳುಹಿಸಲಾಯಿತು. ಆಗ ವೈದ್ಯರಿಗೆ ಅಚ್ಚರಿ ಕಾದಿತ್ತು. ಮಗುವಿನ ದೇಹದಲ್ಲಿ 60 ಎಂಎಲ್​ನಷ್ಟು ನಿಕೋಟಿನ್ ಪತ್ತೆಯಾಗಿದೆ. ತಾಯಿಯ ತಂಬಾಕಿನ ಚಟ ಮಗುವಿಗೂ ಮಾರಕವಾಗಿ ಪರಿಣಮಿಸಿದೆ.

ಗುಜರಾತ್​ನ ಮೆಹ್ಸಾನಾ ಆಸ್ಪತ್ರೆಯಿಂದ ಅಹಮದಾಬಾದ್​ನ ನವಜಾತ ಶಿಶುಗಳ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆರಂಭಿಕವಾಗಿ ಮಗುವಿಗೆ ಉಸಿರಾಟದ ಸಮಸ್ಯೆ ಇದ್ದಂತೆ ಕಂಡುಬಂದಿತ್ತು. ಆದರೆ ಲಕ್ಷಣಗಳು ಅಸಾಮಾನ್ಯವಾಗಿದ್ದವು ಮಗುವನ್ನು ಪರೀಕ್ಷಿಸಿದಾಗ ನಿಕೋಟಿನ್ ಅಂಶ ಪತ್ತೆಯಾಗಿತ್ತು.

ಮತ್ತಷ್ಟು ಓದಿ: Ballari News: ಬಳ್ಳಾರಿ; ಮೆಂಥೋಪ್ಲಸ್ ಡಬ್ಬಿ ನುಂಗಿ 9 ತಿಂಗಳ ಮಗು ಸಾವು

ಮಹಿಳೆ ತಂಬಾಕು ವ್ಯಸನಿ, ದಿನಕ್ಕೆ 10-15 ಬಾರಿ ತಂಬಾಕು ಸೇವಿಸುತ್ತಿದ್ದಳು ಎಂಬುದು ತಿಳಿದುಬಂದಿದೆ. ಆ ನಿಕೋಟಿನ್ ರಕ್ತದ ಮೂಲಕ ಭ್ರೂಣವನ್ನು ತಲುಪಿದೆ.

ಗುಜರಾತ್​ನಲ್ಲಿ 2020ರ ವರದಿ ಪ್ರಕಾರ ಶೇ.41ರಷ್ಟು ಪುರುಷರು ಹಾಗೂ ಶೇ.8.7 ರಷ್ಟು ಮಹಿಳೆಯರು ತಂಬಾಕು ಸೇವನೆ ಮಾಡುತ್ತಾರೆ.

ತಾನು 15ನೇ ವಯಸ್ಸಿನಿಂದ ತಂಬಾಕು ಚಟಕ್ಕೆ ಒಳಗಾಗಿದ್ದೇನೆ, ಅದು ಮಗುವಿನ ಜೀವಕ್ಕೆ ಅಪಾಯವನ್ನುಂಟು ಮಾಡುತ್ತದೆ ಎಂದು ನನಗೆ ತಿಳಿದಿರಲಿಲ್ಲ ಎಂದು ಹೇಳಿದ್ದಾರೆ.

ಇದೀಗ 5 ದಿನಗಳ ಬಳಿಕ ಮಗುವಿನ ಆರೋಗ್ಯ ಸುಧಾರಿಸುತ್ತಿದೆ. ಅಲ್ಲದೇ ಮಗುವಿಗೆ ಎದೆಹಾಲುಣಿಸುವ ಸಮಯದಲ್ಲಿ ತಂಬಾಕು ಸೇವಿಸದಮತೆ ವೈದ್ಯರು ಸಲಹೆ ನೀಡಿದ್ದಾರೆ. ಏಕೆಂದರೆ ತಾಯಿ ಹಾಲು ಮಾತ್ರ ಮಗು ಚೇತರಿಸಿಕೊಳ್ಳಲು ಸಹಾಯ ಮಾಡುತ್ತದೆ. ಮಹಿಳೆಯರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಅಭಿಯಾನ ಆರಂಭಿಸಬೇಕು ಎಂದು ವೈದ್ಯರು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:32 am, Mon, 3 July 23

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್