AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಲ್ಲೆ ಪ್ರಕರಣ: ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ

ನಾಳೆ ಬಾರ್‌ಪೇಟಾದ ಉನ್ನತ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸುವುದಾಗಿ ಶಾಸಕರ ವಕೀಲರು ತಿಳಿಸಿದ್ದಾರೆ. "ನಾವು ಸಂಪೂರ್ಣವಾಗಿ ಆಶ್ಚರ್ಯಚಕಿತರಾಗಿದ್ದೇವೆ. ಅವರು ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಯಲ್ಲಿದ್ದಾಗ...

ಹಲ್ಲೆ ಪ್ರಕರಣ: ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ
ಜಿಗ್ನೇಶ್ ಮೇವಾನಿ
TV9 Web
| Edited By: |

Updated on:Apr 26, 2022 | 8:38 PM

Share

ಗುವಾಹಟಿ: ಅಸ್ಸಾಂನಲ್ಲಿ (Assam) ಮಹಿಳಾ ಪೊಲೀಸ್ ಪೇದೆಯೊಬ್ಬ ಮೇಲೆ  ಹಲ್ಲೆ ಮತ್ತು ಕಿರುಕುಳ ನೀಡಿದ ಆರೋಪದ ಮೇಲೆ ಗುಜರಾತ್‌ನ (Gujarat) ಪಕ್ಷೇತರ ಶಾಸಕ ಜಿಗ್ನೇಶ್ ಮೇವಾನಿ (Jignesh Mevani) ಅವರನ್ನು ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ. ಏಪ್ರಿಲ್ 21 ರಂದು ಬಾರ್ಪೇಟಾ ರೋಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೇವಾನಿ ಅವರು ಸಾರ್ವಜನಿಕವಾಗಿ ಅಶ್ಲೀಲ ಕೃತ್ಯಗಳು ಅಥವಾ ಪದಗಳನ್ನು ಬಳಸಿದ್ದಾರೆ. ಮಾತ್ರವಲ್ಲದೆ ಕ್ರಿಮಿನಲ್ ಬಲವನ್ನು ಬಳಸಿಕೊಂಡು ಸಾರ್ವಜನಿಕ ಸೇವಕರನ್ನು ತಮ್ಮ ಕರ್ತವ್ಯ ನಿರ್ವಹಣೆಯಿಂದ ತಡೆದಿದ್ದಾರೆ ಎಂದು ಆರೋಪ ಮಾಡಲಾಗಿದ. ನಾಳೆ ಬಾರ್‌ಪೇಟಾದ ಉನ್ನತ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸುವುದಾಗಿ ಶಾಸಕರ ವಕೀಲರು ತಿಳಿಸಿದ್ದಾರೆ. “ನಾವು ಸಂಪೂರ್ಣವಾಗಿ ಆಶ್ಚರ್ಯಚಕಿತರಾಗಿದ್ದೇವೆ. ಅವರು ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಯಲ್ಲಿದ್ದಾಗ ಅಧಿಕಾರಿಗಳ ಮೇಲಿನ ಹಲ್ಲೆಯ ಬಗ್ಗೆ ಯಾವುದೇ ಗುಸುಗುಸು ಇರಲಿಲ್ಲ. ಅವರು ಜಾಮೀನು ನೀಡಿದ ನಂತರ ಇದ್ದಕ್ಕಿದ್ದಂತೆ ಅವರನ್ನು ಮತ್ತೊಮ್ಮೆ ಬಂಧಿಸಲಾಗಿದೆ ಎಂದು ಮೇವಾನಿ ವಕೀಲರು ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ವಿರುದ್ಧದ ಟ್ವೀಟ್‌ಗಳನ್ನು ಒಳಗೊಂಡ ಪ್ರಕರಣದಲ್ಲಿ ಸೋಮವಾರ ಜಾಮೀನು ಪಡೆದ ದಲಿತ ನಾಯಕ, ಮಹಿಳಾ ಕಾನ್‌ಸ್ಟೆಬಲ್ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಎರಡನೇ ಪ್ರಕರಣದಲ್ಲಿ ತಕ್ಷಣವೇ ಬಂಧಿಸಲಾಯಿತು.

ಪ್ರಧಾನಿ ನರೇಂದ್ರ ಮೋದಿ ಅವರ ಟ್ವೀಟ್‌ಗಳ ಕುರಿತು ಅಸ್ಸಾಂ ಬಿಜೆಪಿಯ ನಾಯಕರೊಬ್ಬರು ಅವರ ವಿರುದ್ಧ ದೂರು ದಾಖಲಿಸಿದ ನಂತರ ಮೇವಾನಿ ಅವರನ್ನು ಗುಜರಾತ್‌ನ ಪಾಲನ್‌ಪುರದಲ್ಲಿ ಗುರುವಾರ ಬಂಧಿಸಲಾಯಿತು.

ಅಸ್ಸಾಂ ಕೋರ್ಟ್‌ನಿಂದ ಹೊರಬರುವಾಗ ‘ಪುಷ್ಪಾ’ ಸ್ಟೈಲ್​​ನಲ್ಲಿ ಗಡ್ಡದ ಮೇಲೆ ಕೈಯಾಡಿಸಿದ ಜಿಗ್ನೇಶ್ ಮೇವಾನಿ

ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಅವರನ್ನು ಅಸ್ಸಾಂ ನ್ಯಾಯಾಲಯದ ಹೊರಗೆ ಚಿತ್ರೀಕರಿಸಿದ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಈ ವಿಡಿಯೊದಲ್ಲಿ, ಪೊಲೀಸರಿಂದ ಸುತ್ತುವರಿದ ಪೊಲೀಸ್ ಜೀಪಿನಲ್ಲಿ ಜಿಗ್ನೇಶ್ ಮೇವಾನಿ ‘ಪುಷ್ಪಾ’ ಸ್ಟೈಲ್​​ನಲ್ಲಿ ಜುಕೇಗಾ ನಹೀ ಸಾಲಾ ಎಂಬ ರೀತಿಯಲ್ಲಿ ಗಡ್ಡವನ್ನು ಸವರುತ್ತಿರುವುದು ಕಾಣುತ್ತದೆ.

ಇದನ್ನೂ ಓದಿ: ಪ್ರಧಾನಿ ವಿರುದ್ಧ ನಿಂದನಾತ್ಮಕ ಪೋಸ್ಟ್​ ಹಾಕಿ ಜೈಲು ಸೇರಿದ್ದ ಗುಜರಾತ್​ ಶಾಸಕ ಜಿಗ್ನೇಶ್ ಮೇವಾನಿಗೆ ಜಾಮೀನು

Published On - 7:45 pm, Tue, 26 April 22

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?