AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್‌ನ ‘ಸ್ಮೃತಿವನ ಮ್ಯೂಸಿಯಂ’ ಪ್ರತಿಷ್ಠಿತ ಯುನೆಸ್ಕೋ ಪ್ರಿಕ್ಸ್ ವರ್ಸೈಲ್ಸ್ ಪ್ರಶಸ್ತಿಗೆ ಆಯ್ಕೆ; ಮೋದಿ ಮೆಚ್ಚುಗೆ

ಗುಜರಾತ್​ನ ಭುಜ್ ಜಿಲ್ಲೆಯ ಕಛ್​ನಲ್ಲಿರುವ ‘ಸ್ಮೃತಿವನ ’(Smriti Van) ಅನ್ನು ಪ್ರತಿಷ್ಠಿತ ಯುನೆಸ್ಕೋ ಪ್ರಿಕ್ಸ್ ವರ್ಸೈಲ್ಸ್ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಈ ಹಿನ್ನಲೆ ಪ್ರಧಾನಿ ನರೇಂದ್ರ ಮೋದಿ(PM Narendra Modi) ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಗುಜರಾತ್‌ನ ‘ಸ್ಮೃತಿವನ ಮ್ಯೂಸಿಯಂ’ ಪ್ರತಿಷ್ಠಿತ ಯುನೆಸ್ಕೋ ಪ್ರಿಕ್ಸ್ ವರ್ಸೈಲ್ಸ್ ಪ್ರಶಸ್ತಿಗೆ ಆಯ್ಕೆ; ಮೋದಿ ಮೆಚ್ಚುಗೆ
ಗುಜರಾತ್‌ನ ‘ಸ್ಮೃತಿವನ ಮ್ಯೂಸಿಯಂ’ ಪ್ರತಿಷ್ಠಿತ ಯುನೆಸ್ಕೋ ಪ್ರಿಕ್ಸ್ ವರ್ಸೈಲ್ಸ್ ಪ್ರಶಸ್ತಿಗೆ ಆಯ್ಕೆ; ಮೋದಿ ಮೆಚ್ಚುಗೆ
ಕಿರಣ್ ಹನುಮಂತ್​ ಮಾದಾರ್
|

Updated on:Jun 15, 2024 | 7:41 PM

Share

ನವದೆಹಲಿ, ಜೂ.15:  ಗುಜರಾತ್​ನ ಭುಜ್ ಜಿಲ್ಲೆಯ ಕಛ್​ನಲ್ಲಿರುವ ‘ಸ್ಮೃತಿವನ ’(Smriti Van) ಅನ್ನು ಪ್ರತಿಷ್ಠಿತ ಯುನೆಸ್ಕೋ ಪ್ರಿಕ್ಸ್ ವರ್ಸೈಲ್ಸ್ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಈ ಹಿನ್ನಲೆ ಪ್ರಧಾನಿ ನರೇಂದ್ರ ಮೋದಿ(PM Narendra Modi) ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕಛ್ ಪ್ರದೇಶದಲ್ಲಿ 2001ರಲ್ಲಿ ಅನಾಹುತಕಾರಿ ಭೂಕಂಪ (Kutch Earthquake) ಸಂಭವಿಸಿತ್ತು. ಭುಜ್ (Bhuj) ಭೂಕಂಪದ ಕೇಂದ್ರವಾಗಿತ್ತು. ಭೂಕಂಪದ ಅನಾಹುತಗಳನ್ನು ಜನರು ಧೈರ್ಯವಾಗಿ ಎದುರಿಸಿ ಚೇತರಿಸಿಕೊಂಡಿದ್ದನ್ನು ಸ್ಮರಿಸಲೆಂದು ನರೇಂದ್ರ ಮೋದಿ ಅವರು 2022 ಆಗಸ್ಟ್ 28 (ಭಾನುವಾರ) ರಂದು ‘ಸ್ಮೃತಿವನ’ವನ್ನು ಲೋಕಾರ್ಪಣೆ ಮಾಡಿದ್ದರು.

ಟ್ವೀಟ್​ ಮೂಲಕ ಪ್ರಧಾನಿ ಮೆಚ್ಚುಗೆ

ಕಚ್‌ನಲ್ಲಿರುವ ‘ಸ್ಮೃತಿವನ್’ 2001 ರ ಭೂಕಂಪದಲ್ಲಿ ನಾವು ಕಳೆದುಕೊಂಡವರ ಗೌರವಾರ್ಥವಾಗಿ ಹಾಗೂ ಆ ಅನಾಹುತಗಳನ್ನು ಜನರು ಧೈರ್ಯವಾಗಿ ಎದುರಿಸಿ ಚೇತರಿಸಿಕೊಂಡಿದ್ದನ್ನು ನೆನಪಿಸುತ್ತದೆ. ಈ ವಸ್ತುಸಂಗ್ರಹಾಲಯವು ಪ್ರಿಕ್ಸ್ ವರ್ಸೈಲ್ಸ್ ಮ್ಯೂಸಿಯಂಸ್ 2024 ರ ವಿಶ್ವ ಆಯ್ಕೆಯಲ್ಲಿ ಸ್ಥಾನವನ್ನು ಕಂಡುಕೊಂಡಿರುವುದು ಸಂತೋಷವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:Smriti Van: ಗುಜರಾತ್​ನ ಭುಜ್​ನಲ್ಲಿ ಇಂದು ಸ್ಮೃತಿವನ ಉದ್ಘಾಟಿಸಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ, ಇದರ 10 ವೈಶಿಷ್ಟ್ಯಗಳ ಪರಿಚಯ ಇಲ್ಲಿದೆ

ಸ್ಮೃತಿವನ ಸ್ಮಾರಕದ ಮಾಹಿತಿ ಇಲ್ಲಿದೆ…

  • 470 ಎಕರೆ ವಿಸ್ತೀರ್ಣದಲ್ಲಿ ಹರಡಿಕೊಂಡಿರುವ ಸ್ಮಾರಕದಲ್ಲಿ ಭೂಕಂಪದಲ್ಲಿ ಜೀವ ಕಳೆದುಕೊಂಡ 13,000 ಜನರ ಹೆಸರುಗಳನ್ನು ಕೆತ್ತಲಾಗಿದೆ.
  • ಸ್ಮೃತಿವನ ಸ್ಮಾರಕದಲ್ಲಿ ಸ್ಮೃತಿವನ ಭೂಕಂಪ ವಸ್ತುಸಂಗ್ರಹಾಲಯವೂ ಇದೆ. ಏಳು ಹಂತಗಳಲ್ಲಿ (ಬ್ಲಾಕ್) ಹರಡಿಕೊಂಡಿರುವ ವಸ್ತುಸಂಗ್ರಹಾಲಯವು ರಿಬರ್ತ್​ (ಮರುಜನ್ಮ), ಮರು ಹುಡುಕಾಟ (ರಿಡಿಸ್ಕವರ್), ರಿಸ್ಟೋರ್ (ಸರಿಪಡಿಸು), ಮತ್ತೆ ಕಟ್ಟು (ರಿಬಿಲ್ಡ್), ಮತ್ತೆ ಯೋಚಿಸು (ರಿಥಿಂಕ್), ಮತ್ತೆ ಜೀವಿಸು (ರಿಲೀವ್), ಮತ್ತೆ ಹೊಸದಾಗಿ ಬಳಸು (ರಿನ್ಯು) ಎಂಬ ಏಳು ಆಶಯಗಳನ್ನು (ಥೀಂ) ಹೊಂದಿದೆ.
  • ಮೊದಲ ಹಂತವು ಭೂಮಿಯ ವಿಕಸನ ಮತ್ತು ಪ್ರತಿ ಸವಾಲನ್ನೂ ಅದು ಗೆದ್ದ ಬಗೆಯನ್ನು ವಿವರಿಸಿದೆ.
  • ಎರಡನೇ ಹಂತವು ‘ಮರು ಹುಡುಕಾಟ’ದ ಆಶಯ ಹೊಂದಿದೆ. ಗುಜರಾತ್​ನ ಭೌಗೋಳಿಕ ಮೇಲ್ಮೈ ಮತ್ತು ರಾಜ್ಯಕ್ಕಿರುವ ನೈಸರ್ಗಿಕ ಸವಾಲುಗಳನ್ನು ವಿವರಿಸುತ್ತದೆ.
  • 3ನೇ ಹಂತವು ಭೂಕಂಪದ ನಂತರ ತಕ್ಷಣಕ್ಕೆ ಏನಾಯಿತು ಎನ್ನುವುದನ್ನು ಕಟ್ಟಿಕೊಡುತ್ತದೆ. ನೂರಾರು ವ್ಯಕ್ತಿಗಳು, ಸಂಘ ಸಂಸ್ಥೆಗಳಿಂದ ಸಂಗ್ರಹಿಸಿರುವ ಛಾಯಾಚಿತ್ರಗಳನ್ನು ಒಪ್ಪಗೊಳಿಸಿ ಪ್ರದರ್ಶಿಸಲಾಗಿದೆ.
  • 4ನೇ ಹಂತವು 2001ರ ಭೂಕಂಪದ ನಂತರ ನಡೆದ ಗುಜರಾತ್​ನ ಮರುನಿರ್ಮಾಣ ಪ್ರಕ್ರಿಯೆಯನ್ನು ವಿವರಿಸುತ್ತದೆ.
  • 5ನೇ ಹಂತವು ಮರು ನಿರ್ಮಾಣ ಚಟುವಟಿಕೆಗಳ ಬಗ್ಗೆ ಗಮನ ಸೆಳೆಯುತ್ತದೆ. ವಿವಿಧ ರೀತಿಯ ನೈಸರ್ಗಿಕ ದುರಂತಗಳು ಮತ್ತು ಭವಿಷ್ಯಕ್ಕಾಗಿ ಮಾಡಿಕೊಳ್ಳಬೇಕಾದ ಸಿದ್ಧತೆಯ ಬಗ್ಗೆ ಗಮನ ಸೆಳೆಯುತ್ತದೆ.
  • ನೈಸರ್ಗಿಕ ದುರಂತಗಳಿಂದ ಆಗುವ ಅನಾಹುತಗಳನ್ನು ಕಡಿಮೆ ಮಾಡಲು ತೆಗೆದುಕೊಳ್ಳಬೇಕಾದ ಕ್ರಮಗಳು ಮತ್ತು ಜೀವಹಾನಿ ತಪ್ಪಿಸಲು ಏನೆಲ್ಲಾ ಮಾಡಬಹುದು ಎನ್ನುವ ಬಗ್ಗೆ ಈ ಬ್ಲಾಕ್​ನಲ್ಲಿ ಮಾಹಿತಿಯಿದೆ.
  • 6ನೇ ಬ್ಲಾಕ್​ನಲ್ಲಿ 5ಡಿ ಸಿಮ್ಯುಲೇಟರ್ ಇದ್ದು, ಇಲ್ಲಿಗೆ ಭೇಟಿ ಕೊಡುವವರು ಭೂಕಂಪದ ಆಘಾತ ಮತ್ತು ಅನಾಹುಗಳ ತೀವ್ರತೆಯನ್ನು ಅರ್ಥ ಮಾಡಿಕೊಳ್ಳುತ್ತಾರೆ.
  • 7ನೇ ಬ್ಲಾಕ್​ನಲ್ಲಿ ಜನರು ಭೂಕಂಪದಲ್ಲಿ ಮೃತಪಟ್ಟವರನ್ನು ಮತ್ತೆ ನೆನಪಿಸಿಕೊಂಡು, ಶ್ರದ್ಧಾಂಜಲಿ ಸಲ್ಲಿಸಲು ಅವಕಾಶವಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:12 pm, Sat, 15 June 24

Follow Us
Kiran Hanumant Madar
Kiran Hanumant Madar

ಹುಟ್ಟೂರು- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನಕಟ್ಟ, ಶಿರಸಿಯಲ್ಲಿ ಬಿ.ಎ ಪತ್ರಿಕೋಧ್ಯಮ ಮುಗಿಸಿ, ವಾರ್ತಾ ಇಲಾಖೆಯಲ್ಲಿ ಒಂದು ವರ್ಷದ ತರಭೇತಿ ಪಡೆದು, ಟಿವಿ9 ಡಿಜಿಟಲ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ.

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ