AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಲ್ಶನ್ ಕುಮಾರ್ ಹತ್ಯೆ ಪ್ರಕರಣ: ದಾವೂದ್ ಸಹಚರ ಅಬ್ದುಲ್ ರೌಫ್ ಜೀವಾವಧಿ ಶಿಕ್ಷೆ ಎತ್ತಿಹಿಡಿದ ಬಾಂಬೆ ಹೈಕೋರ್ಟ್

Gulshan Kumar Murder Case: ಗ್ಯಾಂಗ್‌ಸ್ಟರ್ ದಾವೂದ್ ಇಬ್ರಾಹಿಂ ಸಹಾಯಕನಾದ ಅಬ್ದುಲ್ ರೌಫ್ ಮರ್ಚೆಂಟ್ ಗೆ 1997 ರ ಗುಲ್ಶನ್ ಕುಮಾರ್ ಹತ್ಯೆ ಪ್ರಕರಣದಲ್ಲಿ 2002ರಲ್ಲಿ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು

ಗುಲ್ಶನ್ ಕುಮಾರ್ ಹತ್ಯೆ ಪ್ರಕರಣ: ದಾವೂದ್ ಸಹಚರ ಅಬ್ದುಲ್ ರೌಫ್ ಜೀವಾವಧಿ ಶಿಕ್ಷೆ ಎತ್ತಿಹಿಡಿದ ಬಾಂಬೆ ಹೈಕೋರ್ಟ್
ಗುಲ್ಶನ್ ಕುಮಾರ್ (ಕೃಪೆ: ಯುಟ್ಯೂಬ್)
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Jul 01, 2021 | 1:59 PM

ಮುಂಬೈ: ಟಿ- ಸೀರೀಸ್ (T-series) ಸಂಸ್ಥಾಪಕ ಗುಲ್ಶನ್ ಕುಮಾರ್ ಅವರ ಕೊಲೆ ಪ್ರಕರಣದಲ್ಲಿ ಅಬ್ದುಲ್ ರೌಫ್ ಮರ್ಚೆಂಟ್ ಜೀವಾವಧಿ ಶಿಕ್ಷೆಯನ್ನು ಬಾಂಬೆ ಹೈಕೋರ್ಟ್ ಗುರುವಾರ ಎತ್ತಿಹಿಡಿದಿದೆ. ಗ್ಯಾಂಗ್‌ಸ್ಟರ್ ದಾವೂದ್ ಇಬ್ರಾಹಿಂ ಸಹಾಯಕನಾದ ಅಬ್ದುಲ್ ರೌಫ್ ಮರ್ಚೆಂಟ್ ಗೆ 1997 ರ ಗುಲ್ಶನ್ ಕುಮಾರ್ ಹತ್ಯೆ ಪ್ರಕರಣದಲ್ಲಿ 2002ರಲ್ಲಿ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು. ಟಿಪ್ಸ್ ಇಂಡಸ್ಟ್ರಿಯ ಆರೋಪಿ ರಮೇಶ್ ತೌರಾನಿಯನ್ನು ಖುಲಾಸೆಗೊಳಿಸುವುದರ ವಿರುದ್ಧ ರಾಜ್ಯ ಸರ್ಕಾರ ಸಲ್ಲಿಸಿದ್ದ ಮನವಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

ನ್ಯಾಯಮೂರ್ತಿ ಎಸ್.ಎಸ್ ಜಾಧವ್ ಮತ್ತು ಎನ್. ಆರ್. ಬೋರ್ಕರ್ ಅವರ ವಿಭಾಗೀಯ ಪೀಠವು ಅಬ್ದುಲ್ ರೌಫ್ ದಾವೂದ್ ಮರ್ಚೆಂಟ್ ಗೆ ಅಪರಾಧ ಹಿನ್ನೆಲೆ ಇದೆ. ಬಂಧನದ ನಂತರ ಅವನು ಪರಾರಿಯಾಗಿದ್ದರಿಂದ ಕ್ಷಮೆಗೆ ಅರ್ಹನಲ್ಲ. ಈತನನ್ನು 2009 ರಲ್ಲಿ ಫರ್ಲೋಫ್ ನಲ್ಲಿ ಬಿಡುಗಡೆ ಮಾಡಲಾಗಿತ್ತು. ಈತ ಪೆರೋಲ್ ನಲ್ಲಿದ್ದಾಗ ಓಡಿಹೋಗಿದ್ದು ಅಪರಾಧ ಚಟುವಟಿಕೆಗಳನ್ನು ಮುಂದುವರೆಸಿದರು. ಆದ್ದರಿಂದ ನ್ಯಾಯದ ಹಿತದೃಷ್ಟಿಯಿಂದ, ಅವರು ಯಾವುದೇ ಕ್ಷಮೆಗೆ ಅರ್ಹರಲ್ಲ ಎಂದು ನ್ಯಾಯಪೀಠ ಹೇಳಿದೆ.

ನ್ಯಾಯಪೀಠ ತನ್ನ ಆದೇಶದಲ್ಲಿ, “ಏಪ್ರಿಲ್ 29, 2002 ರ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರ ತೀರ್ಪಿನಿಂದ ಐಪಿಸಿಯ ಸೆಕ್ಷನ್ 302, 307 ರ ಅಡಿಯಲ್ಲಿ ಮೇಲ್ಮನವಿ ಅಬ್ದುಲ್ ರೌಫ್ ದಾವೂದ್ ಮರ್ಚೆಂಟ್ ವಿರುದ್ಧದ ಶಿಕ್ಷೆ ಮತ್ತು ಶಿಕ್ಷೆಯನ್ನು ಎತ್ತಿಹಿಡಿಯಲಾಗಿದೆ. ಐಪಿಸಿಯ ಸೆಕ್ಷನ್ 120-ಬಿ ಅಡಿಯಲ್ಲಿರುವ ವಿಭಾಗಕ್ಕೆ ಮೇಲ್ಮನವಿ ಶಿಕ್ಷೆ ವಿಧಿಸಲಾಗುತ್ತದೆ. ಆದಾಗ್ಯೂ, ಮೇಲ್ಮನವಿ ಐಪಿಸಿಯ 392 (ದರೋಡೆ) ಮತ್ತು 397 (ದರೋಡೆ ಅಥವಾ ಸಾವಿಗೆ ಕಾರಣವಾಗುವ ಪ್ರಯತ್ನದಲ್ಲಿ) ಅಡಿಯಲ್ಲಿ ಆರೋಪಗಳಿಂದ ಖುಲಾಸೆಗೊಂಡಿದ್ದಾನೆ. ” ಎಂದು ಹೇಳಿದೆ.

ಅಬ್ದುಲ್ ರೌಫ್ ಸಹೋದರ ಆರೋಪಿ ಅಬ್ದುಲ್ ರಶೀದ್ ದಾವೂದ್ ಮರ್ಚೆಂಟ್ ನ್ನು ಖುಲಾಸೆಗೊಳಿಸುವುದರ ವಿರುದ್ಧ ರಾಜ್ಯವು ಮೇಲ್ಮನವಿ ಸಲ್ಲಿಸಲು ನ್ಯಾಯಾಲಯವು ಭಾಗಶಃ ಅನುಮತಿ ನೀಡಿತು. ಅಬ್ದುಲ್ ರಶೀದ್ ಜೀವಾವಧಿ ಶಿಕ್ಷೆ ಅನುಭವಿಸಲಿದ್ದಾರೆ.

ಆಗಸ್ಟ್ 12, 1997 ರಂದು ಮುಂಬೈನ ದೇವಾಲಯದಿಂದ ಹೊರಬರುವಾಗ ಟಿ-ಸೀರೀಸ್ ಮಾಲೀಕ ಗುಲ್ಶನ್ ಕುಮಾರ್ ಅವರನ್ನು ಗುಂಡಿಕ್ಕಿ ಕೊಲ್ಲಲಾಯಿತು. ತನಿಖೆಯ ಪ್ರಕಾರ, ಅವರ ಉದ್ಯಮದ ಪ್ರತಿಸ್ಪರ್ಧಿಗಳು ದುಬೈ ಮೂಲದ ದರೋಡೆಕೋರ ಅಬು ಸಲೀಂ ಗುಲ್ಶನ್ ಹತ್ಯೆಗೆ ಸುಪಾರಿ ನೀಡಿದ್ದನು. ಆದಾಗ್ಯೂ, ವಿಚಾರಣಾ ನ್ಯಾಯಾಲಯವು ರೌಫ್‌ಗೆ ಮಾತ್ರ ಶಿಕ್ಷೆ ವಿಧಿಸಿತು ಮತ್ತು ಇತರರನ್ನು ಖುಲಾಸೆಗೊಳಿಸಿತು.

ಇದನ್ನೂ ಓದಿ: Jaggesh’s Son Car Accident: ನಟ ಜಗ್ಗೇಶ್​ ಪುತ್ರ ಗುರುರಾಜ್​ ಇದ್ದ ಕಾರು ಅಪಘಾತ; ಹೈದರಾಬಾದ್​ ರಸ್ತೆಯಲ್ಲಿ ಅವಘಡ

(Gulshan Kumar murder case Bombay HC upholds life imprisonment sentence to Dawood aide Abdul Rauf Merchant)

ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಕಳ್ಳನ ಕರಾಮತ್ತು ಸಿಸಿಟಿವಿ ಕೆಮೆರಾದಲ್ಲಿ ಸೆರೆ, ಪೊಲೀಸರಿಗೆ ಅದೇ ಕ್ಲೂ!
ಕಳ್ಳನ ಕರಾಮತ್ತು ಸಿಸಿಟಿವಿ ಕೆಮೆರಾದಲ್ಲಿ ಸೆರೆ, ಪೊಲೀಸರಿಗೆ ಅದೇ ಕ್ಲೂ!
ಡಿಸಿಪಿಗಳ ಜತೆ ಚರ್ಚಿಸಿ ಆರ್​ಸಿಬಿಗೆ ಸತ್ಕಾರ ಕೂಟ ಏರ್ಪಡಿಸಲಾಗಿತ್ತು: ಜೋಶಿ
ಡಿಸಿಪಿಗಳ ಜತೆ ಚರ್ಚಿಸಿ ಆರ್​ಸಿಬಿಗೆ ಸತ್ಕಾರ ಕೂಟ ಏರ್ಪಡಿಸಲಾಗಿತ್ತು: ಜೋಶಿ
ಜನಸಂದಣಿ ಕಂಡು ಕನ್ನಡಿಗರಿಗಾದಂತೆ ಜನಪ್ರತಿನಿಧಿಗಳಿಗೆ ಗಾಬರಿ ಆಗುತ್ತಿಲ್ಲ
ಜನಸಂದಣಿ ಕಂಡು ಕನ್ನಡಿಗರಿಗಾದಂತೆ ಜನಪ್ರತಿನಿಧಿಗಳಿಗೆ ಗಾಬರಿ ಆಗುತ್ತಿಲ್ಲ
ಸುಹಾಸ್ ಕೊಲೆಯಲ್ಲಿ ಕನಿಷ್ಠ 40 ಜನ ಶಾಮೀಲಾಗಿದ್ದಾರೆ: ಪ್ರದೀಪ್ ಸರಿಪಲ್ಲ
ಸುಹಾಸ್ ಕೊಲೆಯಲ್ಲಿ ಕನಿಷ್ಠ 40 ಜನ ಶಾಮೀಲಾಗಿದ್ದಾರೆ: ಪ್ರದೀಪ್ ಸರಿಪಲ್ಲ
ಕಾಲ್ತುಳಿತ: ರಾಜ್ಯಪಾಲರಿಗೆ ಆಹ್ವಾನ ಕೊಟ್ಟಿದ್ಯಾರು? ಡಿಸಿಎಂ ಹೇಳಿದ್ದಿಷ್ಟು
ಕಾಲ್ತುಳಿತ: ರಾಜ್ಯಪಾಲರಿಗೆ ಆಹ್ವಾನ ಕೊಟ್ಟಿದ್ಯಾರು? ಡಿಸಿಎಂ ಹೇಳಿದ್ದಿಷ್ಟು
ಕೊಲೆಯಾದವ ಮತ್ತು ಆರೋಪಿಗಳೆಲ್ಲ ಅಸ್ಸಾಂ ಮೂಲದವರು, ಮದ್ಯದ ಅಮಲಿನಲ್ಲಿ ಹತ್ಯೆ
ಕೊಲೆಯಾದವ ಮತ್ತು ಆರೋಪಿಗಳೆಲ್ಲ ಅಸ್ಸಾಂ ಮೂಲದವರು, ಮದ್ಯದ ಅಮಲಿನಲ್ಲಿ ಹತ್ಯೆ
ಶ್ವೇತಾ ಮನೆ ಬಿಟ್ಟು ಹೋಗ್ತಿದ್ಳು, ನನ್ನಮ್ಮನನ್ನು ಹೊಡೆಯುತ್ತಿದ್ದಳು: ರಘು
ಶ್ವೇತಾ ಮನೆ ಬಿಟ್ಟು ಹೋಗ್ತಿದ್ಳು, ನನ್ನಮ್ಮನನ್ನು ಹೊಡೆಯುತ್ತಿದ್ದಳು: ರಘು
‘ಸರಿಗಮಪ’ ವಿನ್ನರ್ ಶಿವಾನಿಗೆ ಸಿಕ್ಕ ಹಣ ಎಷ್ಟು? ಬಾಳು ಬೆಳಗುಂದಿಗೂ ಬಂಪರ್
‘ಸರಿಗಮಪ’ ವಿನ್ನರ್ ಶಿವಾನಿಗೆ ಸಿಕ್ಕ ಹಣ ಎಷ್ಟು? ಬಾಳು ಬೆಳಗುಂದಿಗೂ ಬಂಪರ್
ಊಟ ಕೊಡುವುದು ತಡವಾಗಿದ್ದಕ್ಕೆ ರೆಸ್ಟೋರೆಂಟ್​ ಧ್ವಂಸ
ಊಟ ಕೊಡುವುದು ತಡವಾಗಿದ್ದಕ್ಕೆ ರೆಸ್ಟೋರೆಂಟ್​ ಧ್ವಂಸ