AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಣಿಪುರ: 2 ಗುಂಪುಗಳ ನಡುವಿನ ಘರ್ಷಣೆಯಲ್ಲಿ 13 ಸಾವು: ವರದಿ

ಮ್ಯಾನ್ಮಾರ್‌ಗೆ ತೆರಳುತ್ತಿದ್ದ ಉಗ್ರಗಾಮಿಗಳ ಗುಂಪನ್ನು ಪ್ರದೇಶದಲ್ಲಿ ಪ್ರಬಲವಾಗಿರುವ ಮತ್ತೊಂದು ಗುಂಪಿನ ಬಂಡುಕೋರರು ಹೊಂಚು ಹಾಕಿದ್ದಾರೆ" ಎಂದು ತೆಂಗನೌಪಾಲ್  ಜಿಲ್ಲೆಯ ಅಧಿಕಾರಿಯೊಬ್ಬರು ತಿಳಿಸಿದ್ದು, ಭದ್ರತಾಪಡೆಗಳು ಇಲ್ಲಿವರೆಗೆ 13 ಮೃತದೇಹಗಳನ್ನು ಪತ್ತೆ ಹಚ್ಚಿವೆ.

ಮಣಿಪುರ: 2 ಗುಂಪುಗಳ ನಡುವಿನ ಘರ್ಷಣೆಯಲ್ಲಿ 13 ಸಾವು: ವರದಿ
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Dec 04, 2023 | 9:05 PM

Share

ಇಂಫಾಲ ಡಿಸೆಂಬರ್ 04: ಮಣಿಪುರದ (Manipur) ತೆಂಗನೌಪಾಲ್ (Tengnoupal) ಜಿಲ್ಲೆಯಲ್ಲಿ ಸೋಮವಾರ ಎರಡು ಗುಂಪುಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ 13 ಜನರು ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೋಮವಾರ ಮಧ್ಯಾಹ್ನ ಲೀತು ಗ್ರಾಮದಲ್ಲಿ ಈ ಘಟನೆ ನಡೆದಿದೆ. “ಮ್ಯಾನ್ಮಾರ್‌ಗೆ ತೆರಳುತ್ತಿದ್ದ ಉಗ್ರಗಾಮಿಗಳ ಗುಂಪನ್ನು ಪ್ರದೇಶದಲ್ಲಿ ಪ್ರಬಲವಾಗಿರುವ ಮತ್ತೊಂದು ಗುಂಪಿನ ಬಂಡುಕೋರರು ಹೊಂಚು ಹಾಕಿದ್ದಾರೆ” ಎಂದು ತೆಂಗನೌಪಾಲ್  ಜಿಲ್ಲೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಭದ್ರತಾ ಪಡೆಗಳು ಇದುವರೆಗೆ 13 ಶವಗಳನ್ನು ವಶಪಡಿಸಿಕೊಂಡಿವೆ, ಅವರ ಗುರುತುಗಳು ಇನ್ನೂ ಪತ್ತೆಯಾಗಿಲ್ಲ ಆದರೆ ಅವರು ಸ್ಥಳೀಯರಲ್ಲ ಎಂದು ಅವರು ಹೇಳಿದರು. ತೆಂಗ್ನೌಪಾಲ್ ಜಿಲ್ಲೆ ಮ್ಯಾನ್ಮಾರ್‌ನೊಂದಿಗೆ ಗಡಿಯನ್ನು ಹಂಚಿಕೊಂಡಿದೆ.

ಹಿಂದೂಸ್ತಾನ್ ಟೈಮ್ಸ್ ವರದಿ ಪ್ರಕಾರ, ತೆಂಗನೌಪಾಲ್ ಜಿಲ್ಲೆಯ ಸೈಬೋಲ್ ಬಳಿಯ ಲೀಥು ಗ್ರಾಮದಲ್ಲಿ ಎರಡು ಗುಂಪುಗಳ ಉಗ್ರಗಾಮಿಗಳ ನಡುವೆ ಗುಂಡಿನ ಚಕಮಕಿ ನಡೆದಿರುವ ಬಗ್ಗೆ ಮಧ್ಯಾಹ್ನದ ಸುಮಾರಿಗೆ ಮಾಹಿತಿ ಸಿಕ್ಕಿದೆ

“ಹತ್ತಿರದ ಭದ್ರತಾ ಪಡೆಗಳು ಈ ಸ್ಥಳದಿಂದ ಸುಮಾರು 10 ಕಿಮೀ ದೂರದಲ್ಲಿವೆ. ನಮ್ಮ ಪಡೆಗಳು ಸ್ಥಳಕ್ಕಾಗಮಿಸಿ ಸ್ಥಳವನ್ನು ತಲುಪಿದಾಗ, ಅವರು ಲೀಥು ಗ್ರಾಮದಲ್ಲಿ 13 ಶವಗಳನ್ನು ಕಂಡುಕೊಂಡರು. ಪಡೆಗಳಿಗೆ ಮೃತದೇಹಗಳ ಪಕ್ಕದಲ್ಲಿ ಯಾವುದೇ ಶಸ್ತ್ರಾಸ್ತ್ರಗಳು ಕಂಡುಬಂದಿಲ್ಲ. ಪೊಲೀಸರು ಸ್ಥಳಕ್ಕೆ ತಲುಪಿದ್ದಾರೆ. ಅವರು ಈ ವಿಷಯವನ್ನು ತನಿಖೆ ಮಾಡುತ್ತಾರೆ ಎಂದು ಅಧಿಕಾರಿಯೊಬ್ಬರು ಹೇಳಿರುವುದಾಗಿ  ವರದಿ ಉಲ್ಲೇಖಿಸಿದೆ.

ಇದನ್ನೂ ಓದಿ:ದೆಹಲಿಯಲ್ಲಿ ಮಣಿಪುರದ ದಂಪತಿ ಮೇಲೆ ಜನರ ಗುಂಪಿನಿಂದ ಹಲ್ಲೆ 

ಮೃತರು ಲೀಥು ಪ್ರದೇಶದವರಲ್ಲ, ಬಹುಶಃ ಬೇರೆ ಸ್ಥಳದಿಂದ ಬಂದಿರಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೃಹತ್” ಗುಂಡಿನ ಚಕಮಕಿಯಿಂದಾಗಿ ಮೃತ ದೇಹದ ಮೇಲೆ ಹಲವಾರು ಗುಂಡಿನ ಗಾಯಗಳಿವೆ. ಶವಗಳ ಬಳಿ ಯಾವುದೇ ಶಸ್ತ್ರಾಸ್ತ್ರಗಳು ಕಂಡುಬಂದಿಲ್ಲ ಎಂದು ರಾಜ್ಯ ರಾಜಧಾನಿ ಇಂಫಾಲ್‌ನ ಅಧಿಕಾರಿ ರಾಯಿಟರ್ಸ್ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ. “ಅವರುಸತ್ತ ನಂತರ ಶಸ್ತ್ರಾಸ್ತ್ರಗಳನ್ನು ಲೂಟಿ ಮಾಡುವ ಸಾಧ್ಯತೆಯಿದೆ. ಸತ್ತವರು ಅಥವಾ ಉಗ್ರಗಾಮಿ ಗುಂಪುಗಳನ್ನು ತಕ್ಷಣವೇ ಗುರುತಿಸಲು ಸಾಧ್ಯವಾಗಲಿಲ್ಲ ಎಂದು ಆ ಅಧಿಕಾರಿ ಹೇಳಿದ್ದಾರೆ.

ಈಶಾನ್ಯ ರಾಜ್ಯವು ಮೇ 3 ರಿಂದ ಜನಾಂಗೀಯ ಹಿಂಸಾಚಾರದಿಂದ ನಲುಗಿ ಹೋಗಿದೆ. ಈ ಹಿಂಸಾಚಾರ 180 ಜೀವಗಳನ್ನು ಬಲಿ ತೆಗೆದುಕೊಂಡಿತು ಮತ್ತು ಸುಮಾರು 50,000 ಮಂದಿಯನ್ನು ನಿರಾಶ್ರಿತರನ್ನಾಗಿ ಮಾಡಿದೆ.

ಗಡಿ ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯದಲ್ಲಿ ಇಂಟರ್ನೆಟ್ ಅನ್ನು ಮರುಸ್ಥಾಪಿಸಿದ ಕೇವಲ ಒಂದು ದಿನದ ನಂತರ ತೆಂಗ್ನೌಪಾಲ್ ಜಿಲ್ಲೆಯಲ್ಲಿ ಗುಂಡಿನ ಚಕಮಕಿ ನಡೆದಿದೆ. ಕೇಂದ್ರ ಸರ್ಕಾರ ಮತ್ತು ಮಣಿಪುರ ಸರ್ಕಾರವು ರಾಜ್ಯದ ಅತ್ಯಂತ ಹಳೆಯ ಉಗ್ರಗಾಮಿ ಸಂಘಟನೆಯಾದ ಯುನೈಟೆಡ್ ನ್ಯಾಶನಲ್ ಲಿಬರೇಶನ್ ಫೋರ್ಸ್ (UNLF) ನೊಂದಿಗೆ ನವದೆಹಲಿಯಲ್ಲಿ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದ ನಾಲ್ಕು ದಿನಗಳ ನಂತರ ಇಂಟರ್ನೆಟ್ ಮರುಸ್ಥಾಪಿಸಲಾಗಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:58 pm, Mon, 4 December 23

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ