AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೋಯ್ಡಾ ಫಿಲ್ಮ್ ಸಿಟಿಯಲ್ಲಿ ಗುಂಡಿನ ಚಕಮಕಿ, ವಾಂಟೆಡ್ ಕ್ರಿಮಿನಲ್​ನ ಬಂಧನ

ಡ್ಯಾನಿಶ್ (27) ಅಲಿಯಾಸ್ ಸಯರ್ ಅಲಿಯಾಸ್ ಚೀತಾ ವಿರುದ್ಧ ದೆಹಲಿ ಎನ್‌ಸಿಆರ್‌ನ ವಿವಿಧ ಪೊಲೀಸ್ ಠಾಣೆಗಳಲ್ಲಿ ಲೂಟಿ ಆರೋಪದಡ್ಡಿಯಲ್ಲಿ 20 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಉಪ ಆಯುಕ್ತ (ನೋಯ್ಡಾ) ಅಶುತೋಷ್ ದ್ವಿವೇದಿ ಹೇಳಿದ್ದಾರೆ.

ನೋಯ್ಡಾ ಫಿಲ್ಮ್ ಸಿಟಿಯಲ್ಲಿ ಗುಂಡಿನ ಚಕಮಕಿ, ವಾಂಟೆಡ್ ಕ್ರಿಮಿನಲ್​ನ ಬಂಧನ
Gunfight in Noida Film City, Arrest of wanted criminal
TV9 Web
| Edited By: |

Updated on:Oct 07, 2022 | 12:57 PM

Share

ನೋಯ್ಡಾ; ನೋಯ್ಡಾ ಫಿಲ್ಮ್‌ಸಿಟಿಯಲ್ಲಿ ಹಲವಾರು ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಯನ್ನು ಶುಕ್ರವಾರದಂದು ಪೊಲೀಸರು ನಡೆಸಿದ ಎನ್‌ಕೌಂಟರ್​ ಮಾಡುವಾಗ ಮೂಲಕ ಆತನನ್ನು ಬಂಧಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ . ಡ್ಯಾನಿಶ್ (27) ಅಲಿಯಾಸ್ ಸಯರ್ ಅಲಿಯಾಸ್ ಚೀತಾ ವಿರುದ್ಧ ದೆಹಲಿ ಎನ್‌ಸಿಆರ್‌ನ ವಿವಿಧ ಪೊಲೀಸ್ ಠಾಣೆಗಳಲ್ಲಿ ಲೂಟಿ ಆರೋಪದಡ್ಡಿಯಲ್ಲಿ 20 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಉಪ ಆಯುಕ್ತ (ನೋಯ್ಡಾ) ಅಶುತೋಷ್ ದ್ವಿವೇದಿ ಹೇಳಿದ್ದಾರೆ.

ಚೆನು ಗ್ಯಾಂಗ್‌ನ ಶೂಟರ್ ದಾನಿಶ್, ನೋಯ್ಡಾದ ಸೆಕ್ಟರ್ 20 ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳಿಗೆ ಸಂಬಂಧಿಸಿದಂತೆ ಇತ ಬೇಕಾಗಿದ್ದನು. ಶುಕ್ರವಾರ ಬೆಳಗ್ಗೆ ಬ್ರಹ್ಮಪುತ್ರ ಮಾರುಕಟ್ಟೆ ಬಳಿ ಪೊಲೀಸ್ ತಪಾಸಣೆ ನಡೆಸಲಾಯಿತು ಮತ್ತು ಡ್ಯಾನಿಶ್ ಅವರನ್ನು ತಡೆದರು. ಆದರೆ, ಆತ ಸ್ಥಳದಿಂದ ಓಡಲು ಶುರು ಮಾಡಿದ್ದಾನೆ. ಬೆಳವಣಿಗೆಯ ಬಗ್ಗೆ ಹತ್ತಿರದ ಪೊಲೀಸ್ ಪೋಸ್ಟ್‌ಗಳಿಗೆ ಎಚ್ಚರಿಕೆ ನೀಡಲಾಗಿದೆ ಎಂದು ದ್ವಿವೇದಿ ಹೇಳಿದರು.

ಬ್ರಹ್ಮಪುತ್ರ ಮಾರ್ಕೆಟ್ ಪೋಲಿಸ್ ಪೋಸ್ಟ್, ಅಟ್ಟಾ ಮತ್ತು ಸೆಕ್ಟರ್ 18 ಪೋಸ್ಟ್‌ಗಳ ತಂಡಗಳು ಅವನನ್ನು ಬೆನ್ನಟ್ಟಿದವು, ಸೆಕ್ಟರ್ 16A ನಲ್ಲಿರುವ ಫಿಲ್ಮ್‌ಸಿಟಿಯ ಪವರ್ ಹೌಸ್ ಬಳಿ ಗುಂಡಿನ ಚಕಮಕಿ ನಡೆಯಿತು. ತಪ್ಪಿಸಿಕೊಳ್ಳುವ ಸಲುವಾಗಿ ಡ್ಯಾನಿಶ್ ಪೊಲೀಸ್ ತಂಡಗಳ ಮೇಲೆ ಗುಂಡು ಹಾರಿಸಿದ ಆದರೆ ನಮ್ಮ ಸಿಬ್ಬಂದಿಗಳು ಕೂಡ ಗುಂಡಿನ ದಾಳಿಯನ್ನು ಮಾಡಿದ್ದಾರೆ ಇದರಿಂದ ಆತನಿಗೆ ಗಾಯವಾಗಿದೆ ಎಂದು ದ್ವಿವೇದಿ ಹೇಳಿದರು.

ಡ್ಯಾನಿಶ್‌ನಿಂದ ಪಿಸ್ತೂಲ್ ಮತ್ತು ಕೆಲವು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಕಾಲಿಗೆ ಗುಂಡು ತಗುಲಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಹೇಳಿದರು. ಇಂದು ಬೆಳಿಗ್ಗೆ ಅವನೊಂದಿಗಿದ್ದ ಅವನ ಸಹಚರನನ್ನು ಪತ್ತೆಹಚ್ಚಲು ಪೊಲೀಸರು ಕೂಂಬಿಂಗ್ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ ಆದರೆ ಪರಾರಿಯಾಗಿದ್ದಾರೆ. ಶೀಘ್ರದಲ್ಲೇ ಅವರನ್ನು ಬಂಧಿಸಲಾಗುವುದು ಎಂದು ಅಧಿಕಾರಿಗಳು ಹೇಳಿದರು.

Published On - 12:57 pm, Fri, 7 October 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ