ಬಿಹಾರದ ಮಾಜಿ ಸಿಎಂ ನಿತೀಶ್ ಕುಮಾರ್ ನಿವಾಸದ ಹೊರಗೆ ಭಾರಿ ಗುಂಡಿನ ದಾಳಿ: ಇಬ್ಬರು ಯುವಕರಿಗೆ ಗಂಭೀರ ಗಾಯ
ಬಿಹಾರದ ರಾಜಧಾನಿ ಪಾಟ್ನಾ ಸಮೀಪದ ಭಕ್ತಿಯಾರ್ಪುರದಲ್ಲಿ ಹಾಡಹಗಲೇ ಭಾರಿ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಿಹಾರದ ಮಾಜಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ನಿವಾಸದ ಮುಂಭಾಗದಲ್ಲೇ ಹಾಗೂ ಭಕ್ತಿಯಾರ್ಪುರ ಪೊಲೀಸ್ ಠಾಣೆಯಿಂದ ಕೇವಲ 50 ಮೀಟರ್ ಅಂತರದಲ್ಲಿ ಈ ಕೃತ್ಯ ನಡೆದಿದ್ದು, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಾನಾಪೂರ, ದೇದಾರ್ ಗ್ರಾಮದ ನಿವಾಸಿಗಳಾದ ವಿಶಾಲ್ ಕುಮಾರ್ ಹಾಗೂ ಅಭಿಷೇಕ್ ಕುಮಾರ್ ಎಂಬ ಯುವಕರು ಗಂಗಾ ಘಾಟ್ನಲ್ಲಿ ಆರತಿ ಮುಗಿಸಿಕೊಂಡು ಬೈಕ್ನಲ್ಲಿ ಮನೆಗೆ ಮರಳುತ್ತಿದ್ದರು.

ಪಾಟ್ನಾ, ಜುಲೈ 30: ಬಿಹಾರದ ರಾಜಧಾನಿ ಪಾಟ್ನಾ ಸಮೀಪದ ಭಕ್ತಿಯಾರ್ಪುರದಲ್ಲಿ ಹಾಡಹಗಲೇ ಭಾರಿ ಗುಂಡಿನ ದಾಳಿ(Firing) ನಡೆದಿದ್ದು, ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಿಹಾರದ ಮಾಜಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ನಿವಾಸದ ಮುಂಭಾಗದಲ್ಲೇ ಹಾಗೂ ಭಕ್ತಿಯಾರ್ಪುರ ಪೊಲೀಸ್ ಠಾಣೆಯಿಂದ ಕೇವಲ 50 ಮೀಟರ್ ಅಂತರದಲ್ಲಿ ಈ ಕೃತ್ಯ ನಡೆದಿದ್ದು, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಾನಾಪೂರ, ದೇದಾರ್ ಗ್ರಾಮದ ನಿವಾಸಿಗಳಾದ ವಿಶಾಲ್ ಕುಮಾರ್ ಹಾಗೂ ಅಭಿಷೇಕ್ ಕುಮಾರ್ ಎಂಬ ಯುವಕರು ಗಂಗಾ ಘಾಟ್ನಲ್ಲಿ ಆರತಿ ಮುಗಿಸಿಕೊಂಡು ಬೈಕ್ನಲ್ಲಿ ಮನೆಗೆ ಮರಳುತ್ತಿದ್ದರು.
ನಿತೀಶ್ ಕುಮಾರ್ ಅವರ ನಿವಾಸದ ಬಳಿ ಮೊಂಚಾಗಿಯೇ ಸಂಚು ಹೂಡಿ ಕಾಯುತ್ತಿದ್ದ ಅಪರಿಚಿತ ದುಷ್ಕರ್ಮಿಗಳು, ಯುವಕರು ಹತ್ತಿರ ಬರುತ್ತಿದ್ದಂತೆ ದಿಢೀರ್ ಗುಂಡಿನ ಮಳೆ ಕರೆದಿದ್ದಾರೆ. ಈ ಭೀಕರ ದಾಳಿಯಲ್ಲಿ ವಿಶಾಲ್ ಅವರ ಬೆನ್ನಿಗೆ ಹಾಗೂ ಅಭಿಷೇಕ್ ಅವರ ಹೊಟ್ಟೆಯ ಭಾಗಕ್ಕೆ ಗುಂಡು ತಗುಲಿದೆ. ರಕ್ತಸ್ರಾವವಾಗುತ್ತಿದ್ದರೂ ಧೈರ್ಯ ಗೆಡದ ಯುವಕರು, ಬೈಕ್ ಬಿಟ್ಟು ತಾವೇ ಹತ್ತಿರದ ಸಮುದಾಯ ಆರೋಗ್ಯ ಕೇಂದ್ರಕ್ಕೆ ತಲುಪಿದ್ದಾರೆ. ಪ್ರಾಥಮಿಕ ಚಿಕಿತ್ಸೆಯ ನಂತರ ಗಂಭೀರ ಸ್ಥಿತಿಯಲ್ಲಿದ್ದ ಅವರಿಬ್ಬರನ್ನು ತಕ್ಷಣವೇ ಪಾಟ್ನಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ (PMCH) ರವಾನಿಸಲಾಗಿದೆ.
ವಿಐಪಿ ನಿವಾಸಕ್ಕೆ ಬಿಗಿ ಭದ್ರತೆ: ಮಾಜಿ ಸಿಎಂ ನಿವಾಸದ ಮುಂದೆಯೇ ಘಟನೆ ನಡೆದ ಹಿನ್ನೆಲೆಯಲ್ಲಿ ಇಡೀ ಪ್ರದೇಶದಲ್ಲಿ ಭದ್ರತೆಯನ್ನು ತೀವ್ರಗೊಳಿಸಲಾಗಿದೆ. ಘಟನಾ ಸ್ಥಳಕ್ಕೆ ಧಾವಿಸಿದ ಪೊಲೀಸರು ಒಂದು ಖಾಲಿ ಶೆಲ್ ಹಾಗೂ ಎರಡು ಜೀವಂತ ಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಸುತ್ತಮುತ್ತಲಿನ ಸಿಸಿಟಿವಿ (CCTV) ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದ್ದು, ದುಷ್ಕರ್ಮಿಗಳ ಬಂಧನಕ್ಕೆ ವಿಶೇಷ ಪಡೆಗಳನ್ನು ರಚಿಸಲಾಗಿದೆ.
ಮತ್ತಷ್ಟು ಓದಿ: ‘ವಿದ್ಯಾರ್ಥಿಗಳ ಮೇಲೆ ಗುಂಡಿನ ದಾಳಿಗೆ ಅಮಿತ್ ಶಾ ಆದೇಶ’; ರಾಹುಲ್ ಗಾಂಧಿ ಆರೋಪಕ್ಕೆ ರಣರಂಗವಾದ ಸಂಸತ್
ಸ್ಥಳೀಯ ಶಾಸಕ ಅರುಣ್ ಕುಮಾರ್ ಶಾ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದ್ದು, ತಪ್ಪಿತಸ್ಥರನ್ನು ತಕ್ಷಣವೇ ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಭರವಸೆ ನೀಡಿದ್ದಾರೆ. ಪ್ರಾಥಮಿಕ ಪೊಲೀಸ್ ತನಿಖೆಯ ಪ್ರಕಾರ, ಈ ಗುಂಡಿನ ದಾಳಿಯ ಹಿಂದೆ ವೈಯಕ್ತಿಕ ದ್ವೇಷ ಅಥವಾ ಹಳೆಯ ವೈಷಮ್ಯ ಇರುವ ಶಂಕೆ ವ್ಯಕ್ತವಾಗಿದ್ದು, ರೌಡಿ ಶೀಟರ್ಗಳ ಕೈವಾಡದ ಕುರಿತೂ ತನಿಖೆ ನಡೆಸಲಾಗುತ್ತಿದೆ.
ವಿಐಪಿ ಪ್ರದೇಶ ಹಾಗೂ ಪೊಲೀಸ್ ಠಾಣೆಯ ತೀರ ಹತ್ತಿರದಲ್ಲೇ ಈ ರೀತಿ ಹಾಡಹಗಲೇ ಸಾರ್ವಜನಿಕವಾಗಿ ಗುಂಡಿನ ದಾಳಿ ನಡೆದಿರುವುದು ರಾಜ್ಯ ಸರ್ಕಾರದ ಭದ್ರತಾ ವ್ಯವಸ್ಥೆಯನ್ನು ಅಣಕಿಸುವಂತಿದ್ದು, ವಿಪಕ್ಷಗಳು ಬಿಹಾರದಲ್ಲಿ ‘ಅರಾಜಕತೆ’ ಹೆಚ್ಚಾಗಿದೆ ಎಂದು ಸರ್ಕಾರದ ವಿರುದ್ಧ ಹರಿದಾಯುತ್ತಿವೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ




