AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗಳು ಮಾದಕ ವ್ಯಸನಿ ಎಂಬುದು ತಿಳಿಯುತ್ತಿದ್ದಂತೆ ಆತ್ಮಹತ್ಯೆಗೆ ಯತ್ನಿಸಿದ ತಾಯಿ

ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾದ ವ್ಯಕ್ತಿಯೊಬ್ಬ ತನ್ನ ಮಗಳಿಗೆ ಡ್ರಗ್ಸ್ ನೀಡುತ್ತಿದ್ದಾನೆ ಎಂಬ ಸಂಗತಿ ತಿಳಿದಾಗ ವಿದ್ಯಾರ್ಥಿನಿಯ ತಾಯಿ ತೀವ್ರ ಆಘಾತಕ್ಕೊಳಗಾಗಿದ್ದಾಳೆ. ಮಗಳ ಭವಿಷ್ಯವನ್ನು ಕತ್ತಲೆಗೆ ತಳ್ಳಿದ ಘಟನೆ ತಾಯಿಯನ್ನು ಮನಸ್ಸು ಮುರಿದುಕೊಳ್ಳುವ ಹಂತಕ್ಕೆ ತಳ್ಳಿದೆ.ಮಗಳು ಮಾದಕ ವ್ಯಸನಕ್ಕೆ ಒಳಗಾಗಿದ್ದಾಳೆ ಎಂಬ ವಿಚಾರ ತಿಳಿದ ತಾಯಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎಂದು ವರದಿಯಾಗಿದೆ.

ಮಗಳು ಮಾದಕ ವ್ಯಸನಿ ಎಂಬುದು ತಿಳಿಯುತ್ತಿದ್ದಂತೆ ಆತ್ಮಹತ್ಯೆಗೆ ಯತ್ನಿಸಿದ ತಾಯಿ
ಡ್ರಗ್ಸ್​
ನಯನಾ ರಾಜೀವ್
| Edited By: |

Updated on:Apr 03, 2026 | 11:02 AM

Share

ಗುಂಟೂರು, ಡಿಸೆಂಬರ್ 14: ಮಕ್ಕಳು ಒಳ್ಳೆಯ ವಿದ್ಯಾಭ್ಯಾಸ ಮಾಡಿ, ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು, ಉತ್ತಮ ಪ್ರಜೆಯಾಗಬೇಕೆಂದು ಪೋಷಕರು ಬಯಸುತ್ತಾರೆ. ಆದರೆ ಮಕ್ಕಳು ತಪ್ಪು ದಾರಿಯಲ್ಲಿ ಹೋಗುತ್ತಿದ್ದಾರೆ ತಮ್ಮಿಂದ ಅವರನ್ನು ಸರಿಪಡಿಸಲು ಆಗುತ್ತಿಲ್ಲ ಎನ್ನುವ ಅಸಹಾಯಕತೆಯಿಂದ ಕೆಲವು ಪೋಷಕರು ಆತ್ಮಹತ್ಯೆ(Suicide)ಯಂತಹ ತಪ್ಪು ಹೆಜ್ಜಗಳನ್ನಿಟ್ಟುಬಿಡುತ್ತಾರೆ. ಅಂಥದ್ದೇ ಘಟನೆ ಆಂಧ್ರಪ್ರದೇಶದ ಗುಂಟೂರಿನಲ್ಲಿ ನಡೆದಿದೆ. ಮಗಳು ಮಾದಕ ವ್ಯಸನಿ ಎಂಬುದು ತಿಳಿಯುತ್ತಿದ್ದಂತೆ ತಾಯಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವರದಿಯಾಗಿದೆ.

ಇನ್​ಸ್ಟಾಗ್ರಾಂನಲ್ಲಿ ಪರಿಚಯವಾದ ವ್ಯಕ್ತಿ ಮಗಳಿಗೆ ಡ್ರಗ್ಸ್​ ಕೊಡುತ್ತಿದ್ದ ಎನ್ನುವ ವಿಚಾರ ತಿಳಿಯುತ್ತಿದ್ದಂತೆ ಆ ವಿದ್ಯಾರ್ಥಿನಿಯ ತಾಯಿ ಆಘಾತಕ್ಕೊಳಗಾಗಿದ್ದರು. ಅದೇ ಕಾಲೇಜಿನಲ್ಲಿ ಓದುತ್ತಿರುವ ಹಿರಿಯ ವಿದ್ಯಾರ್ಥಿಯೊಬ್ಬ ಇನ್‌ಸ್ಟಾಗ್ರಾಮ್ ಮೂಲಕ ಪ್ರಥಮ ವರ್ಷದ ಇಂಟರ್ಮೀಡಿಯೇಟ್ ವಿದ್ಯಾರ್ಥಿನಿಯ ಪರಿಚಯವಾಗಿದ್ದ.ಆಕೆಯ ವಿಶ್ವಾಸ ಗಳಿಸಿದ ನಂತರ, ಎರಡನೇ ವರ್ಷದ ವಿದ್ಯಾರ್ಥಿ ಅಪ್ರಾಪ್ತ ವಯಸ್ಕ ಬಾಲಕಿಯನ್ನು ತಾನು ಪ್ರೀತಿಸುತ್ತಿರುವುದಾಗಿ ಮನವೊಲಿಸಿ ಕ್ರಮೇಣ ಮಾದಕ ವ್ಯಸನಿಯನ್ನಾಗಿಸಿದ್ದಾನೆ ಎಂದು ಆರೋಪಿಸಲಾಗಿದೆ.

ಆರೋಪಿಯು ಬಾಲಕಿಯ ಒಪ್ಪಿಗೆಯಿಲ್ಲದೆ ಆಕೆಯ ಜೊತೆ ಅಶ್ಲೀಲವಾಗಿ ವರ್ತಿಸಿದ್ದಾನೆ, ವೀಡಿಯೊಗಳನ್ನು ರೆಕಾರ್ಡ್ ಮಾಡಿದ್ದಾನೆ ಮತ್ತು ಛಾಯಾಚಿತ್ರಗಳನ್ನು ತೆಗೆದುಕೊಂಡಿದ್ದಾನೆ ಎಂದು ಪೋಸ್ಟ್‌ನಲ್ಲಿ ಹೇಳಲಾಗಿದೆ.

ಹುಡುಗಿಯ ತಾಯಿ ಆಕೆಯ ಫೋನ್ ಪರಿಶೀಲಿಸಿ, ಫೋಟೊಗಳನ್ನು ಕಂಡು ಪ್ರಶ್ನಿಸಿದಾಗ ಸಮಸ್ಯೆ ಆರಂಭವಾಯಿತು. ಇದು ಜಗಳಕ್ಕೆ ಕಾರಣವಾಯಿತು, ಈ ಸಮಯದಲ್ಲಿ ಹುಡುಗಿ ತನ್ನ ತಾಯಿಯ ಮೇಲೆ ಹಲ್ಲೆ ನಡೆಸಿದ್ದಾಳೆ ಎಂದು ಆರೋಪಿಸಲಾಗಿದೆ.

ತನ್ನ ಮಗಳ ಮಾದಕ ವ್ಯಸನದ ಬಗ್ಗೆ ತಿಳಿದ ನಂತರ ಮಾನಸಿಕವಾಗಿ ಆಘಾತಕ್ಕೊಳಗಾದ ತಾಯಿ, ನಿದ್ರೆ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ವರದಿಗಳ ಪ್ರಕಾರ, ಆಕೆಯನ್ನು ಗುಂಟೂರು ಸರ್ಕಾರಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ.

ಗುಂಟೂರು ಪೊಲೀಸ್ ವರಿಷ್ಠಾಧಿಕಾರಿ ರವಿಕೃಷ್ಣ ಮಾತನಾಡಿ, ಪ್ರಕರಣದಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಈ ವಿಷಯದ ಬಗ್ಗೆ ತನಿಖೆ ನಡೆಸಲು ಮತ್ತು ಅಪ್ರಾಪ್ತ ವಯಸ್ಕರಿಗೆ ಮಾದಕ ದ್ರವ್ಯಗಳನ್ನು ಪೂರೈಸುವವರನ್ನು ಗುರುತಿಸಲು ವಿಶೇಷ ತಂಡವನ್ನು ರಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ವಕುಲ್ ಜಿಂದಾಲ್ ಹೇಳಿದ್ದಾರೆ.

ಕಳೆದ ಮೂರು ತಿಂಗಳುಗಳಲ್ಲಿ ಸುಮಾರು 150 ಮಾದಕ ದ್ರವ್ಯ ಬಳಕೆದಾರರನ್ನು ಗುರುತಿಸಿ ಪ್ರಕರಣ ದಾಖಲಿಸಲಾಗಿದೆ ಮತ್ತು ಪೂರೈಕೆದಾರರು ಮತ್ತು ಮಾರಾಟಗಾರರನ್ನು ಪತ್ತೆಹಚ್ಚುವ ಪ್ರಯತ್ನಗಳು ನಡೆಯುತ್ತಿವೆ ಎಂದು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:31 pm, Sun, 14 December 25

Follow Us
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್