AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ರೂಪದರ್ಶಿ ದಿವ್ಯಾ ಅಹುಜಾ ಹತ್ಯೆ ಪ್ರಕರಣ: ಶವವನ್ನು ನದಿಗೆ ಎಸೆದಿದ್ದ ಆರೋಪಿಯ ಬಂಧನ

ಮಾಜಿ ರೂಪದರ್ಶಿ ದಿವ್ಯಾ ಪಹುಜಾ ಕೊಲೆ ಆರೋಪಿಯನ್ನು ಪಶ್ಚಿಮ ಬಂಗಾಳದಲ್ಲಿ ಪೊಲೀಸರು ಬಂಧಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಮಾಜಿ ಮಾಡೆಲ್​ನ ಶವವನ್ನು ಮತ್ತೊಬ್ಬ ಆರೋಪಿ ರವಿ ಬಾಂದ್ರಾ ಜತೆ ವಿಲೇವಾರಿ ಮಾಡಿದ್ದ ಬಾಲ್​ರಾಜ್ ಗಿಲ್ ಗುರುವಾರ ಸಂಜೆ ವಿಮಾನ ನಿಲ್ದಾಣದಲ್ಲಿ ವಿಮಾನ ಹತ್ತಲು ಪ್ರಯತ್ನಿಸುತ್ತಿದ್ದಾಗ ಬಂಧಿಸಲಾಗಿದೆ.

ಮಾಜಿ ರೂಪದರ್ಶಿ ದಿವ್ಯಾ ಅಹುಜಾ ಹತ್ಯೆ ಪ್ರಕರಣ: ಶವವನ್ನು ನದಿಗೆ ಎಸೆದಿದ್ದ ಆರೋಪಿಯ ಬಂಧನ
ದಿವ್ಯಾImage Credit source: India Today
Follow us
ನಯನಾ ರಾಜೀವ್
|

Updated on: Jan 12, 2024 | 7:49 AM

ಮಾಜಿ ರೂಪದರ್ಶಿ ದಿವ್ಯಾ ಪಹುಜಾ(Divya Pahuja) ಕೊಲೆ ಆರೋಪಿಯನ್ನು ಪಶ್ಚಿಮ ಬಂಗಾಳದಲ್ಲಿ ಪೊಲೀಸರು ಬಂಧಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಮಾಜಿ ಮಾಡೆಲ್​ನ ಶವವನ್ನು ಮತ್ತೊಬ್ಬ ಆರೋಪಿ ರವಿ ಬಾಂದ್ರಾ ಜತೆ ವಿಲೇವಾರಿ ಮಾಡಿದ್ದ ಬಾಲ್​ರಾಜ್ ಗಿಲ್ ಗುರುವಾರ ಸಂಜೆ ವಿಮಾನ ನಿಲ್ದಾಣದಲ್ಲಿ ವಿಮಾನ ಹತ್ತಲು ಪ್ರಯತ್ನಿಸುತ್ತಿದ್ದಾಗ ಬಂಧಿಸಲಾಗಿದೆ.

ರವಿ ಬಾಂದ್ರಾ ಪರಾರಿಯಾಗಿದ್ದು, ಆತನ ಪತ್ತೆಗೆ ಪ್ರಯತ್ನ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜನವರಿ 2 ರಂದು ದಿವ್ಯಾ ಅವರನ್ನು ಐದು ಜನರು ಹೋಟೆಲ್ ಸಿಟಿ ಪಾಯಿಂಟ್‌ಗೆ ಕರೆದೊಯ್ದು ಕೊಠಡಿ ಸಂಖ್ಯೆ 111 ರೊಳಗೆ ಗುಂಡಿಕ್ಕಿ ಹತ್ಯೆ ಮಾಡಿದ್ದರು. ಮಾಜಿ ಮಾಡೆಲ್‌ನ ದೇಹ ಇನ್ನೂ ಪತ್ತೆಯಾಗಿಲ್ಲ.

ಬಿಎಂಡಬ್ಲ್ಯು ಕಾರಿನಲ್ಲಿ ಶವವನ್ನು ಕೊಂಡೊಯ್ದಿದ್ದ ಬಾಲರಾಜ್ ಸಿಂಗ್ ಮತ್ತು ರವಿ ಬಂಗಾ ಅದನ್ನು ಘಗ್ಗರ್ ನದಿಯಲ್ಲಿ ಎಸೆದಿರಬಹುದು ಎಂಬ ಅನುಮಾನ ಪೊಲೀಸರಿಗೆ ಇದೆ ಎಂದು ಹಿರಿಯ ತನಿಖಾಧಿಕಾರಿಯೊಬ್ಬರು ತಿಳಿಸಿದ್ದಾರೆ. ಪೊಲೀಸರ ತಂಡವು ಡೈವರ್‌ಗಳ ಸಹಾಯದಿಂದ ಮೃತದೇಹವನ್ನು ನದಿಯಿಂದ ಹೊರತೆಗೆಯಲು ಪ್ರಯತ್ನಿಸುತ್ತಿದೆ ಎಂದು ಅವರು ಹೇಳಿದರು.

ಮತ್ತಷ್ಟು ಓದಿ: ಗುರ್​​ಗಾಂವ್ ರೂಪದರ್ಶಿಯ ದಿವ್ಯಾ ಪಹುಜಾ ಕೊಲೆ; ಮೃತದೇಹಕ್ಕಾಗಿ ಪೊಲೀಸ್ ಶೋಧ

ಪ್ರಕರಣದ ಪ್ರಮುಖ ಆರೋಪಿಗಳಾದ ಅಭಿಜಿತ್ ಸಿಂಗ್, ಹೇಮರಾಜ್ ಮತ್ತು ಓಂಪ್ರಕಾಶ್ ಅವರನ್ನು ಪೊಲೀಸರು ಈಗಾಗಲೇ ಬಂಧಿಸಲಾಗಿದೆ.

ಮೂಲಗಳ ಪ್ರಕಾರ ಪಹುಜಾ ತನ್ನ ಫೋನ್‌ನಲ್ಲಿ ಅಭಿಜಿತ್ ಸಿಂಗ್ ಅವರ ಕೆಲವು ಅಶ್ಲೀಲ ವೀಡಿಯೊಗಳನ್ನು ಹೊಂದಿದ್ದರು, ಅದನ್ನು ಅಳಿಸಲು ಅವರು ಕೇಳಿದರು, ಆದರೆ ಆಕೆ ನಿರಾಕರಿಸಿದ್ದಳು.

ಅಭಿಜೀತ್ ಸಿಂಗ್ ಶವದೊಂದಿಗೆ ಕಾರನ್ನು ಹೋಟೆಲ್‌ನಿಂದ ಒಂದು ಕಿಲೋಮೀಟರ್ ದೂರದಲ್ಲಿ ಬಲರಾಜ್ ಗಿಲ್‌ಗೆ ನೀಡಿದ್ದ, ಪಂಜಾಬ್‌ನ ಪಟಿಯಾಲಾದ ಬಸ್ ನಿಲ್ದಾಣದಲ್ಲಿ ಗುರ್ಗಾಂವ್ ಪೊಲೀಸರು ಜನವರಿ 5 ರಂದು ಬಿಎಂಡಬ್ಲ್ಯು ಕಾರನ್ನು ಪತ್ತೆ ಮಾಡಿದ್ದರು.

ಗುರುಗ್ರಾಮದ ಭೂಗತ ಪಾತಕಿ ಸಂದೀಪ್ ಗಡೋಲಿ ನಕಲಿ ಎನ್​ಕೌಂಟರ್​ ಪ್ರಕರಣಕ್ಕೆ ಸಂಬಂಧಿಸಿ ದಿವ್ಯಾ ಪಹುಜಾಗೆ 7 ವರ್ಷಗಳ ಕಾರಾಗೃಹ ಶಿಕ್ಷೆ ವಿಧಿಸಲಾಗಿತ್ತು. ಸ್ವಲ್ಪ ದಿನಗಳ ಹಿಂದಷ್ಟೇ ಜಾಮೀನಿನ ಮೂಲಕ ಹೊರಬಂದಿದ್ದಳು. ಈ ಪ್ರಕರಣಕ್ಕೆ ಸಂಬಂಧಿಸಿ ಹೋಟೆಲ್ ಮಾಲೀಕ ಅಭಿಜಿತ್, ಕೆಲಸಗಾರರಾದ ಹೇಮರಾಜ್, ಓಂ ಪ್ರಕಾಶ್​ನನ್ನು ಬಂಧಿಸಲಾಗಿದೆ.

ಗುರುಗ್ರಾಮದ ಭೂಗತ ಪಾತಕಿ ಗಡೋಲಿಯನ್ನು 2016 ಫೆಬ್ರವರಿ 6 ರಂದು ಗುರುಗ್ರಾಮದಲ್ಲಿ ನಡೆದ ಎನ್​ಕೌಂಟರ್​ನಲ್ಲಿ ಹತ್ಯೆಗೈಯಲಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Daily Devotional: ಪಂಚಮುಖಿ ಹನುಮನ ಉಪಾಸನೆಯ ಹಿಂದಿನ ರಹಸ್ಯ ತಿಳಿಯಿರಿ
Daily Devotional: ಪಂಚಮುಖಿ ಹನುಮನ ಉಪಾಸನೆಯ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಕುಜ ಕರ್ಕಾಟಕ ರಾಶಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
Daily horoscope: ಕುಜ ಕರ್ಕಾಟಕ ರಾಶಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್