AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುರ್​ಗಾಂವ್​ 8 ಸ್ಥಳಗಳಲ್ಲಿ ನಮಾಜ್‌ಗೆ ಅನುಮತಿ ರದ್ದುಗೊಳಿಸಿದ ಜಿಲ್ಲಾಡಳಿತ, ಸ್ಥಳಗಳ ಬಗ್ಗೆ ನಿರ್ಧರಿಸಲು ಸಮಿತಿ ರಚನೆ

ನಗರದಲ್ಲಿ ಶುಕ್ರವಾರ ನಮಾಜ್ ಪ್ರಾರ್ಥನೆ ಸಲ್ಲಿಸುವ ಸ್ಥಳಗಳ ಪಟ್ಟಿಯನ್ನು ನಿರ್ಧರಿಸಲು ಉಪವಿಭಾಗೀಯ ಮ್ಯಾಜಿಸ್ಟ್ರೇಟ್, ಸಹಾಯಕ ಕಮಿಷನರ್ ಮಟ್ಟದ ಪೊಲೀಸ್ ಅಧಿಕಾರಿ, ಹಿಂದೂ ಮತ್ತು ಮುಸ್ಲಿಂ ಸಮುದಾಯಗಳು ಮತ್ತು ಸಾಮಾಜಿಕ ಸಂಘಟನೆಗಳ ಸದಸ್ಯರ ಸಮಿತಿಯನ್ನು ಜಿಲ್ಲಾಡಳಿತ ಮಂಗಳವಾರ ರಚಿಸಿದೆ.

ಗುರ್​ಗಾಂವ್​ 8 ಸ್ಥಳಗಳಲ್ಲಿ ನಮಾಜ್‌ಗೆ ಅನುಮತಿ ರದ್ದುಗೊಳಿಸಿದ ಜಿಲ್ಲಾಡಳಿತ, ಸ್ಥಳಗಳ ಬಗ್ಗೆ ನಿರ್ಧರಿಸಲು ಸಮಿತಿ ರಚನೆ
ಗುರುಗ್ರಾಮದಲ್ಲಿ ಪೊಲೀಸರ ರಕ್ಷಣೆಯೊಂದಿಗೆ ನಮಾಜ್ ಮಾಡುತ್ತಿರುವುದು (ಸಂಗ್ರಹ ಚಿತ್ರ)
TV9 Web
| Edited By: |

Updated on: Nov 02, 2021 | 8:05 PM

Share

ಗುರ್​ಗಾಂವ್: ಗುರ್​ಗಾಂವ್ ಜಿಲ್ಲಾಡಳಿತವು ಮಂಗಳವಾರ ಎಂಟು ಸ್ಥಳಗಳಲ್ಲಿ  ನಮಾಜ್ ಅನುಮತಿಯನ್ನು ರದ್ದುಗೊಳಿಸಿದೆ. ಈ ಹಿಂದೆ 37 ಗೊತ್ತುಪಡಿಸಿದ ಸೈಟ್‌ಗಳ ಪಟ್ಟಿಯಲ್ಲಿ ಈ ಸೈಟ್ ಗಳಿದ್ದು ಅಲ್ಲಿ ಶುಕ್ರವಾರದ ಪ್ರಾರ್ಥನೆಗೆ ಪೊಲೀಸ್ ರಕ್ಷಣೆ ಒದಗಿಸಲಾಗುತ್ತಿತ್ತು. ಸ್ಥಳೀಯ ನಿವಾಸಿಗಳು ಮತ್ತು ನಿವಾಸಿ ಕ್ಷೇಮಾಭಿವೃದ್ಧಿ ಸಂಘಗಳ ಆಕ್ಷೇಪದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.  ಬೆಂಗಾಲಿ ಬಸ್ತಿ ಸೆಕ್ಟರ್ 49, ವಿ ಬ್ಲಾಕ್ ಡಿಎಲ್‌ಎಫ್ ಹಂತ 3, ಸೂರತ್ ನಗರ ಹಂತ 1, ಖೇರಿ ಮಜ್ರಾ ಗ್ರಾಮದ ಹೊರಗೆ, ದ್ವಾರಕಾ ಎಕ್ಸ್‌ಪ್ರೆಸ್‌ವೇಯಲ್ಲಿ ದೌಲತಾಬಾದ್ ಗ್ರಾಮದ ಬಳಿ, ರಾಮಗಢ ಗ್ರಾಮದ ಬಳಿ ಸೆಕ್ಟರ್ 68, ಡಿಎಲ್‌ಎಫ್ ಸ್ಕ್ವೇರ್ ಟವರ್ ಬಳಿ ರಾಂಪುರದಿಂದ ಗ್ರಾಮದಿಂದ ನಖ್ರೋಲಾ ರಸ್ತೆ- ಇಲ್ಲಿ ನಮಾಜ್ ಗೆ ಅನುಮತಿ ರದ್ದು ಮಾಡಲಾಗಿದೆ.

ನಗರದಲ್ಲಿ ಶುಕ್ರವಾರ ನಮಾಜ್ ಪ್ರಾರ್ಥನೆ ಸಲ್ಲಿಸುವ ಸ್ಥಳಗಳ ಪಟ್ಟಿಯನ್ನು ನಿರ್ಧರಿಸಲು ಉಪವಿಭಾಗೀಯ ಮ್ಯಾಜಿಸ್ಟ್ರೇಟ್, ಸಹಾಯಕ ಕಮಿಷನರ್ ಮಟ್ಟದ ಪೊಲೀಸ್ ಅಧಿಕಾರಿ, ಹಿಂದೂ ಮತ್ತು ಮುಸ್ಲಿಂ ಸಮುದಾಯಗಳು ಮತ್ತು ಸಾಮಾಜಿಕ ಸಂಘಟನೆಗಳ ಸದಸ್ಯರ ಸಮಿತಿಯನ್ನು ಜಿಲ್ಲಾಡಳಿತ ಮಂಗಳವಾರ ರಚಿಸಿದೆ.

“ಸಮಿತಿಯು ಎಲ್ಲಾ ಮಧ್ಯಸ್ಥಗಾರರೊಂದಿಗೆ ಸಮಾಲೋಚಿಸಿದ ನಂತರ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ ಮತ್ತು ಸ್ಥಳೀಯ ನಿವಾಸಿಗಳಿಂದ ಒಪ್ಪಿಗೆ ಪಡೆದ ನಂತರವೇ ನಮಾಜ್ ಗಾಗಿ ಸ್ಥಳವನ್ನು ಗೊತ್ತುಪಡಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗುತ್ತದೆ. ನಿರ್ಧಾರ ತೆಗೆದುಕೊಳ್ಳುವಾಗ, ನಿರ್ದಿಷ್ಟ ಸ್ಥಳದಲ್ಲಿ ನಮಾಜ್ ಮಾಡಲು ಪ್ರದೇಶದ ನಿವಾಸಿಗಳಿಗೆ ಯಾವುದೇ ವಿರೋಧವಿಲ್ಲ ಎಂದು ಖಚಿತಪಡಿಸಿಕೊಳ್ಳಲಾಗುತ್ತದೆ. ನಮಾಜ್ ಅನ್ನು ಯಾವುದೇ ಮಸೀದಿ, ಈದ್ಗಾ ಅಥವಾ ಖಾಸಗಿ ಸ್ಥಳದಲ್ಲಿ ಮಾಡಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಸೆಕ್ಟರ್ 12 ಎ ಮತ್ತು ಸೆಕ್ಟರ್ 47 ವಿಜಿಲೆನ್ಸ್ ಬೋರ್ಡ್ ಆಫೀಸ್ ಬಳಿ ಎರಡು ತಿಂಗಳುಗಳಿಂದ ನಿವಾಸಿಗಳು ಮತ್ತು ಬಲಪಂಥೀಯ ಗುಂಪುಗಳ ಸದಸ್ಯರು ನಮಾಜ್ ಗೆ ಅಡ್ಡಿ ಪಡಿಸುತ್ತಿದ್ದಾರೆ

ಮಂಗಳವಾರ, ಸಂಯುಕ್ತ ಹಿಂದೂ ಸಂಘರ್ಷ ಸಮಿತಿಯ ಅಡಿಯಲ್ಲಿ ಬಲಪಂಥೀಯ ಸಂಘಟನೆಗಳ ಒಕ್ಕೂಟದ ಸದಸ್ಯರು ಗುರ್​ಗಾಂವ್ ಜಿಲ್ಲಾಧಿಕಾರಿಯನ್ನು ಭೇಟಿಯಾಗಿ ನಗರದ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಶುಕ್ರವಾರ ನಮಾಜ್ ಅನ್ನು ನಿಷೇಧಿಸಬೇಕೆಂದು ಒತ್ತಾಯಿಸಿದರು.

ಇದನ್ನೂ ಓದಿ:  ನಮಾಜ್​ಗೆ ಅಡ್ಡಿಪಡಿಸಿ, ಪ್ರತಿಭಟನೆ ನಡೆಸಿದ 30 ಜನರನ್ನು ವಶಕ್ಕೆ ಪಡೆದ ಪೊಲೀಸರು

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ