AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುರ್​ಗಾಂವ್​ 8 ಸ್ಥಳಗಳಲ್ಲಿ ನಮಾಜ್‌ಗೆ ಅನುಮತಿ ರದ್ದುಗೊಳಿಸಿದ ಜಿಲ್ಲಾಡಳಿತ, ಸ್ಥಳಗಳ ಬಗ್ಗೆ ನಿರ್ಧರಿಸಲು ಸಮಿತಿ ರಚನೆ

ನಗರದಲ್ಲಿ ಶುಕ್ರವಾರ ನಮಾಜ್ ಪ್ರಾರ್ಥನೆ ಸಲ್ಲಿಸುವ ಸ್ಥಳಗಳ ಪಟ್ಟಿಯನ್ನು ನಿರ್ಧರಿಸಲು ಉಪವಿಭಾಗೀಯ ಮ್ಯಾಜಿಸ್ಟ್ರೇಟ್, ಸಹಾಯಕ ಕಮಿಷನರ್ ಮಟ್ಟದ ಪೊಲೀಸ್ ಅಧಿಕಾರಿ, ಹಿಂದೂ ಮತ್ತು ಮುಸ್ಲಿಂ ಸಮುದಾಯಗಳು ಮತ್ತು ಸಾಮಾಜಿಕ ಸಂಘಟನೆಗಳ ಸದಸ್ಯರ ಸಮಿತಿಯನ್ನು ಜಿಲ್ಲಾಡಳಿತ ಮಂಗಳವಾರ ರಚಿಸಿದೆ.

ಗುರ್​ಗಾಂವ್​ 8 ಸ್ಥಳಗಳಲ್ಲಿ ನಮಾಜ್‌ಗೆ ಅನುಮತಿ ರದ್ದುಗೊಳಿಸಿದ ಜಿಲ್ಲಾಡಳಿತ, ಸ್ಥಳಗಳ ಬಗ್ಗೆ ನಿರ್ಧರಿಸಲು ಸಮಿತಿ ರಚನೆ
ಗುರುಗ್ರಾಮದಲ್ಲಿ ಪೊಲೀಸರ ರಕ್ಷಣೆಯೊಂದಿಗೆ ನಮಾಜ್ ಮಾಡುತ್ತಿರುವುದು (ಸಂಗ್ರಹ ಚಿತ್ರ)
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Nov 02, 2021 | 8:05 PM

Share

ಗುರ್​ಗಾಂವ್: ಗುರ್​ಗಾಂವ್ ಜಿಲ್ಲಾಡಳಿತವು ಮಂಗಳವಾರ ಎಂಟು ಸ್ಥಳಗಳಲ್ಲಿ  ನಮಾಜ್ ಅನುಮತಿಯನ್ನು ರದ್ದುಗೊಳಿಸಿದೆ. ಈ ಹಿಂದೆ 37 ಗೊತ್ತುಪಡಿಸಿದ ಸೈಟ್‌ಗಳ ಪಟ್ಟಿಯಲ್ಲಿ ಈ ಸೈಟ್ ಗಳಿದ್ದು ಅಲ್ಲಿ ಶುಕ್ರವಾರದ ಪ್ರಾರ್ಥನೆಗೆ ಪೊಲೀಸ್ ರಕ್ಷಣೆ ಒದಗಿಸಲಾಗುತ್ತಿತ್ತು. ಸ್ಥಳೀಯ ನಿವಾಸಿಗಳು ಮತ್ತು ನಿವಾಸಿ ಕ್ಷೇಮಾಭಿವೃದ್ಧಿ ಸಂಘಗಳ ಆಕ್ಷೇಪದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.  ಬೆಂಗಾಲಿ ಬಸ್ತಿ ಸೆಕ್ಟರ್ 49, ವಿ ಬ್ಲಾಕ್ ಡಿಎಲ್‌ಎಫ್ ಹಂತ 3, ಸೂರತ್ ನಗರ ಹಂತ 1, ಖೇರಿ ಮಜ್ರಾ ಗ್ರಾಮದ ಹೊರಗೆ, ದ್ವಾರಕಾ ಎಕ್ಸ್‌ಪ್ರೆಸ್‌ವೇಯಲ್ಲಿ ದೌಲತಾಬಾದ್ ಗ್ರಾಮದ ಬಳಿ, ರಾಮಗಢ ಗ್ರಾಮದ ಬಳಿ ಸೆಕ್ಟರ್ 68, ಡಿಎಲ್‌ಎಫ್ ಸ್ಕ್ವೇರ್ ಟವರ್ ಬಳಿ ರಾಂಪುರದಿಂದ ಗ್ರಾಮದಿಂದ ನಖ್ರೋಲಾ ರಸ್ತೆ- ಇಲ್ಲಿ ನಮಾಜ್ ಗೆ ಅನುಮತಿ ರದ್ದು ಮಾಡಲಾಗಿದೆ.

ನಗರದಲ್ಲಿ ಶುಕ್ರವಾರ ನಮಾಜ್ ಪ್ರಾರ್ಥನೆ ಸಲ್ಲಿಸುವ ಸ್ಥಳಗಳ ಪಟ್ಟಿಯನ್ನು ನಿರ್ಧರಿಸಲು ಉಪವಿಭಾಗೀಯ ಮ್ಯಾಜಿಸ್ಟ್ರೇಟ್, ಸಹಾಯಕ ಕಮಿಷನರ್ ಮಟ್ಟದ ಪೊಲೀಸ್ ಅಧಿಕಾರಿ, ಹಿಂದೂ ಮತ್ತು ಮುಸ್ಲಿಂ ಸಮುದಾಯಗಳು ಮತ್ತು ಸಾಮಾಜಿಕ ಸಂಘಟನೆಗಳ ಸದಸ್ಯರ ಸಮಿತಿಯನ್ನು ಜಿಲ್ಲಾಡಳಿತ ಮಂಗಳವಾರ ರಚಿಸಿದೆ.

“ಸಮಿತಿಯು ಎಲ್ಲಾ ಮಧ್ಯಸ್ಥಗಾರರೊಂದಿಗೆ ಸಮಾಲೋಚಿಸಿದ ನಂತರ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ ಮತ್ತು ಸ್ಥಳೀಯ ನಿವಾಸಿಗಳಿಂದ ಒಪ್ಪಿಗೆ ಪಡೆದ ನಂತರವೇ ನಮಾಜ್ ಗಾಗಿ ಸ್ಥಳವನ್ನು ಗೊತ್ತುಪಡಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗುತ್ತದೆ. ನಿರ್ಧಾರ ತೆಗೆದುಕೊಳ್ಳುವಾಗ, ನಿರ್ದಿಷ್ಟ ಸ್ಥಳದಲ್ಲಿ ನಮಾಜ್ ಮಾಡಲು ಪ್ರದೇಶದ ನಿವಾಸಿಗಳಿಗೆ ಯಾವುದೇ ವಿರೋಧವಿಲ್ಲ ಎಂದು ಖಚಿತಪಡಿಸಿಕೊಳ್ಳಲಾಗುತ್ತದೆ. ನಮಾಜ್ ಅನ್ನು ಯಾವುದೇ ಮಸೀದಿ, ಈದ್ಗಾ ಅಥವಾ ಖಾಸಗಿ ಸ್ಥಳದಲ್ಲಿ ಮಾಡಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಸೆಕ್ಟರ್ 12 ಎ ಮತ್ತು ಸೆಕ್ಟರ್ 47 ವಿಜಿಲೆನ್ಸ್ ಬೋರ್ಡ್ ಆಫೀಸ್ ಬಳಿ ಎರಡು ತಿಂಗಳುಗಳಿಂದ ನಿವಾಸಿಗಳು ಮತ್ತು ಬಲಪಂಥೀಯ ಗುಂಪುಗಳ ಸದಸ್ಯರು ನಮಾಜ್ ಗೆ ಅಡ್ಡಿ ಪಡಿಸುತ್ತಿದ್ದಾರೆ

ಮಂಗಳವಾರ, ಸಂಯುಕ್ತ ಹಿಂದೂ ಸಂಘರ್ಷ ಸಮಿತಿಯ ಅಡಿಯಲ್ಲಿ ಬಲಪಂಥೀಯ ಸಂಘಟನೆಗಳ ಒಕ್ಕೂಟದ ಸದಸ್ಯರು ಗುರ್​ಗಾಂವ್ ಜಿಲ್ಲಾಧಿಕಾರಿಯನ್ನು ಭೇಟಿಯಾಗಿ ನಗರದ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಶುಕ್ರವಾರ ನಮಾಜ್ ಅನ್ನು ನಿಷೇಧಿಸಬೇಕೆಂದು ಒತ್ತಾಯಿಸಿದರು.

ಇದನ್ನೂ ಓದಿ:  ನಮಾಜ್​ಗೆ ಅಡ್ಡಿಪಡಿಸಿ, ಪ್ರತಿಭಟನೆ ನಡೆಸಿದ 30 ಜನರನ್ನು ವಶಕ್ಕೆ ಪಡೆದ ಪೊಲೀಸರು

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ