AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುರ್​ಗಾಂವ್​ 8 ಸ್ಥಳಗಳಲ್ಲಿ ನಮಾಜ್‌ಗೆ ಅನುಮತಿ ರದ್ದುಗೊಳಿಸಿದ ಜಿಲ್ಲಾಡಳಿತ, ಸ್ಥಳಗಳ ಬಗ್ಗೆ ನಿರ್ಧರಿಸಲು ಸಮಿತಿ ರಚನೆ

ನಗರದಲ್ಲಿ ಶುಕ್ರವಾರ ನಮಾಜ್ ಪ್ರಾರ್ಥನೆ ಸಲ್ಲಿಸುವ ಸ್ಥಳಗಳ ಪಟ್ಟಿಯನ್ನು ನಿರ್ಧರಿಸಲು ಉಪವಿಭಾಗೀಯ ಮ್ಯಾಜಿಸ್ಟ್ರೇಟ್, ಸಹಾಯಕ ಕಮಿಷನರ್ ಮಟ್ಟದ ಪೊಲೀಸ್ ಅಧಿಕಾರಿ, ಹಿಂದೂ ಮತ್ತು ಮುಸ್ಲಿಂ ಸಮುದಾಯಗಳು ಮತ್ತು ಸಾಮಾಜಿಕ ಸಂಘಟನೆಗಳ ಸದಸ್ಯರ ಸಮಿತಿಯನ್ನು ಜಿಲ್ಲಾಡಳಿತ ಮಂಗಳವಾರ ರಚಿಸಿದೆ.

ಗುರ್​ಗಾಂವ್​ 8 ಸ್ಥಳಗಳಲ್ಲಿ ನಮಾಜ್‌ಗೆ ಅನುಮತಿ ರದ್ದುಗೊಳಿಸಿದ ಜಿಲ್ಲಾಡಳಿತ, ಸ್ಥಳಗಳ ಬಗ್ಗೆ ನಿರ್ಧರಿಸಲು ಸಮಿತಿ ರಚನೆ
ಗುರುಗ್ರಾಮದಲ್ಲಿ ಪೊಲೀಸರ ರಕ್ಷಣೆಯೊಂದಿಗೆ ನಮಾಜ್ ಮಾಡುತ್ತಿರುವುದು (ಸಂಗ್ರಹ ಚಿತ್ರ)
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Nov 02, 2021 | 8:05 PM

Share

ಗುರ್​ಗಾಂವ್: ಗುರ್​ಗಾಂವ್ ಜಿಲ್ಲಾಡಳಿತವು ಮಂಗಳವಾರ ಎಂಟು ಸ್ಥಳಗಳಲ್ಲಿ  ನಮಾಜ್ ಅನುಮತಿಯನ್ನು ರದ್ದುಗೊಳಿಸಿದೆ. ಈ ಹಿಂದೆ 37 ಗೊತ್ತುಪಡಿಸಿದ ಸೈಟ್‌ಗಳ ಪಟ್ಟಿಯಲ್ಲಿ ಈ ಸೈಟ್ ಗಳಿದ್ದು ಅಲ್ಲಿ ಶುಕ್ರವಾರದ ಪ್ರಾರ್ಥನೆಗೆ ಪೊಲೀಸ್ ರಕ್ಷಣೆ ಒದಗಿಸಲಾಗುತ್ತಿತ್ತು. ಸ್ಥಳೀಯ ನಿವಾಸಿಗಳು ಮತ್ತು ನಿವಾಸಿ ಕ್ಷೇಮಾಭಿವೃದ್ಧಿ ಸಂಘಗಳ ಆಕ್ಷೇಪದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.  ಬೆಂಗಾಲಿ ಬಸ್ತಿ ಸೆಕ್ಟರ್ 49, ವಿ ಬ್ಲಾಕ್ ಡಿಎಲ್‌ಎಫ್ ಹಂತ 3, ಸೂರತ್ ನಗರ ಹಂತ 1, ಖೇರಿ ಮಜ್ರಾ ಗ್ರಾಮದ ಹೊರಗೆ, ದ್ವಾರಕಾ ಎಕ್ಸ್‌ಪ್ರೆಸ್‌ವೇಯಲ್ಲಿ ದೌಲತಾಬಾದ್ ಗ್ರಾಮದ ಬಳಿ, ರಾಮಗಢ ಗ್ರಾಮದ ಬಳಿ ಸೆಕ್ಟರ್ 68, ಡಿಎಲ್‌ಎಫ್ ಸ್ಕ್ವೇರ್ ಟವರ್ ಬಳಿ ರಾಂಪುರದಿಂದ ಗ್ರಾಮದಿಂದ ನಖ್ರೋಲಾ ರಸ್ತೆ- ಇಲ್ಲಿ ನಮಾಜ್ ಗೆ ಅನುಮತಿ ರದ್ದು ಮಾಡಲಾಗಿದೆ.

ನಗರದಲ್ಲಿ ಶುಕ್ರವಾರ ನಮಾಜ್ ಪ್ರಾರ್ಥನೆ ಸಲ್ಲಿಸುವ ಸ್ಥಳಗಳ ಪಟ್ಟಿಯನ್ನು ನಿರ್ಧರಿಸಲು ಉಪವಿಭಾಗೀಯ ಮ್ಯಾಜಿಸ್ಟ್ರೇಟ್, ಸಹಾಯಕ ಕಮಿಷನರ್ ಮಟ್ಟದ ಪೊಲೀಸ್ ಅಧಿಕಾರಿ, ಹಿಂದೂ ಮತ್ತು ಮುಸ್ಲಿಂ ಸಮುದಾಯಗಳು ಮತ್ತು ಸಾಮಾಜಿಕ ಸಂಘಟನೆಗಳ ಸದಸ್ಯರ ಸಮಿತಿಯನ್ನು ಜಿಲ್ಲಾಡಳಿತ ಮಂಗಳವಾರ ರಚಿಸಿದೆ.

“ಸಮಿತಿಯು ಎಲ್ಲಾ ಮಧ್ಯಸ್ಥಗಾರರೊಂದಿಗೆ ಸಮಾಲೋಚಿಸಿದ ನಂತರ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ ಮತ್ತು ಸ್ಥಳೀಯ ನಿವಾಸಿಗಳಿಂದ ಒಪ್ಪಿಗೆ ಪಡೆದ ನಂತರವೇ ನಮಾಜ್ ಗಾಗಿ ಸ್ಥಳವನ್ನು ಗೊತ್ತುಪಡಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗುತ್ತದೆ. ನಿರ್ಧಾರ ತೆಗೆದುಕೊಳ್ಳುವಾಗ, ನಿರ್ದಿಷ್ಟ ಸ್ಥಳದಲ್ಲಿ ನಮಾಜ್ ಮಾಡಲು ಪ್ರದೇಶದ ನಿವಾಸಿಗಳಿಗೆ ಯಾವುದೇ ವಿರೋಧವಿಲ್ಲ ಎಂದು ಖಚಿತಪಡಿಸಿಕೊಳ್ಳಲಾಗುತ್ತದೆ. ನಮಾಜ್ ಅನ್ನು ಯಾವುದೇ ಮಸೀದಿ, ಈದ್ಗಾ ಅಥವಾ ಖಾಸಗಿ ಸ್ಥಳದಲ್ಲಿ ಮಾಡಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಸೆಕ್ಟರ್ 12 ಎ ಮತ್ತು ಸೆಕ್ಟರ್ 47 ವಿಜಿಲೆನ್ಸ್ ಬೋರ್ಡ್ ಆಫೀಸ್ ಬಳಿ ಎರಡು ತಿಂಗಳುಗಳಿಂದ ನಿವಾಸಿಗಳು ಮತ್ತು ಬಲಪಂಥೀಯ ಗುಂಪುಗಳ ಸದಸ್ಯರು ನಮಾಜ್ ಗೆ ಅಡ್ಡಿ ಪಡಿಸುತ್ತಿದ್ದಾರೆ

ಮಂಗಳವಾರ, ಸಂಯುಕ್ತ ಹಿಂದೂ ಸಂಘರ್ಷ ಸಮಿತಿಯ ಅಡಿಯಲ್ಲಿ ಬಲಪಂಥೀಯ ಸಂಘಟನೆಗಳ ಒಕ್ಕೂಟದ ಸದಸ್ಯರು ಗುರ್​ಗಾಂವ್ ಜಿಲ್ಲಾಧಿಕಾರಿಯನ್ನು ಭೇಟಿಯಾಗಿ ನಗರದ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಶುಕ್ರವಾರ ನಮಾಜ್ ಅನ್ನು ನಿಷೇಧಿಸಬೇಕೆಂದು ಒತ್ತಾಯಿಸಿದರು.

ಇದನ್ನೂ ಓದಿ:  ನಮಾಜ್​ಗೆ ಅಡ್ಡಿಪಡಿಸಿ, ಪ್ರತಿಭಟನೆ ನಡೆಸಿದ 30 ಜನರನ್ನು ವಶಕ್ಕೆ ಪಡೆದ ಪೊಲೀಸರು

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ