AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gurgaon Rains: ಗುರುಗ್ರಾಮದಲ್ಲಿ ಭಾರೀ ಮಳೆ, ರಸ್ತೆ ಮೇಲೆ ಪ್ರವಾಹ; ವರ್ಕ್​ ಫ್ರಂ ಹೋಮ್ ಮಾಡಿ ಎಂದ ಅಧಿಕಾರಿಗಳು

ಉದ್ಯೋಗಿಗಳಿಗೆ ವರ್ಕ್​ ಫ್ರಂ ಹೋಮ್ ಮಾಡುವಂತೆ ನಗರ ಆಡಳಿತ ಸಲಹೆ ಮಾಡಿದೆ. ಎಲ್ಲ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Gurgaon Rains: ಗುರುಗ್ರಾಮದಲ್ಲಿ ಭಾರೀ ಮಳೆ, ರಸ್ತೆ ಮೇಲೆ ಪ್ರವಾಹ; ವರ್ಕ್​ ಫ್ರಂ ಹೋಮ್ ಮಾಡಿ ಎಂದ ಅಧಿಕಾರಿಗಳು
ಮಳೆ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Sep 23, 2022 | 9:29 AM

Share

ದೆಹಲಿ: ಉತ್ತರ ಭಾರತದಲ್ಲಿ ಮಳೆ ಆರ್ಭಟ ಮುಂದುವರಿದಿದ್ದು, ದೆಹಲಿ ಗಡಿಯಲ್ಲಿರುವ ಹರಿಯಾಣದ ಗುರುಗ್ರಾಮದಲ್ಲಿ (Gurgaon Rain) ರಸ್ತೆಗಳ ಮೇಲೆ ನೀರು ಹರಿಯುವಷ್ಟು ಜೋರಾಗಿ ಮಳೆ ಸುರಿದಿದೆ. ಮಳೆಯಿಂದಾಗಿ ಸಂಚಾರ ಸ್ಥಗಿತಗೊಂಡಿದ್ದು, ಉದ್ಯೋಗಿಗಳಿಗೆ ವರ್ಕ್​ ಫ್ರಂ ಹೋಮ್ ಮಾಡುವಂತೆ ನಗರ ಆಡಳಿತ ಸಲಹೆ ಮಾಡಿದೆ. ಎಲ್ಲ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಗುರುಗ್ರಾಮದಲ್ಲಿ ಇಂದೂ ಸಹ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗುರುಗ್ರಾಮ ಪ್ರದೇಶಕ್ಕೆ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದ್ದು, ರಸ್ತೆಗಳು ಮತ್ತೊಮ್ಮೆ ಜಲಾವೃತವಾಗುವ ಸಾಧ್ಯತೆಯಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

‘ಮತ್ತೊಮ್ಮೆ ಭಾರೀ ಮಳೆ ಸುರಿದರೆ ರಸ್ತೆಗಳಲ್ಲಿ ಸಂಚಾರ ಸ್ಥಗಿತಗೊಳ್ಳುವ ಸಾಧ್ಯತೆಯಿದೆ. ಹೀಗಾಗಿ ನಗರ ಮತ್ತು ಜಿಲ್ಲೆಯ ಎಲ್ಲ ಕಾರ್ಪೊರೇಟ್ ಕಚೇರಿಗಳು ಮತ್ತು ಖಾಸಗಿ ಸಂಸ್ಥೆಗಳಿಗೆ ತಮ್ಮ ಉದ್ಯೋಗಿಗಳಿಗೆ ಮನೆಯಿಂದ ಕೆಲಸ ಮಾಡುವಂತೆ ಸೂಚನೆ ನೀಡಲು ಕೋರಿದ್ದೇವೆ. ಉದ್ಯೋಗಿಗಳ ಸುರಕ್ಷೆ ಮತ್ತು ರಸ್ತೆಯ ಮೇಲಿನ ಸಂಚಾರ ದಟ್ಟಣೆ ತಪ್ಪಿಸಲು ಇದು ಅತ್ಯಗತ್ಯ’ ಎಂದು ಗುರುಗ್ರಾಮ ವಿಪತ್ತು ನಿರ್ವಹಣಾ ಪ್ರಾಧಿಕಾರವು ತನ್ನ ಸಲಹೆಯಲ್ಲಿ ತಿಳಿಸಿದೆ.

ಗೋಡೆ ಕುಸಿದು 7 ಮಕ್ಕಳು ಸಾವು

ಭಾರೀ ಮಳೆಯಿಂದಾಗಿ ಉತ್ತರ ಪ್ರದೇಶದ ಚಂದ್ರಪುರ ಮತ್ತು ಘಾಟಿಯಾ ಅಜ್ಮತ್ ಅಲಿ ಪ್ರದೇಶಗಳಲ್ಲಿ ಮನೆಗಳ ಗೋಡೆಗಳು ಕುಸಿದು ಏಳು ಮಕ್ಕಳು ಮೃತಪಟ್ಟಿದ್ದಾರೆ. ಮಳೆಯ ಅನಾಹುತದಿಂದ ಇಟಾವಾ ಜಿಲ್ಲೆಯಾದ್ಯಂತ ಇದುವರೆಗೆ 10 ಮಂದಿ ಸಾವನ್ನಪ್ಪಿದ್ದಾರೆ. ಮೊದಲ ಘಟನೆಯಲ್ಲಿ ಬುಧವಾರ ತಡರಾತ್ರಿ ಚಂದ್ರಾಪುರ ಗ್ರಾಮದಲ್ಲಿ ನಾಲ್ವರು ಮಕ್ಕಳು ನಿದ್ರೆಯಲ್ಲಿರುವಾಗ ಮನೆಯ ಗೋಡೆ ಕುಸಿದು ಸಾವನ್ನಪ್ಪಿದ್ದಾರೆ. ಮಕ್ಕಳನ್ನು ಸಿಂಕು (10), ಅಭಿ (8), ಸೋನು (7), ಆರತಿ (5) ಎಂದು ಗುರುತಿಸಲಾಗಿದೆ ಎಂದು ಇಟಾವಾ ಜಿಲ್ಲಾಧಿಕಾರಿ ಅವಿನಾಶ್ ರೈ ಹೇಳಿದ್ದಾರೆ.

Published On - 7:17 am, Fri, 23 September 22

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?