AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gurgaon Rains: ಗುರುಗ್ರಾಮದಲ್ಲಿ ಭಾರೀ ಮಳೆ, ರಸ್ತೆ ಮೇಲೆ ಪ್ರವಾಹ; ವರ್ಕ್​ ಫ್ರಂ ಹೋಮ್ ಮಾಡಿ ಎಂದ ಅಧಿಕಾರಿಗಳು

ಉದ್ಯೋಗಿಗಳಿಗೆ ವರ್ಕ್​ ಫ್ರಂ ಹೋಮ್ ಮಾಡುವಂತೆ ನಗರ ಆಡಳಿತ ಸಲಹೆ ಮಾಡಿದೆ. ಎಲ್ಲ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Gurgaon Rains: ಗುರುಗ್ರಾಮದಲ್ಲಿ ಭಾರೀ ಮಳೆ, ರಸ್ತೆ ಮೇಲೆ ಪ್ರವಾಹ; ವರ್ಕ್​ ಫ್ರಂ ಹೋಮ್ ಮಾಡಿ ಎಂದ ಅಧಿಕಾರಿಗಳು
ಮಳೆ
TV9 Web
| Edited By: |

Updated on:Sep 23, 2022 | 9:29 AM

Share

ದೆಹಲಿ: ಉತ್ತರ ಭಾರತದಲ್ಲಿ ಮಳೆ ಆರ್ಭಟ ಮುಂದುವರಿದಿದ್ದು, ದೆಹಲಿ ಗಡಿಯಲ್ಲಿರುವ ಹರಿಯಾಣದ ಗುರುಗ್ರಾಮದಲ್ಲಿ (Gurgaon Rain) ರಸ್ತೆಗಳ ಮೇಲೆ ನೀರು ಹರಿಯುವಷ್ಟು ಜೋರಾಗಿ ಮಳೆ ಸುರಿದಿದೆ. ಮಳೆಯಿಂದಾಗಿ ಸಂಚಾರ ಸ್ಥಗಿತಗೊಂಡಿದ್ದು, ಉದ್ಯೋಗಿಗಳಿಗೆ ವರ್ಕ್​ ಫ್ರಂ ಹೋಮ್ ಮಾಡುವಂತೆ ನಗರ ಆಡಳಿತ ಸಲಹೆ ಮಾಡಿದೆ. ಎಲ್ಲ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಗುರುಗ್ರಾಮದಲ್ಲಿ ಇಂದೂ ಸಹ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗುರುಗ್ರಾಮ ಪ್ರದೇಶಕ್ಕೆ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದ್ದು, ರಸ್ತೆಗಳು ಮತ್ತೊಮ್ಮೆ ಜಲಾವೃತವಾಗುವ ಸಾಧ್ಯತೆಯಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

‘ಮತ್ತೊಮ್ಮೆ ಭಾರೀ ಮಳೆ ಸುರಿದರೆ ರಸ್ತೆಗಳಲ್ಲಿ ಸಂಚಾರ ಸ್ಥಗಿತಗೊಳ್ಳುವ ಸಾಧ್ಯತೆಯಿದೆ. ಹೀಗಾಗಿ ನಗರ ಮತ್ತು ಜಿಲ್ಲೆಯ ಎಲ್ಲ ಕಾರ್ಪೊರೇಟ್ ಕಚೇರಿಗಳು ಮತ್ತು ಖಾಸಗಿ ಸಂಸ್ಥೆಗಳಿಗೆ ತಮ್ಮ ಉದ್ಯೋಗಿಗಳಿಗೆ ಮನೆಯಿಂದ ಕೆಲಸ ಮಾಡುವಂತೆ ಸೂಚನೆ ನೀಡಲು ಕೋರಿದ್ದೇವೆ. ಉದ್ಯೋಗಿಗಳ ಸುರಕ್ಷೆ ಮತ್ತು ರಸ್ತೆಯ ಮೇಲಿನ ಸಂಚಾರ ದಟ್ಟಣೆ ತಪ್ಪಿಸಲು ಇದು ಅತ್ಯಗತ್ಯ’ ಎಂದು ಗುರುಗ್ರಾಮ ವಿಪತ್ತು ನಿರ್ವಹಣಾ ಪ್ರಾಧಿಕಾರವು ತನ್ನ ಸಲಹೆಯಲ್ಲಿ ತಿಳಿಸಿದೆ.

ಗೋಡೆ ಕುಸಿದು 7 ಮಕ್ಕಳು ಸಾವು

ಭಾರೀ ಮಳೆಯಿಂದಾಗಿ ಉತ್ತರ ಪ್ರದೇಶದ ಚಂದ್ರಪುರ ಮತ್ತು ಘಾಟಿಯಾ ಅಜ್ಮತ್ ಅಲಿ ಪ್ರದೇಶಗಳಲ್ಲಿ ಮನೆಗಳ ಗೋಡೆಗಳು ಕುಸಿದು ಏಳು ಮಕ್ಕಳು ಮೃತಪಟ್ಟಿದ್ದಾರೆ. ಮಳೆಯ ಅನಾಹುತದಿಂದ ಇಟಾವಾ ಜಿಲ್ಲೆಯಾದ್ಯಂತ ಇದುವರೆಗೆ 10 ಮಂದಿ ಸಾವನ್ನಪ್ಪಿದ್ದಾರೆ. ಮೊದಲ ಘಟನೆಯಲ್ಲಿ ಬುಧವಾರ ತಡರಾತ್ರಿ ಚಂದ್ರಾಪುರ ಗ್ರಾಮದಲ್ಲಿ ನಾಲ್ವರು ಮಕ್ಕಳು ನಿದ್ರೆಯಲ್ಲಿರುವಾಗ ಮನೆಯ ಗೋಡೆ ಕುಸಿದು ಸಾವನ್ನಪ್ಪಿದ್ದಾರೆ. ಮಕ್ಕಳನ್ನು ಸಿಂಕು (10), ಅಭಿ (8), ಸೋನು (7), ಆರತಿ (5) ಎಂದು ಗುರುತಿಸಲಾಗಿದೆ ಎಂದು ಇಟಾವಾ ಜಿಲ್ಲಾಧಿಕಾರಿ ಅವಿನಾಶ್ ರೈ ಹೇಳಿದ್ದಾರೆ.

Published On - 7:17 am, Fri, 23 September 22

Follow Us
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್