AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುರುಗ್ರಾಮ: ಮೊಬೈಲ್​​ ಕದ್ದಿದ್ದು ಇವನೇ ಎಂದು ಹಿಡಿದುಕೊಟ್ಟಿದ್ದಕ್ಕೆ 7 ವರ್ಷದ ಬಾಲಕನ ಕೊಲೆ

ಏಳು ವರ್ಷದ ಬಾಲಕನನ್ನು ಅಪ್ರಾಪ್ತ ಬಾಲಕನೊಬ್ಬ ಕೊಲೆ ಮಾಡಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಮೊಬೈಲ್(Mobile) ಕದ್ದಿದ್ದು ಇವನೇ ಎಂದು ಕದ್ದವನನ್ನು ಹಿಡಿದುಕೊಟ್ಟಿದ್ದಕ್ಕೆ ಕೋಪಗೊಂಡ ಅಪ್ರಾಪ್ತ ಬಾಲಕ 7 ವರ್ಷದ ಬಾಲಕನನ್ನು ಕೊಲೆ ಮಾಡಿ ಪ್ರತೀಕಾರ ತೀರಿಸಿಕೊಂಡಿದ್ದಾನೆ. ವರದಿಗಳ ಪ್ರಕಾರ, ಆರೋಪಿಯು ಮೊಬೈಲ್ ಕದ್ದಿದ್ದ ಅದನ್ನು ಈ ಬಾಲಕ ನೋಡಿದ್ದಷ್ಟೇ ಅಲ್ಲದೆ, ಆತನೇ ಕದ್ದಿದ್ದಾನೆಂದು ಹಿಡಿದುಕೊಟ್ಟಿದ್ದ, ಆ ಅಪ್ರಾಪ್ತ ಬಾಲಕ ತನಗೆ ಅವಮಾನ ಮಾಡಿದವನ ಮೇಲೆ ಸೇಡು ತೋರಿಸಿಕೊಳ್ಳಲು ಎರಡು ತಿಂಗಳಿನಿಂದ ಹೊಂಚು ಹಾಕಿದ್ದ.

ಗುರುಗ್ರಾಮ: ಮೊಬೈಲ್​​ ಕದ್ದಿದ್ದು ಇವನೇ ಎಂದು ಹಿಡಿದುಕೊಟ್ಟಿದ್ದಕ್ಕೆ 7 ವರ್ಷದ ಬಾಲಕನ ಕೊಲೆ
ಕ್ರೈಂ
ನಯನಾ ರಾಜೀವ್
|

Updated on: Jul 23, 2025 | 10:12 AM

Share

ಗುರುಗ್ರಾಮ, ಜುಲೈ 23: ಏಳು ವರ್ಷದ ಬಾಲಕನನ್ನು ಅಪ್ರಾಪ್ತ ಬಾಲಕನೊಬ್ಬ ಕೊಲೆ ಮಾಡಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಮೊಬೈಲ್(Mobile) ಕದ್ದಿದ್ದು ಇವನೇ ಎಂದು ಕದ್ದವನನ್ನು ಹಿಡಿದುಕೊಟ್ಟಿದ್ದಕ್ಕೆ ಕೋಪಗೊಂಡ ಅಪ್ರಾಪ್ತ ಬಾಲಕ 7 ವರ್ಷದ ಬಾಲಕನನ್ನು ಕೊಲೆ ಮಾಡಿ ಪ್ರತೀಕಾರ ತೀರಿಸಿಕೊಂಡಿದ್ದಾನೆ. ವರದಿಗಳ ಪ್ರಕಾರ, ಆರೋಪಿಯು ಮೊಬೈಲ್ ಕದ್ದಿದ್ದ ಅದನ್ನು ಈ ಬಾಲಕ ನೋಡಿದ್ದಷ್ಟೇ ಅಲ್ಲದೆ, ಆತನೇ ಕದ್ದಿದ್ದಾನೆಂದು ಹಿಡಿದುಕೊಟ್ಟಿದ್ದ, ಆ ಅಪ್ರಾಪ್ತ ಬಾಲಕ ತನಗೆ ಅವಮಾನ ಮಾಡಿದವನ ಮೇಲೆ ಸೇಡು ತೋರಿಸಿಕೊಳ್ಳಲು ಎರಡು ತಿಂಗಳಿನಿಂದ ಹೊಂಚು ಹಾಕಿದ್ದ.

ಕಳ್ಳತನದ ಬಗ್ಗೆ ಆ ಬಾಲಕ ತನ್ನ ತಂದೆ ಬಳಿ ಹೇಳಿದ್ದ, ಕೂಡಲೇ ಮೊಬೈಲ್ ವಶಪಡಿಸಿಕೊಂಡು ಕ್ಷಮೆಯಾಚಿಸುಂತೆ ಮಾಡಲಾಗಿತ್ತು. ಅಂದಿನಿಂದ ಆ ಬಾಲಕನ ಮೇಲೆ ಆರೋಪಿಗೆ ದ್ವೇಷವಿತ್ತು. ಜುಲೈ 19ರಂದು ಬಾಲಕನ ತಾಯಿ ಸಂಜೆ 7 ಗಂಟೆ ಸುಮಾರಿಗೆ ಮನೆಗೆ ಹಿಂದಿರುಗಿದಾಗ ಮಗ ಕಾಣಿಸದಿದ್ದಾಗ ಮಕ್ಕಳೊಂದಿಗೆ ಆಟವಾಡುತ್ತಿರಬಹುದು ಎಂದುಕೊಂಡಿದ್ದರು.

ಬಾಲಕನ ತಂದೆ ರಾತ್ರಿ 8 ಗಂಟೆಗೆ ಕೆಲಸಕ್ಕೆ ಹೋದರು.ಮರುದಿನ ಬೆಳಗ್ಗೆ ಜುಲೈ 20ರಂದು ಬಸ್ ನಿಲ್ದಾಣದ ಬಳಿ ಬಾಲಕನ ಶವ ಪತ್ತೆಯಾಗಿದೆ. ಎದೆ ಮತ್ತು ಹಣೆಯ ಮೇಲೆ ಗಾಯದ ಗುರುತುಗಳಿದ್ದವು. ಪೊಲೀಸರಿಗೆ ಮಾಹಿತಿ ನೀಡಲಾಯಿತು.

ಮತ್ತಷ್ಟು ಓದಿ: ಕೈತಪ್ಪಿ ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ

ಪೊಲೀಸರ ಪ್ರಕಾರ ಆರಂಭಿಕ ತನಿಖೆಯಲ್ಲಿ ಆರೋಪಿ ಕೊಲೆಯನ್ನು ಒಪ್ಪಿಕೊಂಡಿದ್ದಾನೆ, ಫೋನ್​ ಕದ್ದಿದ್ದು ನಾನೇ ಎಂದು ಬಾಲಕ ಎಲ್ಲರ ಮುಂದೆ ಹೇಳಿದ್ದಕ್ಕೆ ಕೋಪಗೊಂಡಿದ್ದಾಗಿ ಹೇಳಿದ್ದಾನೆ. ಬಾಲಕನನ್ನು ಮನೆಗೆ ಕರೆದು ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ಬಾಲಕನಿಗೆ 18,20 ಬಾರಿ ಇರಿದಿದ್ದಾರೆ. ದಾಳಿಯ ನಂತರ ಆರೋಪಿ ಪರಾರಿಯಾಗಿದ್ದ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?