Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾಕುಂಭಮೇಳದಲ್ಲಿ ರವಿಶಂಕರ್ ಗುರೂಜಿಯೊಂದಿಗೆ ಸತ್ಸಂಗ, ಧ್ಯಾನ: ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ

ಪ್ರಯಾಗರಾಜ್‌ನ ಮಹಾಕುಂಭ ಮೇಳದಲ್ಲಿ ಆರ್ಟ್ ಆಫ್ ಲಿವಿಂಗ್ ಆಯೋಜಿಸಿದ್ದ ಧ್ಯಾನ ಕಾರ್ಯಕ್ರಮದಲ್ಲಿ ಸಾವಿರಾರು ಜನ ಭಾಗವಹಿಸಿದ್ದರು. ಶ್ರೀ ಶ್ರೀ ರವಿಶಂಕರ್ ಅವರು ಸತ್ಸಂಗವನ್ನು ನಡೆಸಿ, ಗಂಗಾ, ಯಮುನಾ ಮತ್ತು ಸರಸ್ವತಿಯ ಸಂಗಮದ ಮಹತ್ವವನ್ನು ವಿವರಿಸಿ್ದಾರೆ. ಜ್ಞಾನ, ಭಕ್ತಿ ಮತ್ತು ಕರ್ಮದ ಏಕತೆಯ ಮಹತ್ವವನ್ನು ಒತ್ತಿ ಹೇಳಿದ್ದಾರೆ.

ಮಹಾಕುಂಭಮೇಳದಲ್ಲಿ ರವಿಶಂಕರ್ ಗುರೂಜಿಯೊಂದಿಗೆ ಸತ್ಸಂಗ, ಧ್ಯಾನ: ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ
ಮಹಾಕುಂಭಮೇಳದಲ್ಲಿ ರವಿಶಂಕರ್ ಗುರೂಜಿಯೊಂದಿಗೆ ಸತ್ಸಂಗ, ಧ್ಯಾನ: ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Feb 06, 2025 | 4:13 PM

ಪ್ರಯಾಗರಾಜ್, ಫೆಬ್ರವರಿ 06: ಮಹಾಕುಂಭ ಮೇಳವು (Mahakumbh) ಆಧ್ಯಾತ್ಮಿಕ ಪರಂಪರೆಗಳ ಮತ್ತು ಸಂಸ್ಕೃತಿಯ ಭವ್ಯ ಸಂಗಮವಾಗಿದ್ದು, ಈ ವರ್ಷ ಅದಕ್ಕೆ ಮತ್ತೊಂದು ವಿಶೇಷವನ್ನು ಸೇರ್ಪಡಿಸಲಾಯಿತು. ಆರ್ಟ್ ಆಫ್ ಲಿವಿಂಗ್ ಆಯೋಜಿಸಿದ್ದ, “ಮಹಾಕುಂಭದಿಂದ ಗುರುದೇವರೊಡನೆ ಧ್ಯಾನ ಮಾಡಿ” ಕಾರ್ಯಕ್ರಮದಲ್ಲಿ ಅನೇಕ ಸಾವಿರ ಸಾಧಕರು ಭಾಗವಹಿಸಿದ್ದರು.

ಮಂಗಳವಾರ ಸಂಜೆಯಂದು ಜಾಗತಿಕ ಆಧ್ಯಾತ್ಮಿಕ ಗುರು, ಮಾನವತಾವಾದಿ ಗುರುದೇವ್ ಶ್ರೀ ಶ್ರೀ ರವಿಶಂಕರರು ಸತ್ಸಂಗವನ್ನು ನಡೆಸಿಕೊಟ್ಟರು. ಈ ಸತ್ಸಂಗದಲ್ಲಿ ಅನೇಕ ಸಾವಿರ ತೀರ್ಥಯಾತ್ರಿಗಳೊಡನೆ ಸಂತರೂ ಭಕ್ತಿ ಸಂಗೀತದಲ್ಲಿ ಮತ್ತು ಜ್ಞಾನದಲ್ಲಿ ಮೀಯಲು ಬಂದಿದ್ದರು. 180 ದೇಶಗಳ ಭಕ್ತರಿಗೆ ಮಹಾಕುಂಭದ ಪವಿತ್ರ ಭೂಮಿಯಿಂದ ಜಾಗತಿಕ ಧ್ಯಾನವನ್ನು ನಡೆಸಿಕೊಟ್ಟರು. ಈ ಧ್ಯಾನವನ್ನು ಗುರುದೇವರ ಅಧಿಕೃತ ಯೂಟ್ಯೂಬ್ ಚಾನೆಲ್​ನಲ್ಲಿ ಮತ್ತು ಆರ್ಟ್ ಆಫ್ ಲಿವಿಂಗ್​ನ ಸತ್ವ ಆ್ಯಪ್​​ನಲ್ಲಿ ನೇರ ಪ್ರಸಾರ ಮಾಡಲಾಗಿತ್ತು.

Whatsapp Image 2025 02 06 At 13.13.18 4f2d679a

 

ಗುರುದೇವ್ ಶ್ರೀ ಶ್ರೀ ರವಿಶಂಕರರೊಡನೆ ಜಗತ್ತಿನ ಸಾವಿರಾರು ಸಾಧಕರು ವಿಶ್ವಧ್ಯಾನದಲ್ಲಿ ಪಾಲ್ಗೊಂಡರು ಮತ್ತು ಅನೇಕ ಮಿಲಿಯನ್ ಜನರು ಆನ್​ಲೈನ್​ ಮೂಲಕ ಪಾಲ್ಗೊಂಡರು. 250 ಟನ್ಗಳಷ್ಟು ಆಹಾರ ಮತ್ತಿನ್ನಿತರ ಅವಶ್ಯಕ ವಸ್ತುಗಳನ್ನು ಮಹಾಕುಂಭದಲ್ಲಿ ಆರ್ಟ್ ಆಫ್ ಲಿವಿಂಗ್​ನ ಸ್ವಯಂಸೇವಕರು ವಿತರಿಸಿದರು.

ಶ್ರೀ ಶ್ರೀ ರವಿಶಂಕರ್ ಗುರೂಜಿ ಹೇಳಿದ್ದಿಷ್ಟು

ಈ ಸಂದರ್ಭದಲ್ಲಿ ಮಾತನಾಡಿದ ಗುರುದೇವರು, ಕುಂಭ ಪರ್ವದ ಸಾರವೆಂದರೆ ನಿಮ್ಮೊಳಗಿನ ಪೂರ್ಣತೆಯನ್ನು ತಿಳಿಯುವುದು. ಜ್ಞಾನ, ಭಕ್ತಿ ಮತ್ತು ಕರ್ಮ ಒಂದಾಗಿ ಬಂದಾಗ ಮಾತ್ರ ಇದು ನಡೆಯಲು ಸಾಧ್ಯ. ಇಲ್ಲಿ ಹರಿಯುತ್ತಿರುವ ಗಂಗೆಯು ಜ್ಞಾನದ ಪ್ರತೀಕವಾದರೆ, ಯಮುನೆ ಭಕ್ತಿಯ ಪ್ರತೀಕ ಮತ್ತು ಅಗೋಚರವಾಗಿರುವ ಸರಸ್ವತಿ ಕರ್ಮದ ಪ್ರತೀಕ” ಎಂದು ಹೇಳಿದ್ದಾರೆ.

Whatsapp Image 2025 02 06 At 13.13.19 0227bbaf

 

ಇದು ಐಕ್ಯತೆಯ, ಶಾಂತಿಯ, ಮಾನವತೆಗೆ ಕರುಣೆಯ ಸಂದೇಶವನ್ನು ನೀಡಿದರು. ಗುರುದೇವರು, “ಗಂಗ, ಯಮುನಾ ಮತ್ತು ಸರಸ್ವತಿಯ ಸಂಗಮವು ಇಡ, ಪಿಂಗಳ ಮತ್ತು ಸುಷುಮ್ನ ಶಕ್ತಿ ನಾಡಿಗಳನ್ನು ಪ್ರತಿನಿಧಿಸುತ್ತವೆ. ಧ್ಯಾನದಲ್ಲಿ ನಾವು ಸ್ತಬ್ಧರಾದಾಗ ಅಮರತ್ವದ ಅಮೃತವನ್ನು ಅನುಭವಿಸುತ್ತೇವೆ” ಎಂದಿದ್ದಾರೆ.

ಇದನ್ನೂ ಓದಿ: Video: ಮಹಾಕುಂಭ ಮೇಳ, ಸಂಗಮದಲ್ಲಿ ಗಂಗಾ ಮಾತೆಗೆ ನಮಸ್ಕರಿಸಿದ ಮೋದಿ

ಮಹಾಕುಂಭದಲ್ಲಿ ನಡೆಯುತ್ತಿರುವ ಸೇವಾ ಕಾರ್ಯಗಳು. ಮಹಾಕುಂಭದಲ್ಲಿ ಆರ್ಟ್ ಆಫ್ ಲಿವಿಂಗ್ ಅನೇಕ ಸೇವಾ ಕಾರ್ಯಗಳನ್ನು ನಡೆಸುತ್ತಿದೆ. ಉಚಿತ ಆಹಾರ, ಆಯುರ್ವೇದದ ಆರೈಕೆ ಮತ್ತು ತೀರ್ಥಯಾತ್ರಿಗಳ ಒಳಿತಿನ ಸೇವೆಯನ್ನು 25 ಸೆಕ್ಟರ್​ಗಳಲ್ಲೂ ನಡೆಸುತ್ತಿದೆ. ಆರ್ಟ್ ಆಫ್ ಲಿವಿಂಗ್​ನ ಶಿಬಿರದಲ್ಲಿ ಪ್ರತಿನಿತ್ಯ ಒಂದು ಟನ್ ಕಿಚಡಿಯನ್ನು ಪ್ರತಿನಿತ್ಯ ಎರಡು ಸಲ ಸಿದ್ಧಪಡಿಸಿ, 25,000-30,000 ಭಕ್ತರಿಗೆ ಹಂಚಲಾಗುತ್ತಿದೆ.

Whatsapp Image 2025 02 06 At 13.13.21 Eca28d9d

 

ಇದರೊಡನೆ ಶ್ರೀ ಶ್ರೀ ತತ್ವದ ಎಂಟು ತಜ್ಞ ನಾಡಿ ವೈದ್ಯರು 5000 ಜನರಿಗೆ ನಾಡಿ ಪರೀಕ್ಷೆಯನ್ನು ನಡೆಸಿ, ಆಯುರ್ವೈದ್ಯಕೀಯ ಸಲಹೆಗಳನ್ನು ನೀಡಿದರು. ಮಂಗಳವಾರ ಬೆಳಗ್ಗೆ ಗುರುದೇವರು ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಿ, ಪ್ರಯಾಗರಾಜ್​ನ ಐತಿಹಾಸಿಕ ಬಡೇ ಹನುಮಾನ್ ಮಂದಿರಕ್ಕೆ ಭೇಟಿ ನೀಡಿದರು. ಆರ್ಟ್ ಆಫ್ ಲಿವಿಂಗ್​ನ ಶಿಬಿರದಲ್ಲಿ ಗುರುದೇವರ ಸಾನ್ನಿಧ್ಯದಲ್ಲಿ ರುದ್ರ ಪೂಜೆ, ಅರುಣಪ್ರಶ್ನ ಹೋಮ, ಸೂರ್ಯಸೂಕ್ತ ಹೋಮಗಳು ನಡೆದವು. ಸೋಮವಾರದ ಸತ್ಸಂಗದಲ್ಲಿ ಜುನಾ ಅಖಾಡದ ನಾಗಾ ಸಾಧುಗಳು ಮತ್ತಿನ್ನಿತರ ಗಣ್ಯರು ಗುರುದೇವರನ್ನು ಭೇಟಿ ಮಾಡಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಹೇಳಿದ ಸತ್ಯವನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ: ಶಿವಕುಮಾರ್
ಹೇಳಿದ ಸತ್ಯವನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ: ಶಿವಕುಮಾರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ
ಲಾಂಗ್ ಹಿಡಿದ ಪ್ರಕರಣ: ಮತ್ತೆ ಪೊಲೀಸ್ ಠಾಣೆಗೆ ರಜತ್, ವಿನಯ್ ಗೌಡ ಅಲೆದಾಟ
ಲಾಂಗ್ ಹಿಡಿದ ಪ್ರಕರಣ: ಮತ್ತೆ ಪೊಲೀಸ್ ಠಾಣೆಗೆ ರಜತ್, ವಿನಯ್ ಗೌಡ ಅಲೆದಾಟ