AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡು ತಿಂಗಳ ಹಿಂದಿನ ಘಟನೆಗೆ ಸೇಡು; ಶಾಲಾ ಹುಡುಗನಿಂದ ಗುಂಡಿನ ದಾಳಿ

Haryana Teenager shoots his schoolmate using licensed pistol of his father: ಹರ್ಯಾಣದ ಗುರುಗ್ರಾಮ್​ನ ಸೆಕ್ಟರ್ 48ರಲ್ಲಿರುವ ಫ್ಲ್ಯಾಟ್​ವೊಂದರಲ್ಲಿ ಶಾಲಾ ವಿದ್ಯಾರ್ಥಿಯೊಬ್ಬ ತನ್ನ ಸ್ಕೂಲ್​ಮೇಟ್ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ. ತನ್ನ ಅಪ್ಪನ ಪಿಸ್ತೂಲ್ ಬಳಸಿ ಈ ದಾಳಿ ಎಸಗಿದ್ದಾನೆ. ಗುಂಡೇಟು ತಿಂದ 17 ವರ್ಷದ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಪೊಲೀಸರು ಆರೋಪಿ ಹಾಗೂ ಆತನಿಗೆ ಸಹಕರಿಸಿದ ಸ್ನೇಹಿತ, ಇಬ್ಬರನ್ನೂ ಬಂಧಿಸಿದ್ದಾರೆ.

ಎರಡು ತಿಂಗಳ ಹಿಂದಿನ ಘಟನೆಗೆ ಸೇಡು; ಶಾಲಾ ಹುಡುಗನಿಂದ ಗುಂಡಿನ ದಾಳಿ
ಜೈಲಿನ ಪ್ರಾತಿನಿಧಿಕ ಚಿತ್ರ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Nov 09, 2025 | 7:21 PM

Share

ನವದೆಹಲಿ, ನವೆಂಬರ್ 9: ಎರಡು ತಿಂಗಳ ಹಿಂದೆ ನಡೆದ ಘಟನೆಯೊಂದಕ್ಕೆ ಸೇಡು ತೀರಿಸಿಕೊಳ್ಳಲು 17 ವರ್ಷದ ಬಾಲಕನೊಬ್ಬ ತನ್ನ ಶಾಲೆಯ ಇನ್ನೊಬ್ಬ ವಿದ್ಯಾರ್ಥಿಯ ಮೇಲೆ ಗುಂಡಿನ ದಾಳಿ (gurugaon firing incident) ನಡೆಸಿದ ಘಟನೆ ಬೆಳಕಿಗೆ ಬಂದಿದೆ. ತನ್ನ ಅಪ್ಪನ ಪಿಸ್ತೂಲ್ ಅನ್ನು ಬಳಸಿ ಈ ಯುವಕ ಕೃತ್ಯ ಎಸಗಿರುವುದು ತಿಳಿದುಬಂದಿದೆ. ಶುಕ್ರವಾರ ರಾತ್ರಿ (ನ. 7) ಈ ಘಟನೆ ಸಂಭವಿಸಿದ್ದು, ಗುಂಡೇಟು ತಿಂದ ಯುವಕ ಗಂಭೀರವಾಗಿ ಗಾಯಗೊಂಡು, ಸಾವು ಬದುಕಿನ ಹೋರಾಟದಲ್ಲಿದ್ದಾನೆ.

ಹರ್ಯಾಣ ರಾಜ್ಯಕ್ಕೆ ಸೇರಿದ ಮತ್ತು ದೆಹಲಿ ಎನ್​ಸಿಆರ್ ವ್ಯಾಪ್ತಿಗೆ ಬರುವ ಗುರುಗ್ರಾಮ್ ನಗರದ ಸೆಕ್ಟರ್ 48ರಲ್ಲಿ ಈ ಫೈರಿಂಗ್ ಘಟನೆ ಸಂಭವಿಸಿದೆ. ಪೊಲೀಸರು 17 ವರ್ಷದ ಆರೋಪಿಯನ್ನು ಬಂಧಿಸಿದ್ದಾರೆ. ಈತನ ಜೊತೆ ಘಟನೆಯಲ್ಲಿ ಭಾಗಿಯಾದ ಆತನ ಸ್ನೇಹಿತನನ್ನೂ ಬಂಧಿಸಲಾಗಿದೆ.

ಇದನ್ನೂ ಓದಿ: ಮಕ್ಕಳಿಗೆ ಸಂಸ್ಕಾರ ಕಲಿಸದಿದ್ದರೆ ಲವ್ ಜಿಹಾದ್​ಗೆ ಬಲಿಯಾಗಬೇಕಾಗುತ್ತೆ: ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್

ಗಾಯಗೊಂಡಿರುವ ವಿದ್ಯಾರ್ಥಿಯು 11ನೇ ತರಗತಿಯಲ್ಲಿ ಓದುತ್ತಿದ್ದಾನೆ. ಆತನ ತಾಯಿ ನೀಡಿರುವ ಹೇಳಿಕೆ ಪ್ರಕಾರ ಶುಕ್ರವಾರ ರಾತ್ರಿ ಆಕೆಯ ಮಗನಿಗೆ ಶಾಲಾ ಸ್ನೇಹಿತರೊಬ್ಬರಿಂದ ಕರೆ ಬಂದಿದ್ದು, ಭೇಟಿಯಾಗುವಂತೆ ಕೇಳಿದ್ದಾರೆ. ಇದಕ್ಕೆ ಆ ಯುವಕ ಮೊದಲು ಒಪ್ಪಲಿಲ್ಲ. ಸ್ನೇಹಿತನ ಬಲವಂತಕ್ಕೆ ಒಪ್ಪಿ ಖೇರ್ಕಿ ದೌಲಾ ಟೋಲ್ ಪ್ಲಾಜಾಗೆ ಹೋಗಿ, ಆರೋಪಿಯನ್ನು ಭೇಟಿಯಾಗಿದ್ದಾನೆ.

ಆರೋಪಿಯು ಈತನನ್ನು ಸೆಕ್ಟರ್ 48ರಲ್ಲಿರುವ ತನ್ನ ಬಾಡಿಗೆ ಮನೆಗೆ ಕರೆದೊಯ್ದಿದ್ದಾನೆ. ಈ ವೇಳೆ ಆತನ ಜೊತೆ ಮತ್ತೊಬ್ಬ ಸ್ನೇಹಿತನೂ ಇರುತ್ತಾನೆ. ಆ ಮನೆಯಲ್ಲಿ ಆರೋಪಿಯು ತನ್ನ ಅಪ್ಪನ ಲೈಸೆನ್ಸ್ ಪಿಸ್ತೂಲ್ ಬಳಸಿ ಯುವಕನ ಮೇಲೆ ಫೈರಿಂಗ್ ಮಾಡಿದ್ದಾನೆ.

ಇದನ್ನೂ ಓದಿ: ನೊಬೆಲ್ ಪ್ರಶಸ್ತಿ ವಿಜೇತ ವಿಜ್ಞಾನಿ ಜೇಮ್ಸ್ ವಾಟ್ಸನ್ ನಿಧನ

ಆರೋಪಿಯ ತಂದೆ ಒಬ್ಬ ಪ್ರಾಪರ್ಟಿ ಡೀಲರ್ ಆಗಿದ್ದಾರೆ. ಅವರ ಬಳಿ ಪರವಾನಿಗೆ ಹೊಂದಿರುವ ಪಿಸ್ತೂಲ್ ಇತ್ತು. ಮನೆಯಲ್ಲಿದ್ದ ಆ ಪಿಸ್ತೂಲ್ ಅನ್ನೇ ಬಳಸಿ ಆರೋಪಿಯು ತನ್ನ ಸಹಪಾಠಿಯ ಮೇಲೆ ದಾಳಿ ಮಾಡಿದ್ದಾನೆ. ಪೊಲೀಸರ ಕಂಟ್ರೋಲ್ ರೂಮ್​ಗೆ ಶುಕ್ರವಾರ ಮಧ್ಯರಾತ್ರಿ ಕರೆ ಬಂದಿದೆ. ಸಾದರ್ ಠಾಣೆಯ ಪೊಲೀಸರು ಸ್ಥಳಕ್ಕೆ ಹೋಗಿ ನೋಡುವಷ್ಟರಲ್ಲಿ ಗಾಯಾಳುವನ್ನು ಮೇದಾಂತ ಆಸ್ಪತ್ರೆಗೆ ಸಾಗಿಸಲಾಗಿತ್ತು. ಒಂದು ಪಿಸ್ತೂಲ್, ಒಂದು ಮ್ಯಾಗಜಿನ್, ಐದು ಲೈವ್ ಕಾರ್ಟ್ರಿಟ್ಜ್​ಗಳನ್ನು ಘಟನೆಯ ಸ್ಥಳದಿಂದ ವಶಕ್ಕೆ ಪಡೆಯಲಾಗಿದೆ. ಅದೇ ಮನೆಯಲ್ಲಿ ಮತ್ತೊಂದು ಮ್ಯಾಗಜಿನ್ ಹಾಗೂ 65 ಲೈವ್ ಕಾರ್ಟ್ರಿಡ್ಜ್​ಗಳು ಪೊಲೀಸರಿಗೆ ಸಿಕ್ಕಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ