AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುರುಗ್ರಾಮ: ಟ್ಯಾಂಕರ್, ರೋಲ್ಸ್​ ರಾಯ್ಸ್​ ಕಾರು ನಡುವೆ ಮುಖಾಮುಖಿ ಡಿಕ್ಕಿ, ಕಾರಿನಲ್ಲಿದ್ದವ್ರು ಬದುಕಿದ್ರು, ಟ್ಯಾಂಕರ್​ನಲ್ಲಿದ್ದವರು ಸಾವು

ಗುರುಗ್ರಾಮದ ಬಳಿ ದೆಹಲಿ-ಮುಂಬೈ-ಬರೋಡಾ ಎಕ್ಸ್​ಪ್ರೆಸ್​ವೇನಲ್ಲಿ ಭಾರಿ ಅಪಘಾತ ಸಂಭವಿಸಿದೆ. ರೋಲ್ಸ್​ ರಾಯ್ಸ್​ ಕಾರು ಹಾಗೂ ಟ್ಯಾಂಕರ್​ ನಡುವೆ ಮುಖಾಮುಖಿ ಡಿಕ್ಕಿ ಉಂಟಾಗಿತ್ತು. ಭಾರಿ ವಾಹನವು ಐಟಾರಾಮಿ ಕಾರಿಗೆ ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ಮೂವರಿಗೆ ಗಾಯಗಳಾಗಿವೆ, ಟ್ಯಾಂಕರ್​ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಗುರುಗ್ರಾಮ: ಟ್ಯಾಂಕರ್, ರೋಲ್ಸ್​ ರಾಯ್ಸ್​ ಕಾರು ನಡುವೆ ಮುಖಾಮುಖಿ ಡಿಕ್ಕಿ, ಕಾರಿನಲ್ಲಿದ್ದವ್ರು ಬದುಕಿದ್ರು, ಟ್ಯಾಂಕರ್​ನಲ್ಲಿದ್ದವರು ಸಾವು
ಅಪಘಾತImage Credit source: The tribune
ನಯನಾ ರಾಜೀವ್
|

Updated on: Aug 23, 2023 | 2:53 PM

Share

ಗುರುಗ್ರಾಮದ ಬಳಿ ದೆಹಲಿ-ಮುಂಬೈ-ಬರೋಡಾ ಎಕ್ಸ್​ಪ್ರೆಸ್​ವೇನಲ್ಲಿ ಭಾರಿ ಅಪಘಾತ ಸಂಭವಿಸಿದೆ. ರೋಲ್ಸ್​ ರಾಯ್ಸ್​ ಕಾರು ಹಾಗೂ ಟ್ಯಾಂಕರ್​ ನಡುವೆ ಮುಖಾಮುಖಿ ಡಿಕ್ಕಿ ಉಂಟಾಗಿತ್ತು. ಭಾರಿ ವಾಹನವು ಐಟಾರಾಮಿ ಕಾರಿಗೆ ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ಮೂವರಿಗೆ ಗಾಯಗಳಾಗಿವೆ, ಟ್ಯಾಂಕರ್​ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮಂಗಳವಾರ ಮಧ್ಯಾಹ್ನ ನಗೀನಾ ಪೊಲೀಸ್ ಠಾಣಾ ವ್ಯಾಪ್ತಿಯ ಉಮ್ರಿ ಗ್ರಾಮದ ಬಳಿ ರಾಂಗ್ ಸೈಡ್‌ನಲ್ಲಿ ಚಲಿಸುತ್ತಿದ್ದ ಟ್ಯಾಂಕರ್ ಕಾರಿಗೆ ಮುಖಾಮುಖಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ನಂತರ ಲಿಮೋಸಿನ್‌ಗೆ ತಕ್ಷಣವೇ ಬೆಂಕಿ ಹೊತ್ತಿಕೊಂಡಿತು ಎಂದು ಪೊಲೀಸರು ತಿಳಿಸಿದ್ದಾರೆ, ಆದರೆ ಇನ್ನೊಂದು ಕಾರಿನಲ್ಲಿ ಹಿಂದೆಯೇ ಇದ್ದ ಅವರ ಸಂಬಂಧಿಕರು ಎಲ್ಲಾ ಐವರು ಪ್ರಯಾಣಿಕರನ್ನು ಕ್ಷಣಾರ್ಧದಲ್ಲಿ ರಕ್ಷಿಸಲಾಗಿದೆ.

ಅಪಘಾತದಲ್ಲಿ ಮೃತಪಟ್ಟವರನ್ನು ಟ್ಯಾಂಕರ್ ಟ್ರಕ್ ಚಾಲಕ ರಾಮಪ್ರೀತ್ ಮತ್ತು ಆತನ ಸಹಾಯಕ ಕುಲದೀಪ್ ಎಂದು ಗುರುತಿಸಲಾಗಿದ್ದು, ಇಬ್ಬರೂ ಉತ್ತರ ಪ್ರದೇಶದ ನಿವಾಸಿಗಳು.

ಮತ್ತಷ್ಟು ಓದಿ: ಮಹಾರಾಷ್ಟ್ರದಲ್ಲಿ ಬೈಕಿನ ಚಕ್ರಕ್ಕೆ ದುಪಟ್ಟಾ ಸಿಲುಕಿ ಮಹಿಳೆ ಸಾವು

ರೋಲ್ಸ್ ರಾಯ್ಸ್ ಕಾರಿನಲ್ಲಿದ್ದ ಮೂವರು ಗಾಯಗೊಂಡವರನ್ನು ಚಂಡೀಗಢ ನಿವಾಸಿಗಳಾದ ದಿವ್ಯಾ ಮತ್ತು ತಸ್ಬೀರ್ ಮತ್ತು ದೆಹಲಿಯ ವಿಕಾಸ್ ಎಂದು ಗುರುತಿಸಲಾಗಿದ್ದು, ಅವರಿಗೆ ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.

ಗಾಯಾಳುಗಳ ಹೇಳಿಕೆಯನ್ನು ದಾಖಲಿಸಿಕೊಂಡ ನಂತರ ಎಫ್‌ಐಆರ್ ದಾಖಲಿಸಲಾಗುವುದು ಎಂದು ತನಿಖಾಧಿಕಾರಿ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಅಶೋಕ್ ಕುಮಾರ್ ತಿಳಿಸಿದ್ದಾರೆ. ಅಪಘಾತದ ಬಗ್ಗೆ ಮೃತರ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಲಾಗಿದೆ ಎಂದು ಎಎಸ್‌ಐ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ