ಗುರುಗ್ರಾಮ: ಟ್ಯಾಂಕರ್, ರೋಲ್ಸ್​ ರಾಯ್ಸ್​ ಕಾರು ನಡುವೆ ಮುಖಾಮುಖಿ ಡಿಕ್ಕಿ, ಕಾರಿನಲ್ಲಿದ್ದವ್ರು ಬದುಕಿದ್ರು, ಟ್ಯಾಂಕರ್​ನಲ್ಲಿದ್ದವರು ಸಾವು

ಗುರುಗ್ರಾಮದ ಬಳಿ ದೆಹಲಿ-ಮುಂಬೈ-ಬರೋಡಾ ಎಕ್ಸ್​ಪ್ರೆಸ್​ವೇನಲ್ಲಿ ಭಾರಿ ಅಪಘಾತ ಸಂಭವಿಸಿದೆ. ರೋಲ್ಸ್​ ರಾಯ್ಸ್​ ಕಾರು ಹಾಗೂ ಟ್ಯಾಂಕರ್​ ನಡುವೆ ಮುಖಾಮುಖಿ ಡಿಕ್ಕಿ ಉಂಟಾಗಿತ್ತು. ಭಾರಿ ವಾಹನವು ಐಟಾರಾಮಿ ಕಾರಿಗೆ ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ಮೂವರಿಗೆ ಗಾಯಗಳಾಗಿವೆ, ಟ್ಯಾಂಕರ್​ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಗುರುಗ್ರಾಮ: ಟ್ಯಾಂಕರ್, ರೋಲ್ಸ್​ ರಾಯ್ಸ್​ ಕಾರು ನಡುವೆ ಮುಖಾಮುಖಿ ಡಿಕ್ಕಿ, ಕಾರಿನಲ್ಲಿದ್ದವ್ರು ಬದುಕಿದ್ರು, ಟ್ಯಾಂಕರ್​ನಲ್ಲಿದ್ದವರು ಸಾವು
ಅಪಘಾತ
Image Credit source: The tribune

Updated on: Aug 23, 2023 | 2:53 PM

ಗುರುಗ್ರಾಮದ ಬಳಿ ದೆಹಲಿ-ಮುಂಬೈ-ಬರೋಡಾ ಎಕ್ಸ್​ಪ್ರೆಸ್​ವೇನಲ್ಲಿ ಭಾರಿ ಅಪಘಾತ ಸಂಭವಿಸಿದೆ. ರೋಲ್ಸ್​ ರಾಯ್ಸ್​ ಕಾರು ಹಾಗೂ ಟ್ಯಾಂಕರ್​ ನಡುವೆ ಮುಖಾಮುಖಿ ಡಿಕ್ಕಿ ಉಂಟಾಗಿತ್ತು. ಭಾರಿ ವಾಹನವು ಐಟಾರಾಮಿ ಕಾರಿಗೆ ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ಮೂವರಿಗೆ ಗಾಯಗಳಾಗಿವೆ, ಟ್ಯಾಂಕರ್​ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮಂಗಳವಾರ ಮಧ್ಯಾಹ್ನ ನಗೀನಾ ಪೊಲೀಸ್ ಠಾಣಾ ವ್ಯಾಪ್ತಿಯ ಉಮ್ರಿ ಗ್ರಾಮದ ಬಳಿ ರಾಂಗ್ ಸೈಡ್‌ನಲ್ಲಿ ಚಲಿಸುತ್ತಿದ್ದ ಟ್ಯಾಂಕರ್ ಕಾರಿಗೆ ಮುಖಾಮುಖಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ನಂತರ ಲಿಮೋಸಿನ್‌ಗೆ ತಕ್ಷಣವೇ ಬೆಂಕಿ ಹೊತ್ತಿಕೊಂಡಿತು ಎಂದು ಪೊಲೀಸರು ತಿಳಿಸಿದ್ದಾರೆ, ಆದರೆ ಇನ್ನೊಂದು ಕಾರಿನಲ್ಲಿ ಹಿಂದೆಯೇ ಇದ್ದ ಅವರ ಸಂಬಂಧಿಕರು ಎಲ್ಲಾ ಐವರು ಪ್ರಯಾಣಿಕರನ್ನು ಕ್ಷಣಾರ್ಧದಲ್ಲಿ ರಕ್ಷಿಸಲಾಗಿದೆ.

ಅಪಘಾತದಲ್ಲಿ ಮೃತಪಟ್ಟವರನ್ನು ಟ್ಯಾಂಕರ್ ಟ್ರಕ್ ಚಾಲಕ ರಾಮಪ್ರೀತ್ ಮತ್ತು ಆತನ ಸಹಾಯಕ ಕುಲದೀಪ್ ಎಂದು ಗುರುತಿಸಲಾಗಿದ್ದು, ಇಬ್ಬರೂ ಉತ್ತರ ಪ್ರದೇಶದ ನಿವಾಸಿಗಳು.

ಮತ್ತಷ್ಟು ಓದಿ: ಮಹಾರಾಷ್ಟ್ರದಲ್ಲಿ ಬೈಕಿನ ಚಕ್ರಕ್ಕೆ ದುಪಟ್ಟಾ ಸಿಲುಕಿ ಮಹಿಳೆ ಸಾವು

ರೋಲ್ಸ್ ರಾಯ್ಸ್ ಕಾರಿನಲ್ಲಿದ್ದ ಮೂವರು ಗಾಯಗೊಂಡವರನ್ನು ಚಂಡೀಗಢ ನಿವಾಸಿಗಳಾದ ದಿವ್ಯಾ ಮತ್ತು ತಸ್ಬೀರ್ ಮತ್ತು ದೆಹಲಿಯ ವಿಕಾಸ್ ಎಂದು ಗುರುತಿಸಲಾಗಿದ್ದು, ಅವರಿಗೆ ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.

ಗಾಯಾಳುಗಳ ಹೇಳಿಕೆಯನ್ನು ದಾಖಲಿಸಿಕೊಂಡ ನಂತರ ಎಫ್‌ಐಆರ್ ದಾಖಲಿಸಲಾಗುವುದು ಎಂದು ತನಿಖಾಧಿಕಾರಿ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಅಶೋಕ್ ಕುಮಾರ್ ತಿಳಿಸಿದ್ದಾರೆ. ಅಪಘಾತದ ಬಗ್ಗೆ ಮೃತರ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಲಾಗಿದೆ ಎಂದು ಎಎಸ್‌ಐ ತಿಳಿಸಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us