AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಪದಲ್ಲಿ ಮಗನನ್ನು ಹುಚ್ಚ ಎಂದು ಕರೆದಿದ್ದಕ್ಕೆ ತಾಯಿಯನ್ನೇ ಹತ್ಯೆ ಮಾಡಿದ ಮಾನಸಿಕ ಅಸ್ವಸ್ಥ

ತಾಯಿಯೊಬ್ಬಳು ಹುಚ್ಚ ಎಂದು ಕರೆದಳೆನ್ನುವ ಕೋಪಕ್ಕೆ ಮಗನೊಬ್ಬ ಚಾಕುವಿನಿಂದ ಇರಿದು, ಬೆಂಕಿ ಹಚ್ಚಿ ಕೊಲೆ ಮಾಡಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ.

ಕೋಪದಲ್ಲಿ ಮಗನನ್ನು ಹುಚ್ಚ ಎಂದು ಕರೆದಿದ್ದಕ್ಕೆ ತಾಯಿಯನ್ನೇ ಹತ್ಯೆ ಮಾಡಿದ ಮಾನಸಿಕ ಅಸ್ವಸ್ಥ
ಬೆಂಕಿ
ನಯನಾ ರಾಜೀವ್
|

Updated on: Mar 11, 2024 | 10:47 AM

Share

ಮಾನಸಿಕ ಅಸ್ವಸ್ಥ(Mentally Ill) ಮಗನೊಬ್ಬ ತಾಯಿಯನ್ನೇ ಹತ್ಯೆ ಮಾಡಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಮೊದಲು ತಾಯಿಗೆ ಚಾಕುವಿನಿಂದ ಇರಿದು ಬಳಿಕ ಫ್ಲ್ಯಾಟ್​ಗೆ ಬೆಂಕಿ ಹಚ್ಚಿದ್ದಾನೆ. ಮಗನನ್ನು ಕೋಪದಲ್ಲಿ ಹುಚ್ಚ ಎಂದು ಕರೆದಿದ್ದಕ್ಕೆ ತಾಯಿಯನ್ನು ಮಗ ಬರ್ಬರವಾಗಿ ಹತ್ಯೆ ಮಾಡಿದ್ದಾನೆ.

ರಾನು ಶಾ ತನ್ನ ಪತಿ ಮತ್ತು ಮಗನೊಂದಿಗೆ ಗುರುಗ್ರಾಮದ ಸೆಕ್ಟರ್ 48 ರಲ್ಲಿ ಐಷಾರಾಮಿ ಅಪಾರ್ಟ್ಮೆಂಟ್ ಸಂಕೀರ್ಣವಾದ ವಿಪುಲ್ ಗ್ರೀನ್ಸ್‌ನಲ್ಲಿ ವಾಸಿಸುತ್ತಿದ್ದರು. ಆಕೆಯ ಮಗ ಅತ್ರಿಶ್ ಮಾನಸಿಕ ಅಸ್ವಸ್ಥನಾಗಿ ಬಹಳ ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದು, ಆತನ ಪೋಷಕರೊಂದಿಗೆ ಆಗಾಗ ಜಗಳ ನಡೆಯುತ್ತಿದ್ದ ಎಂದು ನೆರೆಹೊರೆಯವರು ತಿಳಿಸಿದ್ದಾರೆ.

ನಿನ್ನೆ ತಡರಾತ್ರಿ ಅವರ ಫ್ಲ್ಯಾಟ್​ನಿಂದ ಹೊಗೆ ಬರುತ್ತಿರುವುದನ್ನು ಕಂಡ ನೆರೆಹೊರೆಯವರು ತಕ್ಷಣ ಅಗ್ನಿಶಾಮಕ ದಳ ಹಾಗೂ ಪೊಲೀಸರಿಗೆ ಕರೆ ಮಾಡಿದ್ದಾರೆ. ಅವರು ಬಾಗಿಲು ಒಡೆದು ಒಳಗೆ ಹೋದಾಗ ಶಾ ಅವರು ಸುಟ್ಟ ಗಾಯಗಳಿಂದ ನರಳುತ್ತಿದ್ದರು. ತಕ್ಷಣ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂಬುದು ತಿಳಿದುಬಂದಿದೆ.

ಮತ್ತಷ್ಟು ಓದಿ: ದಾವಣಗೆರೆ: ಮರ್ಮಾಂಗ ಕತ್ತರಿಸಿಕೊಳ್ಳಲು ಮುಂದಾದ ಮಾನಸಿಕ ಅಸ್ವಸ್ಥ

ಪೊಲೀಸರ ಪ್ರಕಾರ, ಪ್ರಾಥಮಿಕ ತನಿಖೆಯ ಪ್ರಕಾರ ಅತ್ರಿಶ್ ಆಗಾಗ ಉದ್ರೇಕಗೊಂಡು ತನ್ನ ತಾಯಿಯ ಮೇಲೆ ಹಲ್ಲೆ ಮಾಡುತ್ತಿದ್ದ. ಕೋಪದಲ್ಲಿ ಆತನನ್ನು ಹುಚ್ಚ ಎಂದು ತಾಯಿ ಕರೆದಿದ್ದಾರೆ. ಅದಕ್ಕೆ ಕೋಪಗೊಂಡು ಪದೇ ಪದೇ ಆಕೆಗೆ ಚಾಕುವಿನಿಂದ ಇರಿದಿದ್ದಾನೆ.

ಬಳಿಕ ಅವರ ಮನೆಗೆ ಬೆಂಕಿ ಹಚ್ಚಿದ್ದಾನೆ. ಟೈಮ್ಸ್ ಆಫ್ ಇಂಡಿಯಾ ವರದಿಯ ಪ್ರಕಾರ, ತನಿಖೆಯನ್ನು ಹೇಗೆ ಮುಂದುವರಿಸಬೇಕು ಎಂಬುದರ ಕುರಿತು ಪೊಲೀಸರು ನಿರ್ಧಾರ ತೆಗೆದುಕೊಳ್ಳುವ ಮೊದಲು ವ್ಯಕ್ತಿಯ ಮಾನಸಿಕ ಆರೋಗ್ಯವನ್ನು ಮೌಲ್ಯಮಾಪನ ಮಾಡಲಾಗುತ್ತದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಮಯಾಂಕ್ ಗುಪ್ತಾ ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
'ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!': ಫೈರೋಜ್ ತಾಯಿ
'ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!': ಫೈರೋಜ್ ತಾಯಿ
PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು
PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು
ಯೂತ್ ಕಾಂಗ್ರೆಸ್​ನ ಫೈರೋಜ್ ಪಠಾಣ್​ ಕೊಲೆ ಬಗ್ಗೆ ಸ್ಫೋಟಕ ಮಾಹಿತಿ ಬಯಲು!
ಯೂತ್ ಕಾಂಗ್ರೆಸ್​ನ ಫೈರೋಜ್ ಪಠಾಣ್​ ಕೊಲೆ ಬಗ್ಗೆ ಸ್ಫೋಟಕ ಮಾಹಿತಿ ಬಯಲು!
ಅನನ್ಯಾಗಾಗಿ ಅದ್ಭುತವಾಗಿ ಹಾಡು ಹೇಳಿದ ಅಂಕಿತಾ ಅಮರ್
ಅನನ್ಯಾಗಾಗಿ ಅದ್ಭುತವಾಗಿ ಹಾಡು ಹೇಳಿದ ಅಂಕಿತಾ ಅಮರ್
ಇಂಜಿನಿಯರ್ ಮನೇಲಿತ್ತು 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 14 ಕೋಟಿ ಆಸ್ತಿ!
ಇಂಜಿನಿಯರ್ ಮನೇಲಿತ್ತು 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 14 ಕೋಟಿ ಆಸ್ತಿ!
2nd PUCಯಲ್ಲಿ 6ನೇ ರ‍್ಯಾಂಕ್ ಗಳಿಸಿದ ವಿಕಾಸ್ ಹೇಳಿದ್ದೇನು ನೋಡಿ!
2nd PUCಯಲ್ಲಿ 6ನೇ ರ‍್ಯಾಂಕ್ ಗಳಿಸಿದ ವಿಕಾಸ್ ಹೇಳಿದ್ದೇನು ನೋಡಿ!
25 ವರ್ಷಗಳ ಬಳಿಕ ರೀ-ರಿಲೀಸ್ ಆದ ಕೋಟಿಗೊಬ್ಬ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್
25 ವರ್ಷಗಳ ಬಳಿಕ ರೀ-ರಿಲೀಸ್ ಆದ ಕೋಟಿಗೊಬ್ಬ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್
ಚಂದ್ರನ ಅಂಗಳ ಸುತ್ತಿ ಭೂಮಿಗೆ ಸುರಕ್ಷಿತವಾಗಿ ವಾಪಸಾದ ನಾಸಾ ತಂಡ
ಚಂದ್ರನ ಅಂಗಳ ಸುತ್ತಿ ಭೂಮಿಗೆ ಸುರಕ್ಷಿತವಾಗಿ ವಾಪಸಾದ ನಾಸಾ ತಂಡ
ಪಾಕಿಸ್ತಾನದಲ್ಲಿಂದು ಶಾಂತಿ ಮಾತುಕತೆ: ಇಸ್ಲಾಮಾಬಾದ್ ಕಂಪ್ಲೀಟ್ ಲಾಕ್​ಡೌನ್!
ಪಾಕಿಸ್ತಾನದಲ್ಲಿಂದು ಶಾಂತಿ ಮಾತುಕತೆ: ಇಸ್ಲಾಮಾಬಾದ್ ಕಂಪ್ಲೀಟ್ ಲಾಕ್​ಡೌನ್!