AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಹೋದರನ ಸಹಾಯದಿಂದ ಲಿವ್​ ಇನ್​ ಸಂಗಾತಿಯ ಹತ್ಯೆಗೈದ ಮಹಿಳೆ

ಸಹೋದರನ ಸಹಾಯದಿಂದ ಲಿವ್​-ಇನ್​ ಸಂಗಾತಿಯನ್ನು ಹತ್ಯೆಗೈದ ಆರೋಪದ ಮೇಲೆ ಗುರುಗ್ರಾಮದಲ್ಲಿ ಮಹಿಳೆಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಹತ್ಯೆಗೆ ನಿಜವಾದ ಕಾರಣ ಇನ್ನೂ ಬಹಿರಂಗಗೊಂಡಿಲ್ಲ.

ಸಹೋದರನ ಸಹಾಯದಿಂದ ಲಿವ್​ ಇನ್​ ಸಂಗಾತಿಯ ಹತ್ಯೆಗೈದ ಮಹಿಳೆ
ಸಾವು
ನಯನಾ ರಾಜೀವ್
|

Updated on:May 21, 2024 | 7:56 AM

Share

ಮಹಿಳೆಯೊಬ್ಬರು ಸಹೋದರನ ಸಹಾಯದಿಂದ ಲಿವ್​-ಇನ್​ ಸಂಗಾತಿಯನ್ನು ಹತ್ಯೆ ಮಾಡಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ.  ತಲೆ ಮತ್ತು ಕುತ್ತಿಗೆಗೆ ಪ್ಯಾನ್‌ನಿಂದ ಹೊಡೆದು ಕೊಲೆಗೈದ ಆರೋಪದ ಮೇಲೆ ಪೊಲೀಸರು ಮಹಿಳೆಯೊಬ್ಬರ ವಿರುದ್ಧ ಸೋಮವಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಹಿಳೆ ತನ್ನ ಸಹೋದರನ ಸಹಾಯದಿಂದ ಟಿಕ್ರಿ ಗ್ರಾಮದಲ್ಲಿ ಕೊಲೆ ಮಾಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಗುರುಗ್ರಾಮದ ಅಶೋಕ್ ವಿಹಾರ್ ನಿವಾಸಿ ನೀತು ಅಲಿಯಾಸ್ ನಿಶಾ (34) ಮತ್ತು ವಿಕ್ಕಿ (28) ಕಳೆದ ಆರು ವರ್ಷಗಳಿಂದ ಸಂಬಂಧ ಹೊಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಮಹಿಳೆ ಮದುವೆಯಾಗಿದ್ದಾಳೆ ಆದರೆ ಪತಿಯಿಂದ ಬೇರ್ಪಟ್ಟಿದ್ದಾಳೆ. ಆಕೆಗೆ 15 ವರ್ಷದ ಮಗಳಿದ್ದಾಳೆ. ನ್ಯಾಯಾಲಯವು ನೀತುವನ್ನು ಒಂದು ದಿನದ ಪೊಲೀಸ್​ ಕಸ್ಟಡಿಗೆ ಒಪ್ಪಿಸಿದೆ. ಮಹಿಳೆಯ ಸಹೋದರ ಪರಾರಿಯಾಗಿದ್ದು, ಆತನನ್ನು ಹಿಡಿಯಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ.

ಮತ್ತಷ್ಟು ಓದಿ: ಸುತ್ತಿಗೆಯಿಂದ ಲಿವ್​ಇನ್ ಸಂಗಾತಿ ಕೊಂದು, ಮಗನ ಹತ್ಯೆ ಮಾಡಿ, ತಾನೂ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ

ಪೊಲೀಸರ ಪ್ರಕಾರ, ಶುಕ್ರವಾರ ತಡರಾತ್ರಿ ಕಚ್ಚಿ ಕಾಲೋನಿಯ ಮನೆಯೊಂದರಲ್ಲಿ ವಿಕ್ಕಿ ಶವವಾಗಿ ಪತ್ತೆಯಾಗಿದ್ದಾರೆ. ವಿಕ್ಕಿಯನ್ನು ಯಾರೋ ಕೊಲೆ ಮಾಡಿದ್ದಾರೆ ಎಂದು ಆತನ ಸಹೋದರ ದೂರು ದಾಖಲಿಸಿದ್ದಾರೆ. ಶನಿವಾರದಂದು ಸದರ್ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸದರ್ ಪೊಲೀಸ್ ಠಾಣೆಯ ಎಸ್‌ಎಚ್‌ಒ, ಇನ್‌ಸ್ಪೆಕ್ಟರ್ ಅರ್ಜುನ್ ದೇವ್ ನೇತೃತ್ವದ ಪೊಲೀಸ್ ತಂಡವು ಪ್ರಕರಣವನ್ನು ಭೇದಿಸಿ ಭಾನುವಾರ ಘಾಟಾ ಗ್ರಾಮದಿಂದ ನೀತುವನ್ನು ಬಂಧಿಸಿದೆ. ಪೊಲೀಸರು ವಿಕ್ಕಿಯ ಬಳಿಯಿದ್ದ ಮೊಬೈಲ್ ಫೋನ್ ಅನ್ನು ಸಹ ವಶಪಡಿಸಿಕೊಂಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:56 am, Tue, 21 May 24

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ