AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿಸಿದವನನ್ನು ನಂಬಿ ಮದುವೆಯಾಗಿ ಬಂದಿದ್ದ ಮಹಿಳೆ ನಾಲ್ಕೇ ತಿಂಗಳಲ್ಲಿ ಪತಿ ಕೈಯಿಂದಲೇ ಹೆಣವಾದ್ಲು

ಗುರುಗ್ರಾಮದಲ್ಲಿ ಪ್ರೇಮ ವಿವಾಹವಾದ ನಾಲ್ಕೇ ತಿಂಗಳಲ್ಲಿ ಪತ್ನಿಯನ್ನು ವರದಕ್ಷಿಣೆಗಾಗಿ ಪತಿ ಕೊಲೆ ಮಾಡಿರುವ ಘಟನೆ ವರದಿಯಾಗಿದೆ. ಸಹೋದ್ಯೋಗಿಗಳಾಗಿದ್ದ ಕಾಜಲ್ ಮತ್ತು ಅರುಣ್ ಪ್ರೀತಿಸಿ ಮದುವೆಯಾಗಿದ್ದರು. ಮದುವೆಯ ನಂತರ ಅರುಣ್ ವರದಕ್ಷಿಣೆ ಕಿರುಕುಳ ನೀಡಿದ್ದು, ಮಾರ್ಚ್ 17ರಂದು ವಿಷಕಾರಿ ಇಂಜೆಕ್ಷನ್ ನೀಡಿ ಕಾಜಲ್‌ನನ್ನು ಹತ್ಯೆ ಮಾಡಿದ್ದಾನೆ. ಪೊಲೀಸರ ತನಿಖೆ ವೇಳೆ ಆರೋಪಿ ಪತಿ ಕೊಲೆ ಒಪ್ಪಿಕೊಂಡಿದ್ದು, ಬಂಧಿಸಲಾಗಿದೆ.

ಪ್ರೀತಿಸಿದವನನ್ನು ನಂಬಿ ಮದುವೆಯಾಗಿ ಬಂದಿದ್ದ ಮಹಿಳೆ ನಾಲ್ಕೇ ತಿಂಗಳಲ್ಲಿ ಪತಿ ಕೈಯಿಂದಲೇ ಹೆಣವಾದ್ಲು
ಆರೋಪಿImage Credit source: NDTV
ನಯನಾ ರಾಜೀವ್
|

Updated on:Mar 22, 2026 | 3:34 PM

Share

ಗುರುಗ್ರಾಮ, ಮಾರ್ಚ್​ 22: ಪ್ರೀತಿಸಿ ನಾಲ್ಕು ತಿಂಗಳ ಹಿಂದೆ ಮದುವೆ(Marriage)ಯಾಗಿದ್ದ ವ್ಯಕ್ತಿ ವರದಕ್ಷಿಣೆಗಾಗಿ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ರೇಡಿಯಾಲಜಿಸ್ಟ್ ಆಗಿರುವ ಅರುಣ್ ಶರ್ಮಾ ಮತ್ತು ನರ್ಸ್ ಆಗಿರುವ ಕಾಜಲ್ ಗುರುಗ್ರಾಮ್‌ನ ನರ್ಸಿಂಗ್ ಹೋಂನಲ್ಲಿ ಸಹೋದ್ಯೋಗಿಗಳಾಗಿ ತಮ್ಮ ವೃತ್ತಿ ಜೀವನ ಪ್ರಾರಂಭಿಸಿದ್ದರು. ದೀರ್ಘಕಾಲ ಒಟ್ಟಿಗೆ ಕೆಲಸ ಮಾಡಿದ ಅವರ ಬಾಂಧವ್ಯ ಸ್ನೇಹವಾಗಿ ಬದಲಾಗಿತ್ತು ಮತ್ತು ಅವರಿಗೆ ತಿಳಿಯದೇ ಪ್ರೀತಿಯಲ್ಲಿ ಬಿದ್ದಿದ್ದರು.

ಅವರು ಒಂದು ಹೆಜ್ಜೆ ಮುಂದಿಟ್ಟು ಕಳೆದ ನವೆಂಬರ್‌ನಲ್ಲಿ ವಿವಾಹವಾದರು, ಒಟ್ಟಿಗೆ ಅವರ ಜೀವನದ ಹೊಸ ಅಧ್ಯಾಯವನ್ನು ಪ್ರಾರಂಭಿಸಿದರು. ಆದರೆ, ಆ ಸಂಬಂಧವು ನಾಲ್ಕು ತಿಂಗಳೊಳಗೆ ದುರಂತ ಅಂತ್ಯಗೊಂಡಿತು, ಅರುಣ್ ವರದಕ್ಷಿಣೆಗಾಗಿ ಆಕೆಯ ಕೊಲೆಯನ್ನೇ ಮಾಡಿದ್ದಾನೆ.

ಮದುವೆಯಾದ ಕೂಡಲೇ, ಅರುಣ್ ತನ್ನ ಹೆಂಡತಿಯ ಮೇಲೆ ಕ್ಷುಲ್ಲಕ ವಿಷಯಗಳಿಗೆ ದೈಹಿಕವಾಗಿ ಹಲ್ಲೆ ಮಾಡಲು ಶುರುಮಾಡಿದ್ದ ಎಂದು ಕಾಜಲ್ ಸಹೋದರ ಹೇಳಿದ್ದಾರೆ. ಹಣಕ್ಕಾಗಿ ಬೇಡಿಕೆ ಇಟ್ಟಿದ್ದ ಮತ್ತು ವರದಕ್ಷಿಣೆಗಾಗಿ ಕಿರುಕುಳ ನೀಡಲಾಗುತ್ತಿತ್ತು ಎಂದು ಅವರು ಹೇಳಿದ್ದಾರೆ.

ಮತ್ತಷ್ಟು ಓದಿ: ಮದುವೆ ಮನೆಗಳೇ ಈತನ ಟಾರ್ಗೆಟ್: ಕುಖ್ಯಾತ ಕಳ್ಳ ಪಲ್ಸರ್ ಬಾಬು ಅರೆಸ್ಟ್; 42 ಲಕ್ಷ ರೂ.ಗೂ ಅಧಿಕ ಮೌಲ್ಯದ ಸ್ವತ್ತು ವಶ!

ಮಾರ್ಚ್ 4 ರ ಹೋಳಿ ಹಬ್ಬದಂದು, ದಂಪತಿ ಗುರುಗ್ರಾಮ್‌ನ ಗರ್ಹಿ ಹರ್ಸಾರು ಎಂಬಲ್ಲಿ ಕಾಜಲ್ ಅವರ ಕುಟುಂಬದೊಂದಿಗೆ ಸ್ವಲ್ಪ ದಿನ ಇರಬೇಕೆಂದು ಬಂದಿದ್ದರು. ಸುಮಾರು ಎರಡು ವಾರಗಳ ನಂತರ, ಮಾರ್ಚ್ 17 ರಂದು, ಅರುಣ್, ಕಾಜಲ್ ಅವರನ್ನು ದೈಹಿಕವಾಗಿ ಹಲ್ಲೆ ಮಾಡಿದ್ದ. ಮರುದಿನ ಬೆಳಗ್ಗೆ, ಅರುಣ್ ಕಾಜಲ್ ಅವರನ್ನು ಕೆಳಗಡೆಗೆ ಕರೆದೊಯ್ದಿದ್ದ ಆಗ ಇಬ್ಬರ ನಡುವೆ ಜಗಳ ನಡೆದಿತ್ತು. ಸ್ವಲ್ಪ ಸಮಯದ ನಂತರ, ಕಾಜಲ್ ಪ್ರಜ್ಞೆ ತಪ್ಪಿ ಬಿದ್ದಿದ್ದಳು, ಮೂಗಿನಿಂದ ರಕ್ತಸ್ರಾವವಾಗುತ್ತಿತ್ತು, ಕುಟುಂಬವು ಕಾಜಲ್ ಳನ್ನು ಆಸ್ಪತ್ರೆಗೆ ಕರೆದೊಯ್ಯುವ ಹೊತ್ತಿಗೆ, ತುಂಬಾ ತಡವಾಗಿತ್ತು, ಆಕೆ ಕೊನೆಯುಸಿರೆಳೆದಿದ್ದಳು.

ಕಾಜಲ್ ಅವರ ಕುಟುಂಬವು ಶೌಚಾಲಯದಲ್ಲಿ ಸಿರಿಂಜ್ ಸಿಕ್ಕಿದೆ ಎಂದು ಹೇಳಿಕೊಂಡಿದ್ದು, ಅರುಣ್ ಆಕೆಗೆ ವಿಷ ಪೂರಿತ ಚುಚ್ಚುಮದ್ದು ನೀಡಿದ್ದಾನೆ ಎಂದು ಅವರು ಶಂಕಿಸಿದ್ದಾರೆ. ಪೊಲೀಸರ ವಿಚಾರಣೆಯ ಸಮಯದಲ್ಲಿ, ಅರುಣ್ ಕಾಜಲ್‌ಗೆ ವಿಷಕಾರಿ ಇಂಜೆಕ್ಷನ್ ನೀಡಿದ್ದರಿಂದ ಆಕೆಯ ಸಾವು ಸಂಭವಿಸಿದೆ ಎಂದು ಒಪ್ಪಿಕೊಂಡಿದ್ದಾನೆ.

ಉತ್ತರ ಪ್ರದೇಶದ ಗಾಜಿಯಾಬಾದ್‌ನ ಬೆಹ್ತಾ ಹಾಜಿಪುರದ ನಿವಾಸಿ ಅರುಣ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ಮಾದಕ ದ್ರವ್ಯ ಸೇವನೆ ಮಾಡುತ್ತಿದ್ದ ಎನ್ನುವ ಮಾಹಿತಿ ಲಭ್ಯವಾಗಿದೆ. ಅರುಣ್‌ನನ್ನು ರೈಲ್ವೆ ನಿಲ್ದಾಣದಿಂದ ಬಂಧಿಸಲಾಗಿದ್ದು, ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಯಲ್ಲಿ ಇರಿಸಲಾಗುತ್ತದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:33 pm, Sun, 22 March 26

Follow Us
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ