AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mercedes Benz: ವಕೀಲರೊಬ್ಬರು ಮೂತ್ರ ಮಾಡಲೆಂದು ಕಾರಿಂದ ಇಳಿದಾಗ, ದುಷ್ಕರ್ಮಿಗಳು ಚಾಕು ತೋರಿಸಿ ಮರ್ಸಿಡಿಸ್ ಕಾರು ಕದ್ದು ಪರಾರಿ

ದುಷ್ಕರ್ಮಿಗಳು ವಕೀಲೊಬ್ಬರಿಗೆ ಚಾಕು ತೋರಿಸಿ ಮರ್ಸಿಡಿಸ್ ಬೆನ್ಜ್​ ಕಾರು ಕದ್ದು ಪರಾರಿಯಾಗಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ.

Mercedes Benz: ವಕೀಲರೊಬ್ಬರು ಮೂತ್ರ ಮಾಡಲೆಂದು ಕಾರಿಂದ ಇಳಿದಾಗ, ದುಷ್ಕರ್ಮಿಗಳು ಚಾಕು ತೋರಿಸಿ ಮರ್ಸಿಡಿಸ್ ಕಾರು ಕದ್ದು ಪರಾರಿ
ಸಾಂದರ್ಭಿಕ ಚಿತ್ರImage Credit source: NDTV
TV9 Web
| Edited By: |

Updated on: Dec 17, 2022 | 7:25 AM

Share

ದುಷ್ಕರ್ಮಿಗಳು ವಕೀಲೊಬ್ಬರಿಗೆ ಚಾಕು ತೋರಿಸಿ ಮರ್ಸಿಡಿಸ್ ಬೆನ್ಜ್​ (Mercedes Benz)ಕಾರು ಕದ್ದು ಪರಾರಿಯಾಗಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಸೆಕ್ಟರ್ 29ರಲ್ಲಿ ಈ ಘಟನೆ ನಡೆದಿದ್ದು, ವಕೀಲರೊಬ್ಬರು ಮೂತ್ರ ಮಾಡಲೆಂದು ಕಾರಿಳಿದಿದ್ದಾರೆ, ಅದೇ ಸಮಯದಲ್ಲಿ ಬಂದ ದುಷ್ಕರ್ಮಿಗಳು ಚಾಕು ತೋರಿಸಿ ಮರ್ಸಿಡಿಸ್ ಬೆಂಜ್ ಕಾರನ್ನು ಕದ್ದು ಪರಾರಿಯಾಗಿದ್ದಾರೆ.

ಸೆಕ್ಟರ್ 66ರಲ್ಲಿ ವಾಸಿಸುತ್ತಿರುವ ವಕೀಲ ಅನುಜ್ ಬೇಡಿ ಅವರು ನೀಡಿರುವ ದೂರಿನ ಪ್ರಕಾರ, ಗುರುವಾರ ರಾತ್ರಿ 8.50ರ ಸುಮಾರಿಗೆ ಸೆಕ್ಟರ್ 29ರ ಪ್ರದೇಶದ ಅಗ್ನಿಶಾಮಕ ಠಾಣೆ ಹಾಗೂ ಆಡಿ ಶೋ ರೂಂ ಚೌಕ್ ನಡುವೆ ಈ ಘಟನೆ ನಡೆದಿದೆ.

‘‘ನಾನು ನನ್ನ ಬಿಳಿ ಮರ್ಸಿಡಿಸ್-ಸಿ 220(2014ರ ಮಾದರಿ)ಕಾರಿನಲ್ಲಿ ಸೆಕ್ಟರ್ 29ರಲ್ಲಿ ರಸ್ತೆ ಬದಿಯಲ್ಲಿ ನನ್ನ ಕಾರು ನಿಲ್ಲಿಸಿ ಮೂತ್ರ ವಿಸರ್ಜನೆಗೆ ಹೋಗಿದ್ದೆ. ಬಳಿಕ ಬಂದು ಕಾರು ಹತ್ತುವಾಗ ಮತ್ತೊಂದು ಕಾರು ಬಂದು ನಿಂತಿತು, ಅದರಿಂದ ಮೂರು ಜನ ಹೊರಬಂದು ಚಾಕು ತೋರಿಸಿ ನನ್ನ ಕಾರು ಕದ್ದು ಓಡಿ ಹೋಗಿದ್ದಾರೆ’’ ಎಂದು ಕಾರಿನ ಮಾಲೀಕ ಹೇಳಿಕೊಂಡಿದ್ದಾರೆ.

ದೂರಿನ ಬಳಿಕ ಸೆಕ್ಟರ್ 26 ಪೊಲೀಸ್ ಠಾಣೆಯಲ್ಲಿ ಐಪಿಸಿಯ ಸೆಕ್ಟನ್ 382 ಮತ್ತು 34 ಅಡಿಯಲ್ಲಿ ಎಫ್​ಐಆರ್ ದಾಖಲಾಗಿದೆ. ನಾವು ಸಮೀಪದ ಪ್ರದೇಶಗಳ ಸಿಸಿಟಿವಿ ದೃಶ್ಯಗಳ ಸಹಾಯದಿಂದ ಆರೋಪಿಗಳನ್ನು ಗುರಿತಿಸಲು ಪ್ರಯತ್ನಿಸುತ್ತಿದ್ದೇವೆ. ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ತನಿಖಾಧಿಕಾರಿ ಎಎಸ್​ಐ ಸಂದೀಪ್ ಕುಮಾರ್ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ