AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mercedes Benz: ವಕೀಲರೊಬ್ಬರು ಮೂತ್ರ ಮಾಡಲೆಂದು ಕಾರಿಂದ ಇಳಿದಾಗ, ದುಷ್ಕರ್ಮಿಗಳು ಚಾಕು ತೋರಿಸಿ ಮರ್ಸಿಡಿಸ್ ಕಾರು ಕದ್ದು ಪರಾರಿ

ದುಷ್ಕರ್ಮಿಗಳು ವಕೀಲೊಬ್ಬರಿಗೆ ಚಾಕು ತೋರಿಸಿ ಮರ್ಸಿಡಿಸ್ ಬೆನ್ಜ್​ ಕಾರು ಕದ್ದು ಪರಾರಿಯಾಗಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ.

Mercedes Benz: ವಕೀಲರೊಬ್ಬರು ಮೂತ್ರ ಮಾಡಲೆಂದು ಕಾರಿಂದ ಇಳಿದಾಗ, ದುಷ್ಕರ್ಮಿಗಳು ಚಾಕು ತೋರಿಸಿ ಮರ್ಸಿಡಿಸ್ ಕಾರು ಕದ್ದು ಪರಾರಿ
ಸಾಂದರ್ಭಿಕ ಚಿತ್ರImage Credit source: NDTV
TV9 Web
| Edited By: |

Updated on: Dec 17, 2022 | 7:25 AM

Share

ದುಷ್ಕರ್ಮಿಗಳು ವಕೀಲೊಬ್ಬರಿಗೆ ಚಾಕು ತೋರಿಸಿ ಮರ್ಸಿಡಿಸ್ ಬೆನ್ಜ್​ (Mercedes Benz)ಕಾರು ಕದ್ದು ಪರಾರಿಯಾಗಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಸೆಕ್ಟರ್ 29ರಲ್ಲಿ ಈ ಘಟನೆ ನಡೆದಿದ್ದು, ವಕೀಲರೊಬ್ಬರು ಮೂತ್ರ ಮಾಡಲೆಂದು ಕಾರಿಳಿದಿದ್ದಾರೆ, ಅದೇ ಸಮಯದಲ್ಲಿ ಬಂದ ದುಷ್ಕರ್ಮಿಗಳು ಚಾಕು ತೋರಿಸಿ ಮರ್ಸಿಡಿಸ್ ಬೆಂಜ್ ಕಾರನ್ನು ಕದ್ದು ಪರಾರಿಯಾಗಿದ್ದಾರೆ.

ಸೆಕ್ಟರ್ 66ರಲ್ಲಿ ವಾಸಿಸುತ್ತಿರುವ ವಕೀಲ ಅನುಜ್ ಬೇಡಿ ಅವರು ನೀಡಿರುವ ದೂರಿನ ಪ್ರಕಾರ, ಗುರುವಾರ ರಾತ್ರಿ 8.50ರ ಸುಮಾರಿಗೆ ಸೆಕ್ಟರ್ 29ರ ಪ್ರದೇಶದ ಅಗ್ನಿಶಾಮಕ ಠಾಣೆ ಹಾಗೂ ಆಡಿ ಶೋ ರೂಂ ಚೌಕ್ ನಡುವೆ ಈ ಘಟನೆ ನಡೆದಿದೆ.

‘‘ನಾನು ನನ್ನ ಬಿಳಿ ಮರ್ಸಿಡಿಸ್-ಸಿ 220(2014ರ ಮಾದರಿ)ಕಾರಿನಲ್ಲಿ ಸೆಕ್ಟರ್ 29ರಲ್ಲಿ ರಸ್ತೆ ಬದಿಯಲ್ಲಿ ನನ್ನ ಕಾರು ನಿಲ್ಲಿಸಿ ಮೂತ್ರ ವಿಸರ್ಜನೆಗೆ ಹೋಗಿದ್ದೆ. ಬಳಿಕ ಬಂದು ಕಾರು ಹತ್ತುವಾಗ ಮತ್ತೊಂದು ಕಾರು ಬಂದು ನಿಂತಿತು, ಅದರಿಂದ ಮೂರು ಜನ ಹೊರಬಂದು ಚಾಕು ತೋರಿಸಿ ನನ್ನ ಕಾರು ಕದ್ದು ಓಡಿ ಹೋಗಿದ್ದಾರೆ’’ ಎಂದು ಕಾರಿನ ಮಾಲೀಕ ಹೇಳಿಕೊಂಡಿದ್ದಾರೆ.

ದೂರಿನ ಬಳಿಕ ಸೆಕ್ಟರ್ 26 ಪೊಲೀಸ್ ಠಾಣೆಯಲ್ಲಿ ಐಪಿಸಿಯ ಸೆಕ್ಟನ್ 382 ಮತ್ತು 34 ಅಡಿಯಲ್ಲಿ ಎಫ್​ಐಆರ್ ದಾಖಲಾಗಿದೆ. ನಾವು ಸಮೀಪದ ಪ್ರದೇಶಗಳ ಸಿಸಿಟಿವಿ ದೃಶ್ಯಗಳ ಸಹಾಯದಿಂದ ಆರೋಪಿಗಳನ್ನು ಗುರಿತಿಸಲು ಪ್ರಯತ್ನಿಸುತ್ತಿದ್ದೇವೆ. ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ತನಿಖಾಧಿಕಾರಿ ಎಎಸ್​ಐ ಸಂದೀಪ್ ಕುಮಾರ್ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್