Sign In

By signing in or creating an account, you agree with Associated Broadcasting Company's Terms & Conditions and Privacy Policy.

Gurugram: ಮೂಕ ಪ್ರಾಣಿಗಳ ಮೇಲೇಕೆ ನಿಮ್ಮ ಕ್ರೂರತೆ ಪ್ರದರ್ಶನ, ಬೀದಿ ನಾಯಿಗೆ ಥಳಿಸಿ ಮಹಡಿಯಿಂದ ನೆಲಕ್ಕೆ ಎಸೆದ ವ್ಯಕ್ತಿಯ ಬಂಧನ

ಇತ್ತೀಚಿನ ದಿನಗಳಲ್ಲಿ ಜನರು ಮಾನವೀಯತೆ ಮರೆತು ವರ್ತಿಸುತ್ತಿದ್ದಾರೆ. ಯಾವುದೋ ಕೋಪವನ್ನು ಮುಗ್ಧ ಪ್ರಾಣಿಗಳ ಮೇಲೆ ತೀರಿಸಿಕೊಳ್ಳುತ್ತಾರೆ. ವ್ಯಕ್ತಿಯೊಬ್ಬ ಬೀದಿ ನಾಯಿಯನ್ನು ಥಳಿಸಿ, ಮನೆಯ ಮಹಡಿಯಿಂದ ನೆಲಕ್ಕೆ ಎಸೆದಿದ್ದು, ಸ್ಥಳದಲ್ಲೇ ವ್ಯಕ್ತಿಯನ್ನು ಬಂಧಿಸಲಾಗಿದೆ.

Gurugram: ಮೂಕ ಪ್ರಾಣಿಗಳ ಮೇಲೇಕೆ ನಿಮ್ಮ ಕ್ರೂರತೆ ಪ್ರದರ್ಶನ, ಬೀದಿ ನಾಯಿಗೆ ಥಳಿಸಿ ಮಹಡಿಯಿಂದ ನೆಲಕ್ಕೆ ಎಸೆದ ವ್ಯಕ್ತಿಯ ಬಂಧನ
ಬೀದಿ ನಾಯಿಗಳು(ಸಾಂದರ್ಭಿಕ ಚಿತ್ರ)
Follow us
ನಯನಾ ರಾಜೀವ್
|

Updated on: Jun 15, 2023 | 12:15 PM

ಇತ್ತೀಚಿನ ದಿನಗಳಲ್ಲಿ ಜನರು ಮಾನವೀಯತೆ ಮರೆತು ವರ್ತಿಸುತ್ತಿದ್ದಾರೆ. ಯಾವುದೋ ಕೋಪವನ್ನು ಮುಗ್ಧ ಪ್ರಾಣಿಗಳ ಮೇಲೆ ತೀರಿಸಿಕೊಳ್ಳುತ್ತಾರೆ. ವ್ಯಕ್ತಿಯೊಬ್ಬ ಬೀದಿ ನಾಯಿಯನ್ನು ಥಳಿಸಿ, ಮನೆಯ ಮಹಡಿಯಿಂದ ನೆಲಕ್ಕೆ ಎಸೆದಿದ್ದು, ಸ್ಥಳದಲ್ಲೇ ವ್ಯಕ್ತಿಯನ್ನು ಬಂಧಿಸಲಾಗಿದೆ. ಪೊಲೀಸರ ಪ್ರಕಾರ, ವ್ಯಕ್ತಿ ನಾಯಿಯನ್ನು ನಿರ್ದಯವಾಗಿ ಥಳಿಸಿ ತನ್ನ ಮನೆಯ ಟೆರೇಸ್​ನಿಂದ ಎಸೆದಿದ್ದಾನೆ.

ಅನುಭವ್ ಶರ್ಮಾ ಎಂಬುವವರು ಈ ದೂರು ನೀಡಿದ್ದಾರೆ, ಜೂನ್ 1 ರಂದು ಬೀದಿ ನಾಯಿಯನ್ನು ಎತ್ತಿಕೊಂಡು ಹೋಗಿ ಮನೆಗೆ ಕರೆದೊಯ್ದು ಅಮಾನುಷವಾಗಿ ಹೊಡೆದು ಬಳಿಕ ಟೆರೇಸ್​ನಿಂದ ರಸ್ತೆಗೆ ಎಸೆದಿದ್ದ.

ನ್ಯೂ ಪಾಲಮ್ ವಿಹಾರ್ 1 ನೇ ಹಂತದ ನಿವಾಸಿ ಸಿಂಗ್ ಅವರು ಮೇ ತಿಂಗಳಲ್ಲಿ ಎರಡು ನಾಯಿಗಳನ್ನು ಕೊಂದಿದ್ದ. ಇದಾದ ಬಳಿಕ ನಾಯಿಯೊಂದರ ದವಡೆ ಮುರಿದು ಎಸೆದಿದ್ದ.

ಪಿಟಿಐ ವರದಿಯ ಪ್ರಕಾರ, ಪ್ರಾಣಿ ಹಕ್ಕುಗಳ ಕಾರ್ಯಕರ್ತ ಅನುಭವ್ ಶರ್ಮಾ ಆರೋಪಿ ಹೋಶಿಯಾರ್ ಸಿಂಗ್ ವಿರುದ್ಧ ದೂರು ದಾಖಲಿಸಿದ್ದಾರೆ. ಬೀದಿ ನಾಯಿಗಳಿಗೆ ಹೊಡೆದು ತಮ್ಮ ಮನೆಯ ಛಾವಣಿಯಿಂದ ಕೆಳಗೆ ಎಸೆದಿದ್ದಾರೆ ಎಂದು ಆರೋಪಿಸಿದ್ದಾರೆ.

ಮತ್ತಷ್ಟು ಓದಿ: Bihar News: ಬಿಹಾರದಲ್ಲಿ 30 ಬೀದಿ ನಾಯಿಗಳಿಗೆ ಶೂಟ್ ಮಾಡಿ ಹತ್ಯೆ; ಕಾರಣ ಇಲ್ಲಿದೆ

ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ವ್ಯಕ್ತಿಯ ಈ ಅಮಾನುಷ ಕೃತ್ಯ ಸೆರೆಯಾಗಿದೆ. ಈ ಅಸಹಾಯಕ ನಾಯಿಗಳ ಹೇಯ ದೌರ್ಜನ್ಯಕ್ಕಾಗಿ ಸಿಂಗ್ ವಿರುದ್ಧದ ದೂರನ್ನು ಬೆಂಬಲಿಸುವ ಸಾಕ್ಷ್ಯವಾಗಿ ಭದ್ರತಾ ಕ್ಯಾಮೆರಾದ ದೃಶ್ಯಗಳನ್ನು ಪೊಲೀಸರಿಗೆ ಸಲ್ಲಿಸಿದ್ದೇನೆ ಎಂದು ಶರ್ಮಾ ಹೇಳಿದರು. ಅವರು ನಾಯಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ