AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದೂ ಶಾಸಕ ಏಕೆ ಆಯ್ಕೆಯಾಗಿಲ್ಲ? ಎಂದ ಕೇರಳದ ಬಿಜೆಪಿ ಅಭ್ಯರ್ಥಿ ವಿರುದ್ಧ ಕೇಸ್ ದಾಖಲು

ಕೇರಳದಲ್ಲಿ ಚುನಾವಣಾ ಅಖಾಡ ಸಿದ್ಧವಾಗಿದೆ. ಈ ನಡುವೆ ಗುರುವಾಯೂರಿನ ಬಿಜೆಪಿ ಅಭ್ಯರ್ಥಿಯೊಬ್ಬರು 'ಹಿಂದೂ ಶಾಸಕ' ಎಂಬ ಪದ ಬಳಕೆ ಮಾಡಿರುವುದು ವಿವಾದಕ್ಕೆ ಕಾರಣವಾಗಿದ್ದು, ಪ್ರತಿಪಕ್ಷಗಳು ಚುನಾವಣಾ ಆಯೋಗದಲ್ಲಿ ದೂರು ದಾಖಲಿಸಿವೆ. ಗುರುವಾಯೂರು ಎನ್‌ಡಿಎ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ವಿರುದ್ಧ ಕೋಮುವಾದಿ ಹೇಳಿಕೆ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಹಿಂದೂ ಶಾಸಕ ಏಕೆ ಆಯ್ಕೆಯಾಗಿಲ್ಲ? ಎಂದ ಕೇರಳದ ಬಿಜೆಪಿ ಅಭ್ಯರ್ಥಿ ವಿರುದ್ಧ ಕೇಸ್ ದಾಖಲು
B Gopalakrishnan
ಸುಷ್ಮಾ ಚಕ್ರೆ
|

Updated on: Mar 23, 2026 | 7:35 PM

Share

ತಿರುವನಂತಪುರಂ, ಮಾರ್ಚ್ 23: ಕೇರಳದ ವಿಧಾನಸಭಾ ಚುನಾವಣೆಗೂ (Kerala Assembly Elections) ಕೆಲವೇ ದಿನಗಳ ಮೊದಲು, ಕೇರಳದ ಬಿಜೆಪಿ ನಾಯಕ ಮತ್ತು ಗುರುವಾಯೂರಿನ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ವಿರುದ್ಧ ಕೇಸ್ ದಾಖಲಾಗಿದೆ. ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕೋಮುವಾದಿ ಹೇಳಿಕೆ ನೀಡಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಕೇರಳದಲ್ಲಿ ಏಪ್ರಿಲ್ 9ರಂದು ವಿಧಾನಸಭಾ ಚುನಾವಣೆ ನಡೆಯಲಿದ್ದು, ಮೇ 4ರಂದು ಫಲಿತಾಂಶ ಪ್ರಕಟವಾಗಲಿದೆ.

ಬಿಜೆಪಿ ಅಭ್ಯರ್ಥಿ ಗೋಪಾಲಕೃಷ್ಣನ್ ವಿರುದ್ಧ ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 192 ಮತ್ತು ಜನಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 125 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅವರ ಹೇಳಿಕೆಯ ವಿರುದ್ಧ ಕೇರಳ ರಾಜ್ಯದಲ್ಲಿ ಗಲಾಟೆ ಭುಗಿಲೆದ್ದ ನಂತರ ಈ ಬೆಳವಣಿಗೆ ನಡೆದಿದೆ. ಆಡಳಿತಾರೂಢ ಸಿಪಿಐ(ಎಂ) ಮತ್ತು ಕಾಂಗ್ರೆಸ್ ಈ ಹೇಳಿಕೆಗಳ ಕುರಿತು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದವು.

ಇದನ್ನೂ ಓದಿ: ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್; ಕಾಂಗ್ರೆಸ್ ವಿರುದ್ಧ ಕೇರಳ ಸಿಎಂ ಪಿಣರಾಯಿ ವಿಜಯನ್ ವಾಗ್ದಾಳಿ

ಕಾಂಗ್ರೆಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆಯಾದ ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು) ಕೂಡ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿ, ಬಿಜೆಪಿ ನಾಯಕನ ಈ ಹೇಳಿಕೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದೂರು ದಾಖಲಿಸಿದೆ. ಈ ಹೇಳಿಕೆ ಕೋಮುವಾದವನ್ನು ಹರಡುತ್ತಿದೆ ಎಂದು ಆರೋಪಿಸಲಾಗಿದೆ. ಈ ವಿಷಯದ ಬಗ್ಗೆ ಜಿಲ್ಲಾಧಿಕಾರಿಯಿಂದ ವರದಿ ಕೇಳಲಾಗಿದೆ.

ಚುನಾವಣಾ ಪ್ರಚಾರದ ವೀಡಿಯೊ ವೈರಲ್ ಆದ ನಂತರ ವಿವಾದ ಪ್ರಾರಂಭವಾಯಿತು. ಇದರಲ್ಲಿ ಬಿ. ಗೋಪಾಲಕೃಷ್ಣನ್ ಅವರು ಗುರುವಾಯೂರು ಕ್ಷೇತ್ರವು ಸುಮಾರು 5 ದಶಕಗಳಿಂದ “ಹಿಂದೂ ಶಾಸಕ”ನನ್ನು ಆಯ್ಕೆ ಮಾಡಿಲ್ಲ ಎಂದು ಹೇಳಿಕೊಂಡಿದ್ದಾರೆ. ಎಡಪಂಥೀಯರು ಮತ್ತು ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟ ಎರಡೂ ಸಮುದಾಯದ ಹಿಂದೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿಲ್ಲ ಎಂದು ಅವರು ಆರೋಪಿಸಿದ್ದರು. “ಗುರುವಾಯೂರ್‌ನಲ್ಲಿ ಇಲ್ಲಿಯವರೆಗೆ ಹಿಂದೂ ಶಾಸಕರು ಏಕೆ ಆಯ್ಕೆಯಾಗಲಿಲ್ಲ?” ಎಂದು ಅವರು ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಮತ್ತು ಜಿಲ್ಲಾಧಿಕಾರಿಗಳ ನಿರ್ದೇಶನದ ಮೇರೆಗೆ ಗುರುವಾಯೂರು ದೇವಸ್ಥಾನ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ: ಕೇರಳ ಚುನಾವಣೆಗೆ ಬಿಜೆಪಿಯ 47 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ; ನೇಮಮ್​ನಿಂದ ರಾಜೀವ್ ಚಂದ್ರಶೇಖರ್ ಕಣಕ್ಕೆ

ಗೋಪಾಲಕೃಷ್ಣನ್ ಅವರ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಲಾದ ವೀಡಿಯೊವನ್ನು ಗುರುವಾಯೂರು ದೇವಸ್ಥಾನದ ಪೂರ್ವ ಪ್ರವೇಶದ್ವಾರವಾದ ನಾಡವಾಳಿಯಲ್ಲಿ ಚಿತ್ರೀಕರಿಸಲಾಗಿದೆ ಎಂದು ಆರೋಪಿಸಲಾಗಿದೆ. ಮುಖ್ಯ ಚುನಾವಣಾ ಅಧಿಕಾರಿ ರಥನ್ ಯು ಕೇಳ್ಕರ್ ಈ ಹೇಳಿಕೆಗಳ ಕುರಿತು ಜಿಲ್ಲಾಧಿಕಾರಿಯಿಂದ ವರದಿ ಕೇಳಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!
ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್
ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್
ವಾಣಿಜ್ಯ ಸಿಲಿಂಡರ್ ಬೇಕಿದ್ದರೆ ಒಂದು ವಾರದೊಳಗೆ ಈ ಕೆಲಸ ಮಾಡಿ!
ವಾಣಿಜ್ಯ ಸಿಲಿಂಡರ್ ಬೇಕಿದ್ದರೆ ಒಂದು ವಾರದೊಳಗೆ ಈ ಕೆಲಸ ಮಾಡಿ!
ಐವರು ಮಹಿಳೆಯರ ಜತೆ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ ಖಾಸಗಿ ಕಂಪನಿ ಎಂಡಿ!
ಐವರು ಮಹಿಳೆಯರ ಜತೆ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ ಖಾಸಗಿ ಕಂಪನಿ ಎಂಡಿ!
ಅಣ್ಣಾವ್ರ ಹುಟ್ಟೂರಲ್ಲಿ ಕಿಚ್ಚ ಸುದೀಪ್​ಗೆ ಗುಡಿ ಕಟ್ಟಿ ನಿತ್ಯ ಆರಾಧನೆ!
ಅಣ್ಣಾವ್ರ ಹುಟ್ಟೂರಲ್ಲಿ ಕಿಚ್ಚ ಸುದೀಪ್​ಗೆ ಗುಡಿ ಕಟ್ಟಿ ನಿತ್ಯ ಆರಾಧನೆ!
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ