Bikaner Express Accident: ಬಿಕನೇರ್- ಗುವಾಹಟಿ ರೈಲು ಅಪಘಾತ; ಸಾವಿನ ಸಂಖ್ಯೆ 9ಕ್ಕೆ ಏರಿಕೆ

Bengal Train Accident: ಬಿಕನೇರ್- ಗುವಾಹಟಿ ರೈಲು ಅಪಘಾತದಲ್ಲಿ ಮೃತರ ಸಂಖ್ಯೆ 9ಕ್ಕೆ ಏರಿದೆ. ಒಟ್ಟು 36 ಜನರು ಗಾಯಗೊಂಡಿದ್ದು ಸಾವಿನ ಸಂಖ್ಯೆ ಏರುವ ಸಾಧ್ಯತೆ ಇದೆ.

Bikaner Express Accident: ಬಿಕನೇರ್- ಗುವಾಹಟಿ ರೈಲು ಅಪಘಾತ; ಸಾವಿನ ಸಂಖ್ಯೆ 9ಕ್ಕೆ ಏರಿಕೆ
ಬಿಕನೇರ್- ಗುವಾಹಟಿ ರೈಲು ಅಪಘಾತ (ಚಿತ್ರ: ಪಿಟಿಐ)
Follow us
| Updated By: shivaprasad.hs

Updated on:Jan 14, 2022 | 10:11 AM

ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯಲ್ಲಿ ಸಂಭವಿಸಿದ ಬಿಕಾನೇರ್-ಗುವಾಹಟಿ ರೈಲಿನ ಅಪಘಾತದಲ್ಲಿ ಸಾವಿನ ಸಂಖ್ಯೆ 9ಕ್ಕೆ ಏರಿದೆ, 36 ಜನರು ಗಾಯಗೊಂಡಿದ್ದಾರೆ, ಅವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ. ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯಲ್ಲಿ ಗುರುವಾರ ಅಸ್ಸಾಂ ಕಡೆ ತೆರಳುತ್ತಿದ್ದ ಬಿಕಾನೆರ್-ಗುವಾಹಟಿ ಎಕ್ಸ್‌ಪ್ರೆಸ್​ನ(15633) 12 ಬೋಗಿಗಳು ಹಳಿತಪ್ಪಿದ್ದವು. ಈ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದರೆ ಮೂವರು ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ ಎಂದು ಜಲ್ಪೈಗುರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಮೌಮಿತಾ ಬಸು ತಿಳಿಸಿದ್ದಾರೆ. ಇಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಘಟನಾ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ. 

ಇಂದು ಮುಂಜಾನೆ ಪ್ರಧಾನಿ ಮೋದಿ ಕೂಡ ಅಧಿಕಾರಿಗಳ ಬಳಿ ವಿಚಾರಿಸಿ ಪರಿಸ್ಥಿತಿಯ ಅವಲೋಕನ ನಡೆಸಿದರು. ಘಟನೆಯಲ್ಲಿ ಪ್ರಾಣ ಕಳೆದುಕೊಂಡ ಜನರ ಕುಟುಂಬ ಸದಸ್ಯರಿಗೆ ಭಾರತೀಯ ರೈಲ್ವೇ 5 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದೆ. ಗಾಯಾಳುಗಳನ್ನು ಜಲಪೈಗುಡಿ ಜಿಲ್ಲಾಸ್ಪತ್ರೆ ಮತ್ತು ನ್ಯೂ ಮೊಯಿನಗುಡಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ನಡೆದ ಸ್ಥಳಕ್ಕೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಎರಡು ತಂಡಗಳೊಂದಿಗೆ ಧಾವಿಸಿ ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿತ್ತು.

ಟಿಎಂಸಿ ಸಂಸದ ಸೌಗತ ರಾಯ್ ಮಾತನಾಡಿ, ಒಂದು ವೇಳೆ ರೈಲ್ವೆ ಹಳಿಯಲ್ಲಿ ಬಿರುಕು ಇದ್ದಿದ್ದು ಹೌದಾದರೆ, ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಕುರಿತು ಅವರು ಎಎನ್​ಐಗೆ ಹೇಳಿಕೆ ನೀಡಿದ್ದಾರೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ಮೋದಿ ಅವರೊಂದಿಗಿನ ಕೊವಿಡ್ ಕುರಿತ ಸಿಎಂ ಸಭೆಯಲ್ಲಿ ದುರಂತದ ಕುರಿತು ವಿವರಿಸಿದ್ದಾರೆ.

ಇದನ್ನೂ ಓದಿ:

ಆರೋಪಿಯ ಬಂಧಿಸಲು ತಮ್ಮ ಕಾರು ಕೊಟ್ಟಿದ್ದೇಕೆ ಜಿಲ್ಲೆಯ ನಂ. 1 ಪೊಲೀಸ್​ ಅಧಿಕಾರಿ? ಇದರಲ್ಲಿ ಇನ್ಸ್​ಪೆಕ್ಟರ್​ ಸಾಹೇಬ ಹಕೀಕತ್ತು, ಹಿಕ್ಮತ್ತು ಏನು?

‘ದೇವರು ಇದ್ದಾನೋ ಇಲ್ಲವೋ?’: ಸಮನ್ವಿ ನಿಧನದ ಬಳಿಕ ಸೃಜನ್​ ಲೋಕೇಶ್​ ನೋವಿನ ನುಡಿ

Published On - 8:38 am, Fri, 14 January 22

Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!