AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

16 ದಾಖಲೆಗಳ ನೀಡಿದ್ರೂ ಸಿಗದ ಭಾರತೀಯ ಪೌರತ್ವ, ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್

ಗುವಾಹಟಿ ಹೈಕೋರ್ಟ್ ಇತ್ತೀಚೆಗೆ ವ್ಯಕ್ತಿಯೊಬ್ಬರ ಪೌರತ್ವ ಸಾಬೀತುಪಡಿಸಲು ಸಲ್ಲಿಸಿದ್ದ 16 ಪ್ರಮುಖ ದಾಖಲೆಗಳನ್ನು ತಿರಸ್ಕರಿಸಿದೆ. ಪ್ಯಾನ್, ವೋಟರ್ ಐಡಿ ಸೇರಿದಂತೆ ಹಲವು ದಾಖಲೆಗಳಲ್ಲಿನ ಲೋಪದೋಷಗಳಿಂದಾಗಿ ಅರ್ಜಿದಾರರನ್ನು ವಿದೇಶಿ ಎಂದು ಘೋಷಿಸಲಾಗಿದೆ. ಭಾರತೀಯ ಪೌರತ್ವ ಸಾಬೀತಿಗೆ ವ್ಯಕ್ತಿಯ ಮೇಲೆ ಇರುವ ಹೊಣೆಯ ಜೊತೆಗೆ, ದಾಖಲೆಗಳ ಲಿಂಕ್ ಕೊರತೆ ಮತ್ತು ಕಾಗುಣಿತ ವ್ಯತ್ಯಾಸಗಳು ತಿರಸ್ಕಾರಕ್ಕೆ ಪ್ರಮುಖ ಕಾರಣಗಳಾಗಿವೆ. ಈ ಪ್ರಕರಣವು ಅಸ್ಸಾಂನಲ್ಲಿ ಪೌರತ್ವ ಸಾಬೀತಿನ ಸವಾಲುಗಳನ್ನು ಎತ್ತಿ ತೋರಿಸುತ್ತದೆ.

16 ದಾಖಲೆಗಳ ನೀಡಿದ್ರೂ ಸಿಗದ ಭಾರತೀಯ ಪೌರತ್ವ, ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್
ಆಧಾರ್ -ಸಾಂದರ್ಭಿಕ ಚಿತ್ರ
ನಯನಾ ರಾಜೀವ್
|

Updated on: Jul 03, 2026 | 10:10 AM

Share

ಗುವಾಹಟಿ, ಜುಲೈ 03: ಪೌರತ್ವ(Citizenship) ಸಾಬೀತುಪಡಿಸುವ ನಿಟ್ಟಿನಲ್ಲಿ ವ್ಯಕ್ತಿಯೊಬ್ಬರು ಸಲ್ಲಿಕೆ ಮಾಡಿದ್ದ ಪ್ಯಾನ್ ಕಾರ್ಡ್, ಮತದಾರರ ಗುರುತಿನ ಚೀಟಿ ಸೇರಿದಂತೆ ಬರೋಬ್ಬರಿ 16 ಪ್ರಮುಖ ದಾಖಲೆಗಳನ್ನು ಗುವಾಹಟಿ ಹೈಕೋರ್ಟ್ ತಿರಸ್ಕರಿಸಿದೆ. ಈ ಎಲ್ಲಾ ದಾಖಲೆಗಳಿದ್ದರೂ ಅರ್ಜಿದಾರ ತಾನು ಭಾರತೀಯ ಪ್ರಜೆ ಎಂಬುದನ್ನು ಕಾನೂನಾತ್ಮಕವಾಗಿ ಸಾಬೀತುಪಡಿಸಲು ವಿಫಲನಾಗಿದ್ದಾನೆ ಎಂದು ನ್ಯಾಯಾಲಯ ಹೇಳಿದೆ.

ಏನಿದು ಪ್ರಕರಣ? ಹೈಕೋರ್ಟ್ ಮೆಟ್ಟಿಲೇರಿದ್ದು ಯಾಕೆ? ಅಸ್ಸಾಂನ ಕಾಮರೂಪ್ ಜಿಲ್ಲೆಯ ವಿದೇಶಿಯರ ನ್ಯಾಯಮಂಡಳಿಯು 2019 ರ ಫೆಬ್ರವರಿಯಲ್ಲಿ ಅಮೀನುಲ್ ಹೋಕ್ ಎಂಬಾತನನ್ನು ವಿದೇಶಿ (ಅಕ್ರಮ ವಲಸಿಗ) ಎಂದು ಘೋಷಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಹೋಕ್ ಗುವಾಹಟಿ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು.

ತಾನು ಭಾರತೀಯ ಎಂದು ಸಾಬೀತುಪಡಿಸಲು ಹೋಕ್ ಅವರು 1951 ರ ಎನ್‌ಆರ್‌ಸಿ (NRC) ಪ್ರತಿ, 1966 ರಿಂದ 2017 ರವರೆಗಿನ ಪೋಷಕರ ಮತದಾರರ ಪಟ್ಟಿ, 1973 ರ ಭೂ ಖರೀದಿ ಪತ್ರಗಳು, ಪ್ಯಾನ್ ಕಾರ್ಡ್ (PAN), ವೋಟರ್ ಐಡಿ ಮತ್ತು ಶಾಲಾ ಪ್ರಮಾಣಪತ್ರ ಸೇರಿದಂತೆ 16 ದಾಖಲೆಗಳನ್ನು ನ್ಯಾಯಾಲಯಕ್ಕೆ ಒಪ್ಪಿಸಿದ್ದರು.

ದಾಖಲೆಗಳನ್ನು ಹೈಕೋರ್ಟ್ ತಿರಸ್ಕರಿಸಿದ್ದೇಕೆ? ನ್ಯಾಯಮೂರ್ತಿಗಳಾದ ಕಲ್ಯಾಣ್ ರೈ ಸುರಾನ ಮತ್ತು ಶಮೀಮಾ ಜಹಾನ್ ಅವರ ಪೀಠವು ಜೂನ್ 30 ರಂದು ಈ ಆದೇಶ ಪ್ರಕಟಿಸಿದೆ. ವಿದೇಶಿಯರ ಕಾಯ್ದೆ 1964ರ ಸೆಕ್ಷನ್ 9 ರ ಪ್ರಕಾರ, ಒಬ್ಬ ವ್ಯಕ್ತಿ ವಿದೇಶಿಯೇ ಅಥವಾ ಅಲ್ಲವೇ ಎಂಬ ಪ್ರಶ್ನೆ ಎದ್ದಾಗ, ತಾನು ಭಾರತೀಯ ಪ್ರಜೆ ಎಂದು ಸಾಬೀತುಪಡಿಸುವ ಸಂಪೂರ್ಣ ಜವಾಬ್ದಾರಿ ಆ ವ್ಯಕ್ತಿಯ ಮೇಲೆಯೇ ಇರುತ್ತದೆ. ಆದರೆ ಹೋಕ್ ಸಲ್ಲಿಸಿದ ದಾಖಲೆಗಳಲ್ಲಿ ಹಲವು ಗಂಭೀರ ಲೋಪದೋಷಗಳಿರುವುದನ್ನು ಕೋರ್ಟ್ ಪತ್ತೆಹಚ್ಚಿದೆ.

ಹೋಕ್ ಅವರ ತಂದೆ ಮತ್ತು ಅಜ್ಜನ ಹೆಸರುಗಳ ಕಾಗುಣಿತದಲ್ಲಿ ಮತದಾರರ ಪಟ್ಟಿಯಿಂದ ಪಟ್ಟಿಗೆ ಭಾರಿ ವ್ಯತ್ಯಾಸಗಳಿದ್ದವು. ಅಲ್ಲದೆ, ಅವರ ಕುಟುಂಬವು ದೋಬಕುರಾ, ಘುಗುಡೋಬಾ ಮತ್ತು ಹಶ್ಡೋಬಾ ಎಂಬ ಮೂರು ಹಳ್ಳಿಗಳಿಗೆ ವಲಸೆ ಹೋಗಿದೆ ಎಂದು ವಾದಿಸಲಾಗಿದ್ದರೂ, ಅದಕ್ಕೆ ಪೂರಕವಾದ ಯಾವುದೇ ಅಧಿಕೃತ ವಾಸಸ್ಥಳ ಬದಲಾವಣೆ ದಾಖಲೆ ಇರಲಿಲ್ಲ. ಮತದಾರರ ಪಟ್ಟಿಯ ಹೆಸರುಗಳನ್ನು ಹೊಂದಿಸಲು ಕಟ್ಟುಕಥೆ ಹೆಣೆಯಲಾಗಿದೆ ಎಂದು ಕೋರ್ಟ್ ಹೇಳಿದೆ.

ತನಿಖೆಯ ವೇಳೆ ಹೋಕ್ ಅವರ ತಂದೆ ನ್ಯಾಯಾಲಯಕ್ಕೆ ಬಂದು ಈತನೇ ನನ್ನ ಮಗ ಎಂದು ಮೌಖಿಕವಾಗಿ ಹೇಳಿಕೆ ನೀಡಿದ್ದರು. ಆದರೆ ಲಿಖಿತ ಲಿಂಕ್ ದಾಖಲೆಗಳಿಲ್ಲದೆ ಕೇವಲ ತಂದೆಯ ಮೌಖಿಕ ಸಾಕ್ಷ್ಯವನ್ನು ಒಪ್ಪಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿತು.

ಹೋಕ್ ಸಲ್ಲಿಕೆ ಮಾಡಿದ್ದ ಹಶ್ಡೋಬಾ ಶಾಲೆಯ ಪ್ರಮಾಣಪತ್ರವನ್ನು ಬರೆದುಕೊಟ್ಟ ಮುಖ್ಯೋಪಾಧ್ಯಾಯರು ನ್ಯಾಯಾಲಯಕ್ಕೆ ಹಾಜರಾಗಿ ಅದನ್ನು ದೃಢಪಡಿಸಿರಲಿಲ್ಲ. ಹೀಗಾಗಿ ಆ ದಾಖಲೆಯನ್ನೂ ಕೋರ್ಟ್ ತಿರಸ್ಕರಿಸಿದೆ.

ಅಸ್ಸಾಂನಲ್ಲಿ 2019 ರಲ್ಲೇ ರಾಷ್ಟ್ರೀಯ ನಾಗರಿಕ ನೋಂದಣಿ (NRC) ಪ್ರಕ್ರಿಯೆ ಪೂರ್ಣಗೊಂಡಿದ್ದರೂ, ಅದು ಇನ್ನೂ ಅಧಿಕೃತವಾಗಿ ಜಾರಿಯಾಗಿಲ್ಲ. ಇಂತಹ ಸಂದರ್ಭದಲ್ಲಿ ಅಗತ್ಯ ಕಾನೂನು ಚೌಕಟ್ಟಿನ ಲಿಂಕ್ ದಾಖಲೆಗಳನ್ನು ಒದಗಿಸದ ಹಿನ್ನೆಲೆಯಲ್ಲಿ ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಫುಟ್​ಪಾತ್ ವ್ಯಾಪಾರಿಗಳಿಗೆ ಮತ್ತೆ ಸಚಿವರ ಖಡಕ್ ವಾರ್ನಿಂಗ್
ಫುಟ್​ಪಾತ್ ವ್ಯಾಪಾರಿಗಳಿಗೆ ಮತ್ತೆ ಸಚಿವರ ಖಡಕ್ ವಾರ್ನಿಂಗ್
ಇಂದು ಈ ರಾಶಿಯವರು ಕೋಪ, ಆವೇಶಗಳನ್ನು ಬದಿಗಿಟ್ಟರೆ ಕೆಲಸ ಕಾರ್ಯಗಳಲ್ಲಿ ಶುಭ
ಇಂದು ಈ ರಾಶಿಯವರು ಕೋಪ, ಆವೇಶಗಳನ್ನು ಬದಿಗಿಟ್ಟರೆ ಕೆಲಸ ಕಾರ್ಯಗಳಲ್ಲಿ ಶುಭ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ