ಗರ್ಭಿಣಿ ಆತ್ಮಹತ್ಯೆ, ಆಕೆಯ ಕೈಲಿದ್ದ ಬರಹದಿಂದ ಪ್ರೇಮಿಗೆ ಸಿಕ್ತು ಜಾಮೀನು

ಗರ್ಭಿಣಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರೇಮಿಗೆ ಗ್ವಾಲಿಯರ್ ಹೈಕೋರ್ಟ್​ ಜಾಮೀನು ನೀಡಿದೆ. ಆಕೆಯ ಕೈಲಿದ್ದ ಬರಹದಿಂದ ನಿಜವಾದ ಆರೋಪಿಗಳು ಯಾರೆಂದು ತಿಳಿದ ಹಿನ್ನೆಲೆಯಲ್ಲಿ ಆಕೆಯ ಪ್ರೇಮಿಯನ್ನು ಬಿಡುಗಡೆ ಮಾಡಲಾಗಿದೆ.

ಗರ್ಭಿಣಿ ಆತ್ಮಹತ್ಯೆ, ಆಕೆಯ ಕೈಲಿದ್ದ ಬರಹದಿಂದ ಪ್ರೇಮಿಗೆ ಸಿಕ್ತು ಜಾಮೀನು
ಸಾವು
Follow us
|

Updated on: Sep 22, 2024 | 10:58 AM

ಗರ್ಭಿಣಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರೇಮಿಗೆ ಗ್ವಾಲಿಯರ್ ಹೈಕೋರ್ಟ್​ ಜಾಮೀನು ನೀಡಿದೆ. ಆಕೆಯ ಕೈಲಿದ್ದ ಬರಹದಿಂದ ನಿಜವಾದ ಆರೋಪಿಗಳು ಯಾರೆಂದು ತಿಳಿದ ಹಿನ್ನೆಲೆಯಲ್ಲಿ ಆಕೆಯ ಪ್ರೇಮಿಯನ್ನು ಬಿಡುಗಡೆ ಮಾಡಲಾಗಿದೆ.

ಗರ್ಭಿಣಿಯ ಮರಣೋತ್ತರ ಪರೀಕ್ಷೆ ಸಮಯದಲ್ಲಿ ಆಕೆಯ ಅಂಗೈನಲ್ಲಿ ಏನೋ ಬರೆದಿರುವುದು ಕಂಡಿದ್ದಾರೆ. ಆಕೆಯು ತನ್ನ ಸಹೋದರರಿಂದಾಗಿ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಬರೆದುಕೊಂಡಿದ್ದಾಳೆ.

ಇದಾದ ಬಳಿಕ ನ್ಯಾಯಮೂರ್ತಿ ಸುನೀತಾ ಯಾದವ್ ಅವರು ಸಂಪೂರ್ಣ ಪ್ರಕರಣದ ವಿಚಾರಣೆ ನಡೆಸಿ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದರು.

ವಿದಿಶಾ ಜಿಲ್ಲೆಯ ದೀಪನಖೇಡಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಜೂನ್ 6 ರಂದು ಗರ್ಭಿಣಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಬಳಿಕ ಮೃತ ಮಹಿಳೆ ತಾಯಿ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಮತ್ತಷ್ಟು ಓದಿ: ಬೆಂಗಳೂರಿನಲ್ಲಿ ಮಹಿಳೆ ಕೊಲೆ ಕೇಸ್​: ಮೃತಳೊಂದಿಗೆ ಸಂಪರ್ಕದಲ್ಲಿದ್ದ ಓರ್ವನ ಮೇಲೆ ಶಂಕೆ, ತಾಯಿ ದೂರಿನನ್ವಯ ಎಫ್​ಐಆರ್

ಆರೋಪಿ ಅಮಿತ್ ಸಾಹು ಜೂನ್ 4 ರಂದು ತನ್ನ ಮನೆಗೆ ಬಂದು ತನ್ನ ಮಗಳನ್ನು ಮದುವೆಯಾಗುವಂತೆ ಒತ್ತಡ ಹೇರಿದ್ದ, ಆದರೆ ಮಗಳು ಒಪ್ಪದಿದ್ದಾಗ ಅಮಿತ್ ಸಹೋದರ ಸಹೋದರಿಯರಿಗೆ ಕೊಲೆ ಬೆದರಿಕೆ ಹಾಕಿ ಪರಾರಿಯಾಗಿದ್ದ ಎಂದು ಮೃತನ ತಾಯಿ ದೂರಿನಲ್ಲಿ ತಿಳಿಸಿದ್ದರು.

ಮಾನಸಿಕ ಹಿಂಸೆಯಿಂದ ಬೇಸತ್ತು ಮಗಳು ಆತ್ಮಹತ್ಯೆ ಹೆಜ್ಜೆ ಇಟ್ಟಿದ್ದಾಳೆ ಎಂದಿದ್ದರು ಹೀಗಾಗಿ ಮೃತಳ ಪ್ರೇಮಿಯನ್ನು ಪೊಲೀಸರು ಬಂಧಿಸಿದ್ದರು. ಮರಣೋತ್ತರ ಪರೀಕ್ಷೆ ವೇಳೆ ಆಕೆಯ ಕೈ ಮೇಲೆ ಬರೆದಿದ್ದ ಬರಹವನ್ನು ವೈದ್ಯರು ಫೋಟೊ ತೆಗೆದುಕೊಂಡಿದ್ದರು. ಡೆತ್​ನೋಟ್​ನಲ್ಲಿ ಎಲ್ಲಿಯೂ ಅಮಿತ್ ಸಾಹು ಹೆಸರಿರಲಿಲ್ಲ, ಆದರೆ ತನ್ನ ಸಾವಿಗೆ ತನ್ನ ಸಹೋದರರೇ ಕಾರಣ ಎಂದು ಬರೆದಿದ್ದಳು.

ಅಮಿತ್ ಮನೆಗೆ ಬಂದು ಹೋದಾಗಿನಿಂದ ಅಣ್ಣಂದಿರುವ ತನಗೆ ಹಿಂಸೆ ನೀಡುತ್ತಿದ್ದರು ಆ ಕಾರಣಕ್ಕೆ ತಾನು ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರ ಮಾಡಿರುವುದಾಗಿ ಬರೆದಿದ್ದಳು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ