AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gyanvapi Case ನವೆಂಬರ್ 30ಕ್ಕೆ ಜ್ಞಾನವಾಪಿ ಶಿವಲಿಂಗದ ಕಾರ್ಬನ್ ಡೇಟಿಂಗ್ ಕುರಿತಾದ ಮೇಲ್ಮನವಿ ವಿಚಾರಣೆ

ಮೇಲ್ಮನವಿ ಅರ್ಜಿಯು ಮೇ 16, 2022 ರಂದು ಪತ್ತೆಯಾದ 'ಶಿವಲಿಂಗ'ದ ಅಡಿಯಲ್ಲಿ ನಿರ್ಮಾಣದ ಸ್ವರೂಪವನ್ನು ಕಂಡುಹಿಡಿಯಲು ಸೂಕ್ತ ಸಮೀಕ್ಷೆ ಅಥವಾ ಉತ್ಖನನವನ್ನು ಕೋರಿದೆ

Gyanvapi Case ನವೆಂಬರ್ 30ಕ್ಕೆ ಜ್ಞಾನವಾಪಿ ಶಿವಲಿಂಗದ ಕಾರ್ಬನ್ ಡೇಟಿಂಗ್ ಕುರಿತಾದ ಮೇಲ್ಮನವಿ ವಿಚಾರಣೆ
ಜ್ಞಾನವಾಪಿ ಮಸೀದಿ
TV9 Web
| Edited By: |

Updated on: Nov 21, 2022 | 8:45 PM

Share

ಪ್ರಯಾಗರಾಜ್: ಜ್ಞಾನವಾಪಿ ಮಸೀದಿ (Gyanvapi Case) ಸಂಕೀರ್ಣದಲ್ಲಿ ಪತ್ತೆಯಾಗಿದೆ ಎಂದು ಹೇಳಲಾದ ಶಿವಲಿಂಗದ (Shivling) ಕಾರ್ಬನ್ ಡೇಟಿಂಗ್ ಬೇಡಿಕೆಯನ್ನು ತಿರಸ್ಕರಿಸಿದ ವಾರಣಾಸಿ ಜಿಲ್ಲಾ ನ್ಯಾಯಾಧೀಶರ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಮೇಲ್ಮನವಿ ವಿಚಾರಣೆಯನ್ನು ಅಲಹಾಬಾದ್ ಹೈಕೋರ್ಟ್(Allahabad High Court) ನವೆಂಬರ್ 30 ರಂದು ನಡೆಸಲಿದೆ. ಲಕ್ಷ್ಮೀದೇವಿ ಮತ್ತು ಇತರರು ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜೆಜೆ ಮುನೀರ್ ಈ ಆದೇಶ ನೀಡಿದ್ದಾರೆ.ಅಕ್ಟೋಬರ್ 14 ರಂದು, ವಾರಣಾಸಿ ಜಿಲ್ಲಾ ನ್ಯಾಯಾಧೀಶ ಎ ಕೆ ವಿಶ್ವೇಶ್ ಅವರು ಯಾವುದೇ ಹಾನಿ ಮಾಡದಂತೆ  ಸುಪ್ರೀಂಕೋರ್ಟ್ ನಿರ್ದೇಶನಗಳನ್ನು ಉಲ್ಲೇಖಿಸಿ ‘ಶಿವಲಿಂಗ’ ದ ವೈಜ್ಞಾನಿಕ ತನಿಖೆ ಮತ್ತು ಕಾರ್ಬನ್ ಡೇಟಿಂಗ್ ಕೋರಿ ಸಲ್ಲಿಸಿದ ಮನವಿಯನ್ನು ತಿರಸ್ಕರಿಸಿದ್ದರು. ಸೋಮವಾರ ಈ ಪ್ರಕರಣವನ್ನು ಹೈಕೋರ್ಟ್‌ನಲ್ಲಿ ಕೈಗೆತ್ತಿಕೊಂಡಾಗ, ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ವಕೀಲರು ಸಮೀಕ್ಷೆಗೆ ಸಮಯ ವಿಸ್ತರಣೆಗೆ ಅರ್ಜಿ ಸಲ್ಲಿಸಲಾಗಿದೆ ಎಂದು ಹೇಳಿದರು. ಆದರೆ, ‘ಶಿವಲಿಂಗ’ಕ್ಕೆ ಯಾವುದೇ ಹಾನಿಯಾಗಬಾರದು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ನಂತರ ಎಎಸ್‌ಐ ವಕೀಲರು ಇದರ ವಯಸ್ಸು ನಿರ್ಧರಿಸಲು ಹೆಚ್ಚಿನ ಮಾರ್ಗಗಳಿವೆ ಮತ್ತು ಯಾವುದೇ ಹಾನಿ ಉಂಟಾಗುವುದಿಲ್ಲ ಎಂದು ಹೇಳಿದರು.

ಜ್ಞಾನವಾಪಿ ಮಸೀದಿಯನ್ನು ನಿರ್ವಹಿಸುವ ಅಂಜುಮನ್ ಇಂತೇಜಾಮಿಯಾ ಸಮಿತಿಯ ಪರವಾಗಿ, ಈ ನಡುವೆ ‘ವಕಾಲತ್ ನಾಮ’ ಸಲ್ಲಿಸಬೇಕು ಎಂದು ಹೇಳಲಾಗಿದೆ. ‘ವಕಾಲತ್ ನಾಮ’ ಎಂಬುದು ಕಕ್ಷಿದಾರರು ಸಹಿ ಮಾಡಿದ ಲಿಖಿತ ದಾಖಲೆಯಾಗಿದ್ದು, ಅವರ ಪರವಾಗಿ ನ್ಯಾಯಾಲಯದಲ್ಲಿ ಮೊಕದ್ದಮೆಯನ್ನು ವಾದಿಸಲು ತನ್ನ ವಕೀಲರಿಗೆ ಅವಕಾಶ ನೀಡುತ್ತದೆ.

ಐದು ಹಿಂದೂ ಪಕ್ಷಗಳ ಪೈಕಿ ನಾಲ್ಕು ಪಕ್ಷಗಳು, ಮುಸ್ಲಿಂ ಭಕ್ತರು ನಮಾಝ್ ಸಲ್ಲಿಸುವ ಮೊದಲು ಧಾರ್ಮಿಕ ಶುದ್ಧೀಕರಣವನ್ನು ಮಾಡಲು ವಝೂಖಾನಾ ಸಮೀಪವಿರುವ ಮಸೀದಿ ಆವರಣದ ನ್ಯಾಯಾಲಯದ ವಿಡಿಯೊ ಸಮೀಕ್ಷೆಯ ಸಂದರ್ಭದಲ್ಲಿ ಕಂಡುಬಂದ ‘ಶಿವಲಿಂಗ’ದ ಕಾರ್ಬನ್ ಡೇಟಿಂಗ್ ಅನ್ನು ಕೋರಿದ್ದವು.

ಮೇಲ್ಮನವಿ ಅರ್ಜಿಯು ಮೇ 16, 2022 ರಂದು ಪತ್ತೆಯಾದ ‘ಶಿವಲಿಂಗ’ದ ಅಡಿಯಲ್ಲಿ ನಿರ್ಮಾಣದ ಸ್ವರೂಪವನ್ನು ಕಂಡುಹಿಡಿಯಲು ಸೂಕ್ತ ಸಮೀಕ್ಷೆ ಅಥವಾ ಉತ್ಖನನವನ್ನು ಕೋರಿದೆ. ಹಿಂದೂ ಪಕ್ಷಗಳು 1958 ರ ಪ್ರಾಚೀನ ಸ್ಮಾರಕಗಳು ಮತ್ತು ಪುರಾತತ್ವ ಸ್ಥಳಗಳು ಮತ್ತು ಅವಶೇಷಗಳ ಕಾಯ್ದೆಯ ನಿಬಂಧನೆಗಳಿಗೆ ಅನುಸಾರವಾಗಿ ‘ಶಿವಲಿಂಗ’ದ ವಯಸ್ಸು, ಸ್ವಭಾವ ಮತ್ತು ಇತರ ಘಟಕಗಳನ್ನು ನಿರ್ಧರಿಸಲು ಕಾರ್ಬನ್ ಡೇಟಿಂಗ್ ಮೂಲಕ ವೈಜ್ಞಾನಿಕ ತನಿಖೆಯನ್ನು ಬಯಸಿದೆ.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!