AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gyanvapi Case ನವೆಂಬರ್ 30ಕ್ಕೆ ಜ್ಞಾನವಾಪಿ ಶಿವಲಿಂಗದ ಕಾರ್ಬನ್ ಡೇಟಿಂಗ್ ಕುರಿತಾದ ಮೇಲ್ಮನವಿ ವಿಚಾರಣೆ

ಮೇಲ್ಮನವಿ ಅರ್ಜಿಯು ಮೇ 16, 2022 ರಂದು ಪತ್ತೆಯಾದ 'ಶಿವಲಿಂಗ'ದ ಅಡಿಯಲ್ಲಿ ನಿರ್ಮಾಣದ ಸ್ವರೂಪವನ್ನು ಕಂಡುಹಿಡಿಯಲು ಸೂಕ್ತ ಸಮೀಕ್ಷೆ ಅಥವಾ ಉತ್ಖನನವನ್ನು ಕೋರಿದೆ

Gyanvapi Case ನವೆಂಬರ್ 30ಕ್ಕೆ ಜ್ಞಾನವಾಪಿ ಶಿವಲಿಂಗದ ಕಾರ್ಬನ್ ಡೇಟಿಂಗ್ ಕುರಿತಾದ ಮೇಲ್ಮನವಿ ವಿಚಾರಣೆ
ಜ್ಞಾನವಾಪಿ ಮಸೀದಿ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Nov 21, 2022 | 8:45 PM

Share

ಪ್ರಯಾಗರಾಜ್: ಜ್ಞಾನವಾಪಿ ಮಸೀದಿ (Gyanvapi Case) ಸಂಕೀರ್ಣದಲ್ಲಿ ಪತ್ತೆಯಾಗಿದೆ ಎಂದು ಹೇಳಲಾದ ಶಿವಲಿಂಗದ (Shivling) ಕಾರ್ಬನ್ ಡೇಟಿಂಗ್ ಬೇಡಿಕೆಯನ್ನು ತಿರಸ್ಕರಿಸಿದ ವಾರಣಾಸಿ ಜಿಲ್ಲಾ ನ್ಯಾಯಾಧೀಶರ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಮೇಲ್ಮನವಿ ವಿಚಾರಣೆಯನ್ನು ಅಲಹಾಬಾದ್ ಹೈಕೋರ್ಟ್(Allahabad High Court) ನವೆಂಬರ್ 30 ರಂದು ನಡೆಸಲಿದೆ. ಲಕ್ಷ್ಮೀದೇವಿ ಮತ್ತು ಇತರರು ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜೆಜೆ ಮುನೀರ್ ಈ ಆದೇಶ ನೀಡಿದ್ದಾರೆ.ಅಕ್ಟೋಬರ್ 14 ರಂದು, ವಾರಣಾಸಿ ಜಿಲ್ಲಾ ನ್ಯಾಯಾಧೀಶ ಎ ಕೆ ವಿಶ್ವೇಶ್ ಅವರು ಯಾವುದೇ ಹಾನಿ ಮಾಡದಂತೆ  ಸುಪ್ರೀಂಕೋರ್ಟ್ ನಿರ್ದೇಶನಗಳನ್ನು ಉಲ್ಲೇಖಿಸಿ ‘ಶಿವಲಿಂಗ’ ದ ವೈಜ್ಞಾನಿಕ ತನಿಖೆ ಮತ್ತು ಕಾರ್ಬನ್ ಡೇಟಿಂಗ್ ಕೋರಿ ಸಲ್ಲಿಸಿದ ಮನವಿಯನ್ನು ತಿರಸ್ಕರಿಸಿದ್ದರು. ಸೋಮವಾರ ಈ ಪ್ರಕರಣವನ್ನು ಹೈಕೋರ್ಟ್‌ನಲ್ಲಿ ಕೈಗೆತ್ತಿಕೊಂಡಾಗ, ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ವಕೀಲರು ಸಮೀಕ್ಷೆಗೆ ಸಮಯ ವಿಸ್ತರಣೆಗೆ ಅರ್ಜಿ ಸಲ್ಲಿಸಲಾಗಿದೆ ಎಂದು ಹೇಳಿದರು. ಆದರೆ, ‘ಶಿವಲಿಂಗ’ಕ್ಕೆ ಯಾವುದೇ ಹಾನಿಯಾಗಬಾರದು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ನಂತರ ಎಎಸ್‌ಐ ವಕೀಲರು ಇದರ ವಯಸ್ಸು ನಿರ್ಧರಿಸಲು ಹೆಚ್ಚಿನ ಮಾರ್ಗಗಳಿವೆ ಮತ್ತು ಯಾವುದೇ ಹಾನಿ ಉಂಟಾಗುವುದಿಲ್ಲ ಎಂದು ಹೇಳಿದರು.

ಜ್ಞಾನವಾಪಿ ಮಸೀದಿಯನ್ನು ನಿರ್ವಹಿಸುವ ಅಂಜುಮನ್ ಇಂತೇಜಾಮಿಯಾ ಸಮಿತಿಯ ಪರವಾಗಿ, ಈ ನಡುವೆ ‘ವಕಾಲತ್ ನಾಮ’ ಸಲ್ಲಿಸಬೇಕು ಎಂದು ಹೇಳಲಾಗಿದೆ. ‘ವಕಾಲತ್ ನಾಮ’ ಎಂಬುದು ಕಕ್ಷಿದಾರರು ಸಹಿ ಮಾಡಿದ ಲಿಖಿತ ದಾಖಲೆಯಾಗಿದ್ದು, ಅವರ ಪರವಾಗಿ ನ್ಯಾಯಾಲಯದಲ್ಲಿ ಮೊಕದ್ದಮೆಯನ್ನು ವಾದಿಸಲು ತನ್ನ ವಕೀಲರಿಗೆ ಅವಕಾಶ ನೀಡುತ್ತದೆ.

ಐದು ಹಿಂದೂ ಪಕ್ಷಗಳ ಪೈಕಿ ನಾಲ್ಕು ಪಕ್ಷಗಳು, ಮುಸ್ಲಿಂ ಭಕ್ತರು ನಮಾಝ್ ಸಲ್ಲಿಸುವ ಮೊದಲು ಧಾರ್ಮಿಕ ಶುದ್ಧೀಕರಣವನ್ನು ಮಾಡಲು ವಝೂಖಾನಾ ಸಮೀಪವಿರುವ ಮಸೀದಿ ಆವರಣದ ನ್ಯಾಯಾಲಯದ ವಿಡಿಯೊ ಸಮೀಕ್ಷೆಯ ಸಂದರ್ಭದಲ್ಲಿ ಕಂಡುಬಂದ ‘ಶಿವಲಿಂಗ’ದ ಕಾರ್ಬನ್ ಡೇಟಿಂಗ್ ಅನ್ನು ಕೋರಿದ್ದವು.

ಮೇಲ್ಮನವಿ ಅರ್ಜಿಯು ಮೇ 16, 2022 ರಂದು ಪತ್ತೆಯಾದ ‘ಶಿವಲಿಂಗ’ದ ಅಡಿಯಲ್ಲಿ ನಿರ್ಮಾಣದ ಸ್ವರೂಪವನ್ನು ಕಂಡುಹಿಡಿಯಲು ಸೂಕ್ತ ಸಮೀಕ್ಷೆ ಅಥವಾ ಉತ್ಖನನವನ್ನು ಕೋರಿದೆ. ಹಿಂದೂ ಪಕ್ಷಗಳು 1958 ರ ಪ್ರಾಚೀನ ಸ್ಮಾರಕಗಳು ಮತ್ತು ಪುರಾತತ್ವ ಸ್ಥಳಗಳು ಮತ್ತು ಅವಶೇಷಗಳ ಕಾಯ್ದೆಯ ನಿಬಂಧನೆಗಳಿಗೆ ಅನುಸಾರವಾಗಿ ‘ಶಿವಲಿಂಗ’ದ ವಯಸ್ಸು, ಸ್ವಭಾವ ಮತ್ತು ಇತರ ಘಟಕಗಳನ್ನು ನಿರ್ಧರಿಸಲು ಕಾರ್ಬನ್ ಡೇಟಿಂಗ್ ಮೂಲಕ ವೈಜ್ಞಾನಿಕ ತನಿಖೆಯನ್ನು ಬಯಸಿದೆ.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ