AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gyanvapi Hearing: ಜ್ಞಾನವಾಪಿ ಮಸೀದಿ ಆವರಣದಲ್ಲಿ ಪೂಜೆಗೆ ಅವಕಾಶ ಕೋರಿದ್ದ ಹಿಂದೂ ಮಹಿಳೆಯರ ಅರ್ಜಿಗೆ ಮನ್ನಣೆ; ನ್ಯಾಯಾಲಯದಲ್ಲಿ ಮತ್ತೆ ವಿಚಾರಣೆ

ಮಸೀದಿಯ ಗೋಡೆಯ ಮೇಲೆ ‘ಶೃಂಗಾರ ಗೌರಿ’ ಮತ್ತು ಇತರ ಹಿಂದೂ ದೇವತೆಗಳ ಶಿಲ್ಪವಿದೆ. ಅವುಗಳ ಆರಾಧನೆಗೆ ಅವಕಾಶ ನೀಡಬೇಕು ಎಂದು ಹಿಂದೂ ಮಹಿಳೆಯರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

Gyanvapi Hearing: ಜ್ಞಾನವಾಪಿ ಮಸೀದಿ ಆವರಣದಲ್ಲಿ ಪೂಜೆಗೆ ಅವಕಾಶ ಕೋರಿದ್ದ ಹಿಂದೂ ಮಹಿಳೆಯರ ಅರ್ಜಿಗೆ ಮನ್ನಣೆ; ನ್ಯಾಯಾಲಯದಲ್ಲಿ ಮತ್ತೆ ವಿಚಾರಣೆ
ಕಾಶಿಯ ಜ್ಞಾನವಾಪಿ ಮಸೀದಿ
TV9 Web
| Edited By: |

Updated on:Sep 22, 2022 | 10:50 AM

Share

ಲಖನೌ: ವಾರಣಾಸಿ ನ್ಯಾಯಾಲಯದ ಅತ್ಯಂತ ಹಿರಿಯ ನ್ಯಾಯಾಧೀಶರು ಇಂದಿನಿಂದ (ಸೆ 22) ಜ್ಫಾನವಾಪಿ ಮಸೀದಿ (Gyanvapi Mosque Case) ಪ್ರಕರಣದ ವಿಚಾರಣೆ ಆರಂಭಿಸಲಿದ್ದಾರೆ. ಮಸೀದಿಯ ಗೋಡೆಯ ಮೇಲೆ ‘ಶೃಂಗಾರ ಗೌರಿ’ ಮತ್ತು ಇತರ ಹಿಂದೂ ದೇವತೆಗಳ ಶಿಲ್ಪವಿದೆ. ಅವುಗಳ ಆರಾಧನೆಗೆ ಅವಕಾಶ ನೀಡಬೇಕು ಎಂದು ಹಿಂದೂ ಮಹಿಳೆಯರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಬಾರದು ಎಂದು ಕೋರಿ ಮಸೀದಿ ಪರ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ಸೆ 19ರಂದು ವಾರಣಾಸಿ ಜಿಲ್ಲಾ ನ್ಯಾಯಾಲಯ ತಿರಸ್ಕರಿಸಿ, ವಿಚಾರನೆಯನ್ನು ಸೆ.22ಕ್ಕೆ ಮುಂದೂಡಿತ್ತು. ಮಸೀದಿಯಲ್ಲಿರುವ ಶಿಲ್ಪಗಳನ್ನು ಪೂಜಿಸಲು ಅವಕಾಶ ನೀಡಬೇಕು ಎಂದು ಕೋರಿರುವ ಹಿಂದೂ ಮಹಿಳೆಯರ ಪರ ವಕೀಲ ವಿಷ್ಣು ಶಂಕರ್ ಜೈನ್ ವಾದಿಸುತ್ತಿದ್ದಾರೆ.

‘ಮಹಿಳೆಯರು ಸಲ್ಲಿಸಿರುವ ಅರ್ಜಿಯು ವಿಚಾರಣೆಗೆ ಯೋಗ್ಯ’ ಎಂದು ಜಿಲ್ಲಾ ನ್ಯಾಯಾಧೀಶ ಅಜಯ್ ಕೃಷ್ಣ ವಿಶ್ವೇಶ ಅಭಿಪ್ರಾಯಪಟ್ಟಿದ್ದರು. ಈ ತೀರ್ಪನ್ನು ಹೈಕೋರ್ಟ್​ನಲ್ಲಿ ಪ್ರಶ್ನಿಸುವುದಾಗಿ ಮುಸ್ಲಿಮರನ್ನು ಜಿಲ್ಲಾ ನ್ಯಾಯಾಲಯದಲ್ಲಿ ಪ್ರತಿನಿಧಿಸಿದ್ದ ಅಂಜುಮನ್ ಇಂತೆಜಾಮಿಯಾ ಸಮಿತಿ ಹೇಳಿತ್ತು. ಆದರೆ ಈವರೆಗೆ ಸಂಘಟನೆಯು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿರುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಹಿಂದೂಗಳು ಸಲ್ಲಿಸಿರುವ ಅರ್ಜಿಯ ಸಿಂಧುತ್ವದ ಬಗ್ಗೆ ನ್ಯಾಯಾಲಯವು ತೀರ್ಪು ನೀಡಿದ ನಂತರ ಗಲಭೆ ಉಂಟಾಗಬಹುದು ಎಂದು ಶಂಕಿಸಿದ್ದ ಪೊಲೀಸರು ಕಳೆದ ಸೆ 18-19ರಂದು ವಾರಣಾಸಿಯಲ್ಲಿ ಸಿಆರ್‌ಪಿಸಿಯ ಸೆಕ್ಷನ್ 144 ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಿದ್ದರು. ಎರಡೂ ಸಮುದಾಯಗಳ ಜನರು ವಾಸಿಸುವ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿತ್ತು.

‘ಜ್ಞಾನವಾಪಿ ಮಸೀದಿಯು ವಕ್ಫ್​ ಸುಪರ್ದಿಯಲ್ಲಿರುವ ಆಸ್ತಿಯಾಗಿದೆ. ಪೂಜಾಸ್ಥಳಗಳ ಕಾಯ್ದೆ 1991ರ ಪ್ರಕಾರ ಯಥಾಸ್ಥಿತಿ ಕಾಯ್ದುಕೊಳ್ಳಬೇಕಿದೆ’ ಎಂದು ಮುಸ್ಲಿಮರ ಪರ ವಕೀಲರು ವಾದಿಸಿದ್ದರು. ಇದನ್ನು ಆಕ್ಷೇಪಿಸಿದ್ದ ಹಿಂದೂಗಳ ಪರ ವಕೀಲ ಮದನ್ ಮೋಹನ್ ಯಾದವ್, ‘ದೇಗುಲವನ್ನು ಕೆಡವಿ, ಅದೇ ಜಾಗದಲ್ಲಿ ಮಸೀದಿ ನಿರ್ಮಿಸಲಾಗಿದೆ’ ಎಂದು ವಾದಿಸಿದ್ದರು.

ಸುಪ್ರೀಂಕೋರ್ಟ್ ಸೂಚನೆಯ ನಂತರ ಜಿಲ್ಲಾ ನ್ಯಾಯಾಲಯವು ಪ್ರಕರಣದ ಮರುವಿಚಾರಣೆ ಆರಂಭಿಸಿತ್ತು. ಇದಕ್ಕೂ ಮೊದಲು ಸಿವಿಲ್ ನ್ಯಾಯಾಲಯವು ಮಸೀದಿ ಸಮುಚ್ಚಯದ ವಿಡಿಯೊ ಸಮೀಕ್ಷೆಗೆ ಸೂಚನೆ ನೀಡಿತ್ತು. ಮೇ 16ರಂದು ಸಮೀಕ್ಷೆ ಮುಕ್ತಾಯವಾಗಿತ್ತು. ಮೇ 19ರಂದು ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಯಿತು. ವಿಡಿಯೊ ಸಮೀಕ್ಷೆ ವೇಳೆ ಮಸೀದಿ ಸಮುಚ್ಚಯದ ಒಳಗೆ ಶಿವಲಿಂಗದ ಆಕೃತಿ ಕಂಡು ಬಂದಿತ್ತು ಎಂದು ಹಿಂದೂ ಪರ ವಕೀಲರು ಹೇಳಿದ್ದು. ಅದು ಶಿವಲಿಂಗ ಅಲ್ಲ, ಕಾರಂಜಿ ವ್ಯವಸ್ಥೆ ಎಂದು ಮಸೀದಿ ಪರ ವಕೀಲರು ಆಕ್ಷೇಪಿಸಿದ್ದರು.

Published On - 10:50 am, Thu, 22 September 22

ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!