AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜ್ಞಾನವಾಪಿ ಮಸೀದಿಯ 3ನೇ ದಿನದ ಸಮೀಕ್ಷೆ ಮುಕ್ತಾಯ, ವಿಗ್ರಹಗಳ ಅವಶೇಷಗಳು ಪತ್ತೆ

Gyanvapi Mosque Survey: ಜ್ಞಾನವಾಪಿ ಮಸೀದಿಯ ಪುರಾತತ್ವ ಇಲಾಖೆಯ ಸಮೀಕ್ಷೆ ಮೂರನೇ ದಿನಕ್ಕೆ ಕಾಲಿಟ್ಟಿದೆ. ಎಎಸ್​ಐ ತಂಡವು ಇಂದಿನ ಸಮೀಕ್ಷೆ ಕಾರ್ಯವನ್ನು ಪೂರ್ಣಗೊಳಿಸಿತ್ತು, ಮೂರು ವಿಗ್ರಹಗಳು ದೊರೆತಿವೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಜ್ಞಾನವಾಪಿ ಮಸೀದಿಯ 3ನೇ ದಿನದ ಸಮೀಕ್ಷೆ ಮುಕ್ತಾಯ, ವಿಗ್ರಹಗಳ ಅವಶೇಷಗಳು ಪತ್ತೆ
ಜ್ಞಾನವಾಪಿ ಮಸೀದಿ
ನಯನಾ ರಾಜೀವ್
|

Updated on:Aug 06, 2023 | 11:51 AM

Share

ಜ್ಞಾನವಾಪಿ ಮಸೀದಿ(Gyanvapi Mosque)ಯ ಪುರಾತತ್ವ ಇಲಾಖೆಯ ಸಮೀಕ್ಷೆ ಮೂರನೇ ದಿನಕ್ಕೆ ಕಾಲಿಟ್ಟಿದೆ. ಎಎಸ್​ಐ ತಂಡವು ಇಂದಿನ ಸಮೀಕ್ಷೆ ಕಾರ್ಯವನ್ನು ಪೂರ್ಣಗೊಳಿಸಿತ್ತು, ಮೂರು ವಿಗ್ರಹಗಳು ದೊರೆತಿವೆ ಎನ್ನುವ ಮಾಹಿತಿ ಲಭ್ಯವಾಗಿದೆ. ಶನಿವಾರದಂದು, 17 ನೇ ಶತಮಾನದ ಮಸೀದಿಯನ್ನು ಮೊದಲೇ ಅಸ್ತಿತ್ವದಲ್ಲಿರುವ ಹಿಂದೂ ದೇವಾಲಯದ ರಚನೆಯ ಮೇಲೆ ನಿರ್ಮಿಸಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳಲು ವೈಜ್ಞಾನಿಕ ಸಮೀಕ್ಷೆ ಪುನರಾರಂಭವಾಯಿತು. ASI ತಂಡವು ಮಧ್ಯಾಹ್ನದ ಸುಮಾರಿಗೆ ಸಮೀಕ್ಷೆಯನ್ನು ವಿರಾಮಗೊಳಿಸಿತು, ಮುಸ್ಲಿಮರಿಗೆ ಮಸೀದಿಯಲ್ಲಿ ಪ್ರಾರ್ಥನೆ ಮಾಡಲು ಅನುಮತಿ ನೀಡಿತು ಮತ್ತು ಮಧ್ಯಾಹ್ನ 2.30 ಕ್ಕೆ ಅದನ್ನು ಪುನರಾರಂಭಿಸಿತು.

ಈ ನಡುವೆ, ದೇವಾಲಯದ ಕಡೆಯವರು ಗುಮ್ಮಟದ ಕೆಳಗಿರುವ ಕೊಠಡಿಯನ್ನು ಜಿಪಿಆರ್ ಪರೀಕ್ಷೆಗೆ ಒತ್ತಾಯಿಸಿದ್ದಾರೆ. ಇದು ಮುಖ್ಯ ಗುಮ್ಮಟದ ಅಡಿಯಲ್ಲಿರುವ ಆದಿ ವಿಶ್ವೇಶ್ವರ ದೇವಸ್ಥಾನದ ಗರ್ಭಗುಡಿಯಾಗಿದೆ. ಇದರಿಂದ ಅಲ್ಲಿ ಏನಿದೆ ಎಂಬುದು ಸ್ಪಷ್ಟವಾಗುತ್ತದೆ. ಎಎಸ್‌ಐ ತಂಡವು ಜ್ಞಾನವಾಪಿಯಲ್ಲಿ ಬೆಳಗ್ಗೆ 8.00 ಗಂಟೆಯಿಂದ ಸರ್ವೆ ಕಾರ್ಯವನ್ನು ನಡೆಸುತ್ತಿದೆ. ಹಿಂದೂ ಪರ ವಕೀಲರಾದ ವಿಷ್ಣು ಶಂಕರ್ ಜೈನ್ ಮತ್ತು ಸುಧೀರ್ ತ್ರಿಪಾಠಿ ಕೂಡ ಜ್ಞಾನವಾಪಿ ಮಸೀದಿಗೆ ಬಂದಿದ್ದರು.

ಮತ್ತಷ್ಟು ಓದಿ: Gyanvapi Mosque: ವಾರಾಣಸಿ ಜ್ಞಾನವಾಪಿ ಮಸೀದಿ ವೈಜ್ಞಾನಿಕ ಸಮೀಕ್ಷೆಗೆ ತಾತ್ಕಾಲಿಕ ತಡೆ

ವಾರಾಣಸಿ ನ್ಯಾಯಾಲಯವು ಸೆಪ್ಟೆಂಬರ್ 2 ರೊಳಗೆ ಸಮೀಕ್ಷೆಯ ವರದಿಯನ್ನು ಸಲ್ಲಿಸುವಂತೆ ಎಎಸ್‌ಐಗೆ ಸೂಚಿಸಿದೆ. ಈ ಹಿಂದೆ ಸರ್ಕಾರಿ ವಕೀಲರು ಎಎಸ್‌ಐಗೆ ಸಮೀಕ್ಷೆ ಪೂರ್ಣಗೊಳಿಸಿ ವರದಿ ಸಲ್ಲಿಸಲು ನಾಲ್ಕು ವಾರಗಳ ಕಾಲಾವಕಾಶವನ್ನು ಕೋರಿದ್ದರು. ಈ ಸ್ಥಳದಲ್ಲಿ ಆದಿ ವಿಶ್ವೇಶ್ವರ ದೇವಸ್ಥಾನದ ಗರ್ಭಗುಡಿ ಇತ್ತು ಮತ್ತು ಅದರ ಕೆಳಗೆ ಶಿವಲಿಂಗ ಮತ್ತು ಅರ್ಘ ಸೇರಿದಂತೆ ಇತರ ಪುರಾವೆಗಳಿವೆ ಎಂದು ಅವರು ಹೇಳುತ್ತಾರೆ. ನ್ಯಾಯಾಲಯದಲ್ಲಿಯೂ ಹಲವು ಬಾರಿ ಬೇರೆ ಬೇರೆ ಸಂದರ್ಭಗಳಲ್ಲಿ ಪ್ರಸ್ತಾಪವಾಗಿದೆ.

ಇಡೀ ಜ್ಞಾನವಾಪಿ ಕ್ಯಾಂಪಸ್‌ನಲ್ಲಿ ಸಮೀಕ್ಷೆ ನಡೆಸಬೇಕೆಂಬ ಬೇಡಿಕೆಗೆ ಇದು ಪ್ರಮುಖ ಕಾರಣವಾಗಿದೆ. ದೇವಸ್ಥಾನದ ಪರ ವಕೀಲರಾದ ಸುಧೀರ್ ತ್ರಿಪಾಠಿ ಮತ್ತು ಸುಭಾಸ್ನಂದನ್ ಚತುರ್ವೇದಿ ಅವರ ಪ್ರಕಾರ, ಇತಿಹಾಸಕಾರ ಜೇಮ್ಸ್ ಪ್ರಿನ್ಸೆಪ್ ಅವರು ತಮ್ಮ ಪುಸ್ತಕದಲ್ಲಿ ಅಷ್ಟಭುಜಾಕೃತಿಯ ಆದಿ ವಿಶ್ವೇಶ್ವರ ದೇವಸ್ಥಾನದ ನಕ್ಷೆಯನ್ನು ತೋರಿಸಿದ್ದಾರೆ.

ಎಂಟು ಮಂಟಪ ಭೈರವ ಮಂಟಪ, ಐಶ್ವರ್ಯ ಮಂಟಪ, ಶೃಂಗಾರ ಮಂಟಪ, ದಂಡಪಾಣಿ ಮಂಟಪ, ಗಣೇಶ ಮಂಟಪ, ಮುಕ್ತಿ ಮಂಟಪ, ತಾರಕೇಶ್ವರ ಮಂಟಪ, ಜ್ಞಾನ ಮಂಟಪಗಳಿದ್ದವು. ಇವುಗಳ ಮಧ್ಯದಲ್ಲಿ ದೇವಾಲಯದ ಗರ್ಭಗುಡಿ ಇತ್ತು, ಅದರಲ್ಲಿ ಆದಿ ವಿಶ್ವೇಶ್ವರನ ಶಿವಲಿಂಗವಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:50 am, Sun, 6 August 23

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ