AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gyanvapi Mosque: ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆಗೆ ಅಲಹಾಬಾದ್ ಹೈಕೋರ್ಟ್​ ಅನುಮತಿ

ವಾರಾಣಸಿಯ ಜ್ಞಾನವಾಪಿ ಮಸೀದಿ(Gyanvapi Mosque)ಯಯ ವೈಜ್ಞಾನಿಕ ಸಮೀಕ್ಷೆಗೆ ಅಲಹಾಬಾದ್ ಹೈಕೋರ್ಟ್​ ಅನುಮತಿ ನೀಡಿದೆ.

Gyanvapi Mosque: ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆಗೆ ಅಲಹಾಬಾದ್ ಹೈಕೋರ್ಟ್​ ಅನುಮತಿ
ಜ್ಞಾನವಾಪಿ ಮಸೀದಿImage Credit source: CNBCTV18.COM
ನಯನಾ ರಾಜೀವ್
|

Updated on:Aug 04, 2023 | 7:57 AM

Share

ವಾರಾಣಸಿಯ ಜ್ಞಾನವಾಪಿ ಮಸೀದಿ(Gyanvapi Mosque)ಯಯ ವೈಜ್ಞಾನಿಕ ಸಮೀಕ್ಷೆಗೆ ಅಲಹಾಬಾದ್ ಹೈಕೋರ್ಟ್​ ಅನುಮತಿ ನೀಡಿದೆ. ವಾರಾಣಸಿಯ ಜ್ಞಾನವಾಪಿ ಮಸೀದಿಯಲ್ಲಿ ಎಎಸ್‌ಐ ಸಮೀಕ್ಷೆಗೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದೆ.. ಅಲಹಾಬಾದ್ ಹೈಕೋರ್ಟ್ ಜುಲೈ 27 ರಂದು ಎರಡೂ ಕಡೆಯ ವಿಚಾರಣೆಯ ನಂತರ ತೀರ್ಪನ್ನು ಕಾಯ್ದಿರಿಸಿತ್ತು. ಇದೀಗ ತೀರ್ಪು ಹೊರಬಂದಿದ್ದು, ವೈಜ್ಞಾನಿಕ ಸಮೀಕ್ಷೆಗೆ ಕೋರ್ಟ್​ ಸಮ್ಮತಿ ನೀಡಿದೆ.

ಹೈಕೋರ್ಟ್​ ಜಿಲ್ಲಾ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದಿದೆ, ಸರ್ವೆ ನಡೆಸಲು ಪುರಾತತ್ವ ಇಲಾಖೆಗೆ ಅನುಮತಿ ನೀಡಿ ತೀರ್ಪು ನೀಡಿದೆ. ಸರ್ವೆಗೆ ತಡೆ ನೀಡುವಂತೆ ಕೋರಿದ್ದ ಮಸೀದಿ ಮಂಡಳಿ ಅರ್ಜಿ ವಜಾಗೊಳಿಸಿದೆ. ಹಲವು ಷರತ್ತು ವಿಧಿಸಿ ಸರ್ವೆ ನಡೆಸಲು ಅನುಮತಿ ನೀಡಲಾಗಿದೆ.

ಜ್ಞಾನವಾಪಿ ಮಸೀದಿ ಸಂಕೀರ್ಣದ ಎಎಸ್‌ಐ ಸಮೀಕ್ಷೆಯನ್ನು ಪ್ರಾರಂಭಿಸಲಾಗುವುದು ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ. ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ ಎಂದು ಜ್ಞಾನವಾಪಿ ಸರ್ವೆ ಪ್ರಕರಣದಲ್ಲಿ ಹಿಂದೂ ಪರವಾಗಿ ವಿಷ್ಣು ಶಂಕರ್ ಜೈನ್ ಸುದ್ದಿಗಾರರಿಗೆ ತಿಳಿಸಿದರು.

ಮತ್ತಷ್ಟು ಓದಿ: Gyanvapi Mosque: ಜ್ಞಾನವಾಪಿ ಮಸೀದಿ ಎಎಸ್​ಐ ಸಮೀಕ್ಷೆ ಕುರಿತು ಇಂದು ಅಲಹಾಬಾದ್​ ಕೋರ್ಟ್​ನಿಂದ ಮಹತ್ವದ ತೀರ್ಪು

ಜುಲೈ 21 ರಂದು ವಾರಾಣಸಿಯ ನ್ಯಾಯಾಲಯವು ಹಿಂದೂ ದೇವಾಲಯವನ್ನು ನೆಲಸಮಗೊಳಿಸಿ ಬಳಿಕ ಹೆಗ್ಗುರುತಾಗಿರುವ ಮಸೀದಿಯನ್ನು ನಿರ್ಮಿಸಲಾಗಿದೆಯೇ ಎಂದು ನಿರ್ಧರಿಸುವ ಏಕೈಕ ಮಾರ್ಗ ಸಮೀಕ್ಷೆ ಎಂದು ನಾಲ್ವರು ಮಹಿಳೆಯರ ಅರ್ಜಿಯ ಆಧಾರದ ಮೇಲೆ ಆದೇಶ ನೀಡಿತ್ತು. ಈ ಮಸೀದಿಯು ಕಾಶಿ ವಿಶ್ವನಾಥ ದೇವಾಲಯದ ಪಕ್ಕದಲ್ಲಿಯೇ ಇದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:26 am, Thu, 3 August 23

ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು